AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ನಾಡಿನಲ್ಲಿ ದೋಖಾ: ಡಬಲ್ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಮೌಲ್ಯ ಚಿನ್ನಕ್ಕೆ ಪಂಗನಾಮ

ಮಂಡ್ಯ: ಸಕ್ಕರೆ ನಾಡಿನಲ್ಲೊಂದು ಮಹಾ ದೋಖಾ ನಡೆದಿದೆ. ಬ್ಯಾಂಕ್​ನಲ್ಲಿಟ್ಟ ಚಿನ್ನಕ್ಕೆ ಹೆಚ್ಚಿನ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಮೌಲ್ಯದ ಚಿನ್ನ ಸಂಗ್ರಹಿಸಿ ಜನರಿಗೆ ಪಂಗನಾಮ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಫೆಡ್ ಖಾಸಗಿ ಫೈನಾನ್ಸ್ ಕಂಪನಿಯ ಎಕ್ಸಿಕ್ಯುಟಿವ್​ನಿಂದ ಇಂತಹ ಮಹಾ ಮೋಸ ನಡೆದಿದೆ. ಬ್ಯಾಂಕ್ ನಲ್ಲಿ ಚಿನ್ನ ಇಟ್ಟರೆ ಹೆಚ್ಚಿನ‌ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಚಿನ್ನ ಸಂಗ್ರಹಿಸಿ ವಂಚನೆ ಮಾಡಿದ್ದ ಖತರ್ನಾಕ್ ಖದೀಮ ಸೋಮಶೇಖರ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ […]

ಸಕ್ಕರೆ ನಾಡಿನಲ್ಲಿ ದೋಖಾ: ಡಬಲ್ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಮೌಲ್ಯ ಚಿನ್ನಕ್ಕೆ ಪಂಗನಾಮ
ಆಯೇಷಾ ಬಾನು
|

Updated on:Oct 15, 2020 | 2:12 PM

Share

ಮಂಡ್ಯ: ಸಕ್ಕರೆ ನಾಡಿನಲ್ಲೊಂದು ಮಹಾ ದೋಖಾ ನಡೆದಿದೆ. ಬ್ಯಾಂಕ್​ನಲ್ಲಿಟ್ಟ ಚಿನ್ನಕ್ಕೆ ಹೆಚ್ಚಿನ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಮೌಲ್ಯದ ಚಿನ್ನ ಸಂಗ್ರಹಿಸಿ ಜನರಿಗೆ ಪಂಗನಾಮ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಫೆಡ್ ಖಾಸಗಿ ಫೈನಾನ್ಸ್ ಕಂಪನಿಯ ಎಕ್ಸಿಕ್ಯುಟಿವ್​ನಿಂದ ಇಂತಹ ಮಹಾ ಮೋಸ ನಡೆದಿದೆ.

ಬ್ಯಾಂಕ್ ನಲ್ಲಿ ಚಿನ್ನ ಇಟ್ಟರೆ ಹೆಚ್ಚಿನ‌ ಬಡ್ಡಿ ಕೊಡಿಸುವುದಾಗಿ ಹೇಳಿ 20 ಕೋಟಿ ಚಿನ್ನ ಸಂಗ್ರಹಿಸಿ ವಂಚನೆ ಮಾಡಿದ್ದ ಖತರ್ನಾಕ್ ಖದೀಮ ಸೋಮಶೇಖರ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಗುತ್ತಲು ಬಡಾವಣೆಯ ನಿವಾಸಿ. ಈತ ನಮ್ಮ ಬ್ಯಾಂಕ್​ನಲ್ಲಿ ಚಿನ್ನ ಇಟ್ಟರೆ ವಾರಕ್ಕೆ 20%, ತಿಂಗಳಿಗೆ 40% ಬಡ್ಡಿ ಸಿಗುತ್ತೆ ಎಂದು ಆಮಿಷವೊಡ್ಡುತ್ತಿದ್ದ.

ಹೆಚ್ಚಾಗಿ ಮಹಿಳೆಯರು ಮತ್ತು ಮಂಗಳಮುಖಿಯರನ್ನೇ ಟಾರ್ಗೆಟ್ ಮಾಡ್ತಿದ್ದ. ಹೆಚ್ಚಿನ ಬಡ್ಡಿ ಸಿಗುತ್ತೆ ಎಂಬ ಆಮಿಷಕ್ಕೆ ಒಳಗಾಗಿ ಗ್ರಾಹಕರು ಚಿನ್ನ ಕಳೆದುಕೊಂಡಿದ್ದಾರೆ. ಸತ್ಯ ತಿಳಿಯುತ್ತಿದ್ದಂತೆ ಮಂಗಳಮುಖಿಯೊಬ್ಬರು ಮಂಡ್ಯ ಠಾಣೆಯಲ್ಲಿ ದೂರು ದಾಖಲಿಸಿದ್ರು. ತನಿಖೆ ಶುರು ಮಾಡಿದ ಪೊಲೀಸರಿಂದ ಸುಮಾರು 20 ಕೋಟಿ ವಂಚನೆ ಪ್ರಕರಣ ಬಯಲಾಗಿದೆ. ಸದ್ಯ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Published On - 1:59 pm, Thu, 15 October 20

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ