AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ, ಕೆಲಸ ಮಾಡ್ತಿದ್ದ ಸ್ಥಳಕ್ಕೆ ಬಂದು ಯುವತಿಯ ಬಟ್ಟೆ ಹರಿದ.. ಟಾರ್ಚರ್ ಕೊಟ್ಟ ಖದೀಮ ಬಂಧನ

ಶ್ರವಣ್‌ಕುಮಾರ್ ಎಂಬ ವ್ಯಕ್ತಿ ತನಗೆ ಮಾರಣಾಂತಿಕ ಕಾಯಿಲೆ ಇದೆ. ಹೆಚ್ಚು ದಿನ ಬದುಕುವುದಿಲ್ಲ ಎಂದು ನಂಬಿಸಿ ಸಿಂಪತಿಯನ್ನು ಹುಟ್ಟಿಸಿ ಫೇಸ್ ಬುಕ್​ನಲ್ಲಿ ಯುವತಿಯ ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಯ ನಂಬರ್ ಪಡೆದು ಸಲಿಗೆ ಬೆಳಸಿ ಪರಿಚಯವಾದ ಸ್ವಲ್ಪ ದಿನದ ನಂತರ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಲು ಶುರು ಮಾಡಿದ್ದ.

ಫೇಸ್​ಬುಕ್​ನಲ್ಲಿ ಸ್ನೇಹ ಬೆಳೆಸಿ, ಕೆಲಸ ಮಾಡ್ತಿದ್ದ ಸ್ಥಳಕ್ಕೆ ಬಂದು ಯುವತಿಯ ಬಟ್ಟೆ ಹರಿದ.. ಟಾರ್ಚರ್ ಕೊಟ್ಟ ಖದೀಮ ಬಂಧನ
ಶ್ರವಣ್‌ಕುಮಾರ್
ಆಯೇಷಾ ಬಾನು
| Edited By: |

Updated on:Feb 02, 2021 | 10:10 AM

Share

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಯುವತಿಯ ಪರಿಚಯ ಮಾಡಿಕೊಂಡು ಆಕೆಗೆ ಕಿರುಕುಳ ನೀಡಿರುವ ಘಟನೆ ನಗರದಲ್ಲಿ ನಡೆದಿದ್ದು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಶ್ರವಣ್‌ಕುಮಾರ್ ಬಂಧಿತ ವ್ಯಕ್ತಿ.

ಘಟನೆ ಹಿನ್ನೆಲೆ ಶ್ರವಣ್‌ಕುಮಾರ್ ಎಂಬ ವ್ಯಕ್ತಿ ತನಗೆ ಮಾರಣಾಂತಿಕ ಕಾಯಿಲೆ ಇದೆ. ಹೆಚ್ಚು ದಿನ ಬದುಕುವುದಿಲ್ಲ ಎಂದು ನಂಬಿಸಿ ಸಿಂಪತಿಯನ್ನು ಹುಟ್ಟಿಸಿ ಫೇಸ್ ಬುಕ್​ನಲ್ಲಿ ಯುವತಿಯ ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಯ ನಂಬರ್ ಪಡೆದು ಸಲಿಗೆ ಬೆಳಸಿ ಪರಿಚಯವಾದ ಸ್ವಲ್ಪ ದಿನದ ನಂತರ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಲು ಶುರು ಮಾಡಿದ್ದ. ತನ್ನ ಜೊತೆ ಒಂದು ರಾತ್ರಿ ಕಳೆಯುವಂತೆ ಟಾರ್ಚರ್ ಮಾಡಿದ್ದ. ನೊಂದ ಯುವತಿ ಶ್ರವಣ್​ಗೆ ಬುದ್ಧಿ ಹೇಳಿದರೂ ಕೇಳದೆ ಕಿರುಕುಳ ನೀಡಿದ್ದಾನೆ. ಕೊನೆಗೆ ಬೇಸತ್ತ ಯುವತಿ ಆತನ ನಂಬರ್ ಬ್ಲಾಕ್ ಮಾಡಿದ್ಳು.

ಆದ್ರೂ ಟಾರ್ಚರ್ ನಿಂತಿಲ್ಲ. ಬ್ಲಾಕ್‌ ಲಿಸ್ಟ್‌ನಿಂದ ತನ್ನ ನಂಬರ್ ರಿಮೂವ್ ಮಾಡುವಂತೆ ಮತ್ತೆ ಕಿರುಕುಳ ನೀಡಿದ್ದಾನೆ. ಯುವತಿ ಕೆಲಸ ಮಾಡ್ತಿದ್ದ ಸ್ಥಳಕ್ಕೆ ತೆರಳಿ ಆಕೆಯ ಬಟ್ಟೆ ಹರಿದು ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಶ್ರವಣ್‌ ಕುಮಾರ್ ವಿರುದ್ಧ ಯುವತಿ ಅನ್ನಪೂರ್ಣೇಶ್ವರಿ ನಗರ ಠಾಣೆಗೆ‌ ದೂರು ನೀಡಿದ್ದಾಳೆ. ದೂರು ಆಧರಿಸಿ ಪೊಲೀಸರು ಶ್ರವಣ್​ನನ್ನು ಬಂಧಿಸಿದ್ದಾರೆ.

ಫೇಸ್​ಬುಕ್​ ಪರಿಚಯ: 35 ವರ್ಷದ ಪುರುಷನನ್ನು ಮದುವೆಯಾದ 81 ವರ್ಷ ವಯಸ್ಸಿನ ಅಜ್ಜಿ!

Published On - 8:14 am, Tue, 2 February 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ