Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಟ್ರಾಪ್ ಜಾಲಕ್ಕೆ ಬಿದ್ದ ಮೈಸೂರಿನ ವೈದ್ಯ! ಕಿರಾತಕರು ಸುಲಿದ ಹಣವೆಷ್ಟು ಗೊತ್ತಾ?

ಮೈಸೂರು: ಯುವತಿಯನ್ನ ಬಳಸಿಕೊಂಡು ಹಣ ವಸೂಲಿಗೆ ಇಳಿದಿದ್ದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನವೀನ್, ಶಿವರಾಜು,ಹರೀಶ್, ವಿಜಿ ಮತ್ತು ಅನಿತಾ ಎಂಬುವವರು ಬಂಧಿತ ಆರೋಪಿಗಳಾಗಿದ್ದು, ಈ ನಾಲ್ವರೂ ಮೈಸೂರಿನ ಪಿರಿಯಾಪಟ್ಟಣ ನಿವಾಸಿಗಳು. ಅನಿತಾ ಎಂಬ ಯುವತಿಯನ್ನು ಬಳಸಿಕೊಂಡು ಹನಿಟ್ರಾಪ್​ಗೆ ಯತ್ನಿಸಿದ್ದ ಈ ತಂಡ ಮೈಸೂರಿನ ಖಾಸಗಿ ವೈದ್ಯರೊಬ್ಬರನ್ನ ಹನಿಟ್ರಾಪ್ ಜಾಲಕ್ಕೆ ಬೀಳಿಸಿದ್ದರು. ಯುವತಿ ಹಾಗೂ 4 ಮಂದಿ ಆರೋಪಿಗಳು ಸದರಿ ಖಾಸಗಿ ವೈದ್ಯರ ಬಳಿ ಒಂದು ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಸದರಿ […]

ಹನಿಟ್ರಾಪ್ ಜಾಲಕ್ಕೆ ಬಿದ್ದ ಮೈಸೂರಿನ ವೈದ್ಯ! ಕಿರಾತಕರು ಸುಲಿದ ಹಣವೆಷ್ಟು ಗೊತ್ತಾ?
Follow us
ಪೃಥ್ವಿಶಂಕರ
|

Updated on:Nov 20, 2020 | 10:34 AM

ಮೈಸೂರು: ಯುವತಿಯನ್ನ ಬಳಸಿಕೊಂಡು ಹಣ ವಸೂಲಿಗೆ ಇಳಿದಿದ್ದ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನವೀನ್, ಶಿವರಾಜು,ಹರೀಶ್, ವಿಜಿ ಮತ್ತು ಅನಿತಾ ಎಂಬುವವರು ಬಂಧಿತ ಆರೋಪಿಗಳಾಗಿದ್ದು, ಈ ನಾಲ್ವರೂ ಮೈಸೂರಿನ ಪಿರಿಯಾಪಟ್ಟಣ ನಿವಾಸಿಗಳು. ಅನಿತಾ ಎಂಬ ಯುವತಿಯನ್ನು ಬಳಸಿಕೊಂಡು ಹನಿಟ್ರಾಪ್​ಗೆ ಯತ್ನಿಸಿದ್ದ ಈ ತಂಡ ಮೈಸೂರಿನ ಖಾಸಗಿ ವೈದ್ಯರೊಬ್ಬರನ್ನ ಹನಿಟ್ರಾಪ್ ಜಾಲಕ್ಕೆ ಬೀಳಿಸಿದ್ದರು. ಯುವತಿ ಹಾಗೂ 4 ಮಂದಿ ಆರೋಪಿಗಳು ಸದರಿ ಖಾಸಗಿ ವೈದ್ಯರ ಬಳಿ ಒಂದು ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.

ಸದರಿ ಖಾಸಗಿ ವೈದ್ಯ, ಯುವತಿಯೊಂದಿಗೆ ಇರುವ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಕೊಂಡು.. ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದರು. ಹಣ ನೀಡದಿದ್ದರೆ ವಿಡಿಯೋವನ್ನ ಸಾಮಾಜಿಕ ಜಾಲತಾಣಕ್ಕೆ ಹಂಚುವ ಬೆದರಿಕೆ ಹಾಕಿದ್ದ ಖದೀಮರು, ಈವರೆಗೆ ಸದರಿ ಖಾಸಗಿ ವೈದ್ಯರಿಂದ 31 ಲಕ್ಷದ 30 ಸಾವಿರ ರೂಪಾಯಿಯನ್ನು ಪೀಕಿದ್ದಾರೆ.

ಸದರಿ ಖಾಸಗಿ ವೈದ್ಯ ಪಿರಿಯಾಪಟ್ಟಣದಲ್ಲಿ ವಾಸವಿದ್ದಾಗ ಈ ಘಟನೆ ನಡೆದಿದೆ. ಹಾಗಾಗಿ 2019 ಡಿಸೆಂಬರ್‌ನಿಂದ 2020 ಅಕ್ಟೋಬರ್ ತಿಂಗಳವರೆಗೂ ಬಾಬು ಬಳಿ ಹಣ ವಸೂಲಿ ಮಾಡಿದ್ದಾರೆ. ಪಿರಿಯಾಪಟ್ಟಣ ಬಿಟ್ಟು ಮೈಸೂರು ನಗರಕ್ಕೆ ಬಂದ ಸದರಿ ಖಾಸಗಿ ವೈದ್ಯ ಮೈಸೂರಿನ ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಹನಿಟ್ರ್ಯಾಪ್​ಗೆ ಬಳಕೆಯಾಗಿದ್ದ ಯುವತಿ ಸೇರಿದಂತೆ 5 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

Published On - 10:32 am, Fri, 20 November 20

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್