AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

ಈವರೆಗೆ ಈ ಕೇಸ್ ಸಂಬಂಧ ಮೂವರನ್ನು ಬಂಧಿಸಿದ್ದು, ಲಾಕ್​ಡೌನ್ ವೇಳೆಯಿಂದ ಖೋಟಾನೋಟು ತಯಾರಿ ಆರಂಭಿಸಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾರೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
sandhya thejappa
| Edited By: |

Updated on: Dec 26, 2020 | 4:31 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಖೋಟಾನೋಟುಗಳ ಮದ್ರಣ ಜಾಲ ಪತ್ತೆ ಆಗಿದೆ. ಈ ನೋಟುಗಳನ್ನು ಚಲಾವಣೆಗೆ ಯತ್ನಿಸಿದ ವ್ಯಕ್ತಿ ಸೇರಿ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಲಾಕ್​ಡೌನ್ ವೇಳೆಯಿಂದ ಖೋಟಾನೋಟು ತಯಾರಿ ಆರಂಭಿಸಿದ್ದಾಗಿ ಬಂಧಿತರು ತಪ್ಪು ಒಪ್ಪಿಕೊಂಡಿದ್ದಾರೆ.  ಇಬ್ಬರನ್ನು ಪೊಲೀಸರು  ನ್ಯಾಯಾಲಯಕ್ಕೆ ಕರೆದೊಯ್ದು ನ್ಯಾಯಾಧೀಶರ​ ಮುಂದೆ ಹಾಜರುಪಡಿಸಿದ್ದಾರೆ.

ಆಟೋ ಚಾಲಕನಿಂದ ಬಣ್ಣ ಬಯಲು ಆಟೋದಲ್ಲಿ ತೆರಳುತ್ತಿದ್ದ ಜಮಾಲ್ ಎಂಬುವವನು ಖೋಟಾನೋಟನ್ನು ಆಟೋ ಚಾಲಕನಿಗೆ ನೀಡಿದ್ದ. ನೋಟಿನ ಬಗ್ಗೆ ಅನುಮಾನಗೊಂಡ ಚಾಲಕ ನೋಟನ್ನು ಪೊಲೀಸ್ ಠಾಣೆಗೆ ತಂದಾಗ ಜಮಾಲ್​ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಖೋಟಾನೋಟಿನ ದಂಧೆ ಬಗ್ಗೆ ಬಾಯಿಬಿಟ್ಟ ಜಮಾಲ್ ಸೇರಿದಂತೆ ಇಮ್ರಾನ್ ಹಾಗೂ ಮುಬಾರಕ್ ಎಂಬುವರನನ್ನು ಬಂಧಿಸಿದ್ದಾರೆ.

ಪ್ರಿಂಟರ್  ಬಳಸಿ ಬಿಲ್ ಪೇಪರ್ ಮುಖಾಂತರ 100 ರೂ. ಮುಖಬೆಲೆಯ ನಕಲಿ ನೋಟು ತಯಾರಿಸುತ್ತಿದ್ದರು. ಒಂದು ಶೀಟ್​ನಲ್ಲಿ 2ರಿಂದ 3 ಖೋಟಾನೋಟುಗಳ ಮುದ್ರಣ ಮಾಡುತ್ತಿದ್ದರು. ವಿಲ್ಸನ್​ಗಾರ್ಡನ್ ಠಾಣೆ ಪಿಐ ಶಂಕರಾಚಾರಿ ನೇತೃತ್ವದಲ್ಲಿ ತನಿಖೆ ನಡೆಸಿದಾಗ ಸುಮಾರು 20 ಶೀಟ್ ಖೋಟಾನೋಟು ಪತ್ತೆಯಾಗಿದೆ.

ಪಾದರಾಯನಪುರದ ಅರಾಫತ್ ನಗರದ ನಿವಾಸಿಯಾದ ಆರೋಪಿ ಜಮಾಲ್ ಮನೆಯಲ್ಲಿ ಪ್ರಿಂಟರ್ ಬಳಸಿ 100 ರೂ. ಮುಖಬೆಲೆಯ ನಕಲಿ ನೋಟುಗಳು ತಯಾರಿಸುತ್ತಿದ್ದರು. ಸದ್ಯ ವಿಲ್ಸನ್ ಗಾರ್ಡನ್ ಪೊಲೀಸರು ಅರಾಫತ್ ನಗರದಲ್ಲಿ ದಾಳಿ ಮುಂದುವರೆಸಿದ್ದು, ಈವರೆಗೂ ಎಷ್ಟು ಖೋಟಾ ನೋಟು ತಯಾರಿಸಲಾಗಿದೆ ಎಂಬ ಲೆಕ್ಕಾಚಾರ ನಡೆಸುತ್ತಿದ್ದಾರೆ.

ಕಾಫಿನಾಡಿಗರೇ ಹುಷಾರ್! ಅಸಲಿ ನೋಟುಗಳನ್ನು ಮೀರಿಸಿ ಚಲಾವಣೆಗೆ ಬಂದಿವೆ ಖೋಟಾ ನೋಟುಗಳು..

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್