AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಟ್ರಾಪ್ ಜಾಲಕ್ಕೆ ಬಿದ್ದ ಮೈಸೂರಿನ ವೈದ್ಯ! ಕಿರಾತಕರು ಸುಲಿದ ಹಣವೆಷ್ಟು ಗೊತ್ತಾ?

ಮೈಸೂರು: ಯುವತಿಯನ್ನ ಬಳಸಿಕೊಂಡು ಹಣ ವಸೂಲಿಗೆ ಇಳಿದಿದ್ದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನವೀನ್, ಶಿವರಾಜು,ಹರೀಶ್, ವಿಜಿ ಮತ್ತು ಅನಿತಾ ಎಂಬುವವರು ಬಂಧಿತ ಆರೋಪಿಗಳಾಗಿದ್ದು, ಈ ನಾಲ್ವರೂ ಮೈಸೂರಿನ ಪಿರಿಯಾಪಟ್ಟಣ ನಿವಾಸಿಗಳು. ಅನಿತಾ ಎಂಬ ಯುವತಿಯನ್ನು ಬಳಸಿಕೊಂಡು ಹನಿಟ್ರಾಪ್​ಗೆ ಯತ್ನಿಸಿದ್ದ ಈ ತಂಡ ಮೈಸೂರಿನ ಖಾಸಗಿ ವೈದ್ಯರೊಬ್ಬರನ್ನ ಹನಿಟ್ರಾಪ್ ಜಾಲಕ್ಕೆ ಬೀಳಿಸಿದ್ದರು. ಯುವತಿ ಹಾಗೂ 4 ಮಂದಿ ಆರೋಪಿಗಳು ಸದರಿ ಖಾಸಗಿ ವೈದ್ಯರ ಬಳಿ ಒಂದು ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಸದರಿ […]

ಹನಿಟ್ರಾಪ್ ಜಾಲಕ್ಕೆ ಬಿದ್ದ ಮೈಸೂರಿನ ವೈದ್ಯ! ಕಿರಾತಕರು ಸುಲಿದ ಹಣವೆಷ್ಟು ಗೊತ್ತಾ?
ಪೃಥ್ವಿಶಂಕರ
|

Updated on:Nov 20, 2020 | 10:34 AM

Share

ಮೈಸೂರು: ಯುವತಿಯನ್ನ ಬಳಸಿಕೊಂಡು ಹಣ ವಸೂಲಿಗೆ ಇಳಿದಿದ್ದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನವೀನ್, ಶಿವರಾಜು,ಹರೀಶ್, ವಿಜಿ ಮತ್ತು ಅನಿತಾ ಎಂಬುವವರು ಬಂಧಿತ ಆರೋಪಿಗಳಾಗಿದ್ದು, ಈ ನಾಲ್ವರೂ ಮೈಸೂರಿನ ಪಿರಿಯಾಪಟ್ಟಣ ನಿವಾಸಿಗಳು. ಅನಿತಾ ಎಂಬ ಯುವತಿಯನ್ನು ಬಳಸಿಕೊಂಡು ಹನಿಟ್ರಾಪ್​ಗೆ ಯತ್ನಿಸಿದ್ದ ಈ ತಂಡ ಮೈಸೂರಿನ ಖಾಸಗಿ ವೈದ್ಯರೊಬ್ಬರನ್ನ ಹನಿಟ್ರಾಪ್ ಜಾಲಕ್ಕೆ ಬೀಳಿಸಿದ್ದರು. ಯುವತಿ ಹಾಗೂ 4 ಮಂದಿ ಆರೋಪಿಗಳು ಸದರಿ ಖಾಸಗಿ ವೈದ್ಯರ ಬಳಿ ಒಂದು ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.

ಸದರಿ ಖಾಸಗಿ ವೈದ್ಯ, ಯುವತಿಯೊಂದಿಗೆ ಇರುವ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಕೊಂಡು.. ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದರು. ಹಣ ನೀಡದಿದ್ದರೆ ವಿಡಿಯೋವನ್ನ ಸಾಮಾಜಿಕ ಜಾಲತಾಣಕ್ಕೆ ಹಂಚುವ ಬೆದರಿಕೆ ಹಾಕಿದ್ದ ಖದೀಮರು, ಈವರೆಗೆ ಸದರಿ ಖಾಸಗಿ ವೈದ್ಯರಿಂದ 31 ಲಕ್ಷದ 30 ಸಾವಿರ ರೂಪಾಯಿಯನ್ನು ಪೀಕಿದ್ದಾರೆ.

ಸದರಿ ಖಾಸಗಿ ವೈದ್ಯ ಪಿರಿಯಾಪಟ್ಟಣದಲ್ಲಿ ವಾಸವಿದ್ದಾಗ ಈ ಘಟನೆ ನಡೆದಿದೆ. ಹಾಗಾಗಿ 2019 ಡಿಸೆಂಬರ್‌ನಿಂದ 2020 ಅಕ್ಟೋಬರ್ ತಿಂಗಳವರೆಗೂ ಬಾಬು ಬಳಿ ಹಣ ವಸೂಲಿ ಮಾಡಿದ್ದಾರೆ. ಪಿರಿಯಾಪಟ್ಟಣ ಬಿಟ್ಟು ಮೈಸೂರು ನಗರಕ್ಕೆ ಬಂದ ಸದರಿ ಖಾಸಗಿ ವೈದ್ಯ ಮೈಸೂರಿನ ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಹನಿಟ್ರ್ಯಾಪ್​ಗೆ ಬಳಕೆಯಾಗಿದ್ದ ಯುವತಿ ಸೇರಿದಂತೆ 5 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

Published On - 10:32 am, Fri, 20 November 20

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!