Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಕೊಲೆ; ಸುಪಾರಿ ಕೊಟ್ಟಿದ್ದ ಸಹ ಶಿಕ್ಷಕ, ಹಂತಕರು ಅರೆಸ್ಟ್​

ಮೈಸೂರು: ಸಂಸ್ಕೃತ ಶಾಲೆಯ ಪ್ರಾಂಶುಪಾಲರನ್ನು ಹತ್ಯೆಗೈದಿದ್ದ ಸುಪಾರಿ ಕಿಲ್ಲರ್ಸ್​ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಹಂತಕರನ್ನು ನಾಗೇಶ್ (37), ನಿರಂಜನ್ (22), ಸಿದ್ದರಾಜು (54), ವಿಶ್ವನಾಥ್ (52) ಹಾಗೂ ಪರಶಿವ (55) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 55 ಸಾವಿರ ನಗದು, ನಾಲ್ಕು ದ್ವಿಚಕ್ರ ವಾಹನ, ಟಾಟಾ ಏಸ್ ಗೂಡ್ಸ್ ವಾಹನ, 8 ಮೊಬೈಲ್ ಫೋನ್ ಮತ್ತು 2 ಚಾಕುಗಳನ್ನು ವಶಕ್ಕೆ ಪಡೆಯಲಾಗಿದೆ. ಸೆಪ್ಟಂಬರ್ 29ರಂದು ಪ್ರಾಂಶುಪಾಲ ಪರಶಿವಮೂರ್ತಿ ಎಂಬುವವರ ಹತ್ಯೆಯಾಗಿತ್ತು. […]

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಕೊಲೆ; ಸುಪಾರಿ ಕೊಟ್ಟಿದ್ದ ಸಹ ಶಿಕ್ಷಕ, ಹಂತಕರು ಅರೆಸ್ಟ್​
Follow us
KUSHAL V
|

Updated on:Oct 28, 2020 | 11:03 AM

ಮೈಸೂರು: ಸಂಸ್ಕೃತ ಶಾಲೆಯ ಪ್ರಾಂಶುಪಾಲರನ್ನು ಹತ್ಯೆಗೈದಿದ್ದ ಸುಪಾರಿ ಕಿಲ್ಲರ್ಸ್​ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಹಂತಕರನ್ನು ನಾಗೇಶ್ (37), ನಿರಂಜನ್ (22), ಸಿದ್ದರಾಜು (54), ವಿಶ್ವನಾಥ್ (52) ಹಾಗೂ ಪರಶಿವ (55) ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 55 ಸಾವಿರ ನಗದು, ನಾಲ್ಕು ದ್ವಿಚಕ್ರ ವಾಹನ, ಟಾಟಾ ಏಸ್ ಗೂಡ್ಸ್ ವಾಹನ, 8 ಮೊಬೈಲ್ ಫೋನ್ ಮತ್ತು 2 ಚಾಕುಗಳನ್ನು ವಶಕ್ಕೆ ಪಡೆಯಲಾಗಿದೆ.

ಸೆಪ್ಟಂಬರ್ 29ರಂದು ಪ್ರಾಂಶುಪಾಲ ಪರಶಿವಮೂರ್ತಿ ಎಂಬುವವರ ಹತ್ಯೆಯಾಗಿತ್ತು. ಸಂಸ್ಕೃತ ಶಾಲೆಯಲ್ಲಿ ಪ್ರಾಂಶುಪಾಲರಾದ ಪರಶಿವಮೂರ್ತಿ ಸಹ ಶಿಕ್ಷಕ ಪರಶಿವ ಎಂಬಾತನಿಗೆ ಕಿರುಕುಳ ನೀಡುತ್ತಿದ್ದರಂತೆ. ಹಣಕ್ಕಾಗಿ ಒತ್ತಾಯಯಿಟ್ಟ ಪರಶಿವಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದನೆ ಸಹ ಮಾಡುತ್ತಿದ್ದರು ಎಂದು ಪರಶಿವ ಅರೋಪಿಸಿದ್ದಾನೆ.

ಅವರ ಕಿರುಕುಳಕ್ಕೆ ಬೇಸತ್ತು ಪರಶಿವ ಪ್ರಾಂಶುಪಾಲರ ಕೊಲೆಗೆ ಸುಪಾರಿ ಕೊಟ್ಟಿದ್ದನಂತೆ. ಪರಶಿವಮೂರ್ತಿ ಮನೆಯಲ್ಲಿ ಒಂಟಿಯಾಗಿದ್ದಾಗ ಮನೆಗೆ ನುಗ್ಗಿದ ಸುಪಾರಿ ಹಂತಕರು ಕೊಲೆಗೈದು ಪರಾರಿಯಾಗಿದ್ದರು. ನಿವೇದಿತಾ ನಗರದ ಪ್ರಾಂಶುಪಾಲರ ನಿವಾಸದಲ್ಲಿ ಕೊಲೆ ಪ್ರಕರಣ ನಡೆದಿತ್ತು.

Published On - 10:56 am, Wed, 28 October 20

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ