AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ: ಸಹಕರಿಸದ ಮಹಿಳೆಯನ್ನ ಕೊಂದ ಪಾಪಿ ಮಾಡಿದ್ದೇನು ಗೊತ್ತಾ?

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಒಂಟಿ ಮಹಿಳೆಯ ಮೇಲೆ ಕಣ್ಣು ಹಾಕಿದ್ದ ವಿಕೃತ ಕಾಮಿಯೋರ್ವ, ಅತ್ಯಾಚಾರಕ್ಕೆ ಸಹಕರಿಸಲಿಲ್ಲ ಅಂತಾ ಕತ್ತು ಹಿಸುಕಿ ಮಹಿಳೆಯನ್ನ ಕೊಂದು ನಂತರ ಶವದ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆದ್ರೆ ಪೊಲೀಸರು ವಿಕೃತ ಕಾಮಿಯನ್ನ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೋನಾಪುರ ಗ್ರಾಮದ 27 ವರ್ಷದ ಗೃಹಿಣಿ ಶೋಭಾ ತನ್ನ ಸ್ವಂತ ಜಮೀನಿನಲ್ಲಿ ಕಡಲೇಕಾಯಿ ಬಿಡಿಸುತ್ತಿದ್ದಳು. ಇದೇ ಸಂದರ್ಭಕ್ಕೆ ಹೊಂಚು ಹಾಕಿ ಕಾಯುತ್ತಿದ್ದ ಅದೊಬ್ಬ ವ್ಯಕ್ತಿ, ಜಮೀನಿನಲ್ಲಿದ್ದ ಒಂಟಿ ಮಹಿಳೆ ಬಳಿ ಬಂದು, […]

ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ: ಸಹಕರಿಸದ ಮಹಿಳೆಯನ್ನ ಕೊಂದ ಪಾಪಿ ಮಾಡಿದ್ದೇನು ಗೊತ್ತಾ?
ಪೃಥ್ವಿಶಂಕರ
|

Updated on: Nov 21, 2020 | 7:07 AM

Share

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಒಂಟಿ ಮಹಿಳೆಯ ಮೇಲೆ ಕಣ್ಣು ಹಾಕಿದ್ದ ವಿಕೃತ ಕಾಮಿಯೋರ್ವ, ಅತ್ಯಾಚಾರಕ್ಕೆ ಸಹಕರಿಸಲಿಲ್ಲ ಅಂತಾ ಕತ್ತು ಹಿಸುಕಿ ಮಹಿಳೆಯನ್ನ ಕೊಂದು ನಂತರ ಶವದ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆದ್ರೆ ಪೊಲೀಸರು ವಿಕೃತ ಕಾಮಿಯನ್ನ ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೋನಾಪುರ ಗ್ರಾಮದ 27 ವರ್ಷದ ಗೃಹಿಣಿ ಶೋಭಾ ತನ್ನ ಸ್ವಂತ ಜಮೀನಿನಲ್ಲಿ ಕಡಲೇಕಾಯಿ ಬಿಡಿಸುತ್ತಿದ್ದಳು. ಇದೇ ಸಂದರ್ಭಕ್ಕೆ ಹೊಂಚು ಹಾಕಿ ಕಾಯುತ್ತಿದ್ದ ಅದೊಬ್ಬ ವ್ಯಕ್ತಿ, ಜಮೀನಿನಲ್ಲಿದ್ದ ಒಂಟಿ ಮಹಿಳೆ ಬಳಿ ಬಂದು, ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಕತ್ತು ಹಿಸುಕಿ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ.. ಆಗ ಶೋಭಾ ವಿರೋಧ ವ್ಯಕ್ತಪಡಿಸಿದ್ದ ಕಾರಣ ಆಕೆಯ ಕತ್ತು ಹಿಸುಕಿ ಕೊಂದು ಶವದ ಮೇಲೆ ಅತ್ಯಾಚಾರವೆಸಗಿ ವಿಕೃತ ಕಾಮ ಮೆರೆದಿದ್ದ. ಕೊಲೆ ನಡೆದು ಬರೋಬ್ಬರಿ 1 ತಿಂಗಳಲ್ಲಿ ಬಟ್ಲಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿ ಬೆಂಡೆತ್ತಿದ್ದಾರೆ.

ಅಸಲಿಗೆ ಬಂಧಿತ ಆರೋಪಿ ಕೆ.ಎನ್. ಶಂಕರಪ್ಪ ಆಗಿದ್ದು, ಆಂಧ್ರದ ಎದ್ದುಲೋಳ್ಳಪಲ್ಲಿ ನಿವಾಸಿ. ಸ್ನೇಹಿತನ ಮನೆಗೆ ಅಂತ ಕರ್ನಾಟಕ ಕೋನಾಪುರ ಗ್ರಾಮಕ್ಕೆ ಬಂದಿದ್ದ, ಕೂಲಿ ಮಾಡಿಕೊಂಡು ಇಲ್ಲೆ ಇರ್ತೀನಿ ಅಂತ ಹೇಳಿದ್ದ. ಆದ್ರೆ ಕೂಲಿ ಕೆಲ್ಸಕ್ಕೆ ಹೋಗೋದ್ರ ಬದಲು ಕೆಲಸದಲ್ಲಿ ನಿರತವಾಗಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಲು ಹೋಗಿ ಕೊನೆಗೆ ಆಕೆಯನ್ನು ಕೊಂದು ಆಕೆಯ ಶವದ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾನೆ.

ಒಟ್ನಲ್ಲಿ ಆಂಧ್ರ ಮೂಲದ ಆರೋಪಿ ಶಂಕರಪ್ಪ, ಮೊದ್ಲೇ ಕಳೆದ 2 ವರ್ಷಗಳ ಹಿಂದೆ ಹೆಂಡತಿಯನ್ನ ತೊರೆದು ಅಲ್ಲಿ ಇಲ್ಲಿ ಓಡಾಡಿಕೊಂಡಿದ್ದ. ಪಾಪಿಯ ವಿಕೃತಿಯನ್ನ ಕೇಳಿ ಸ್ವತಃ ಪೊಲೀಸರೇ ದಂಗಾಗಿದ್ದಾರೆ. ಈ ರೀತಿ ಎಲ್ಲಾದ್ರೂ ಮಾಡಿದ್ದಾನಾ ಅನ್ನೋದ್ರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ