AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ: ಸಹಕರಿಸದ ಮಹಿಳೆಯನ್ನ ಕೊಂದ ಪಾಪಿ ಮಾಡಿದ್ದೇನು ಗೊತ್ತಾ?

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಒಂಟಿ ಮಹಿಳೆಯ ಮೇಲೆ ಕಣ್ಣು ಹಾಕಿದ್ದ ವಿಕೃತ ಕಾಮಿಯೋರ್ವ, ಅತ್ಯಾಚಾರಕ್ಕೆ ಸಹಕರಿಸಲಿಲ್ಲ ಅಂತಾ ಕತ್ತು ಹಿಸುಕಿ ಮಹಿಳೆಯನ್ನ ಕೊಂದು ನಂತರ ಶವದ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆದ್ರೆ ಪೊಲೀಸರು ವಿಕೃತ ಕಾಮಿಯನ್ನ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೋನಾಪುರ ಗ್ರಾಮದ 27 ವರ್ಷದ ಗೃಹಿಣಿ ಶೋಭಾ ತನ್ನ ಸ್ವಂತ ಜಮೀನಿನಲ್ಲಿ ಕಡಲೇಕಾಯಿ ಬಿಡಿಸುತ್ತಿದ್ದಳು. ಇದೇ ಸಂದರ್ಭಕ್ಕೆ ಹೊಂಚು ಹಾಕಿ ಕಾಯುತ್ತಿದ್ದ ಅದೊಬ್ಬ ವ್ಯಕ್ತಿ, ಜಮೀನಿನಲ್ಲಿದ್ದ ಒಂಟಿ ಮಹಿಳೆ ಬಳಿ ಬಂದು, […]

ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ: ಸಹಕರಿಸದ ಮಹಿಳೆಯನ್ನ ಕೊಂದ ಪಾಪಿ ಮಾಡಿದ್ದೇನು ಗೊತ್ತಾ?
ಪೃಥ್ವಿಶಂಕರ
|

Updated on: Nov 21, 2020 | 7:07 AM

Share

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಒಂಟಿ ಮಹಿಳೆಯ ಮೇಲೆ ಕಣ್ಣು ಹಾಕಿದ್ದ ವಿಕೃತ ಕಾಮಿಯೋರ್ವ, ಅತ್ಯಾಚಾರಕ್ಕೆ ಸಹಕರಿಸಲಿಲ್ಲ ಅಂತಾ ಕತ್ತು ಹಿಸುಕಿ ಮಹಿಳೆಯನ್ನ ಕೊಂದು ನಂತರ ಶವದ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆದ್ರೆ ಪೊಲೀಸರು ವಿಕೃತ ಕಾಮಿಯನ್ನ ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೋನಾಪುರ ಗ್ರಾಮದ 27 ವರ್ಷದ ಗೃಹಿಣಿ ಶೋಭಾ ತನ್ನ ಸ್ವಂತ ಜಮೀನಿನಲ್ಲಿ ಕಡಲೇಕಾಯಿ ಬಿಡಿಸುತ್ತಿದ್ದಳು. ಇದೇ ಸಂದರ್ಭಕ್ಕೆ ಹೊಂಚು ಹಾಕಿ ಕಾಯುತ್ತಿದ್ದ ಅದೊಬ್ಬ ವ್ಯಕ್ತಿ, ಜಮೀನಿನಲ್ಲಿದ್ದ ಒಂಟಿ ಮಹಿಳೆ ಬಳಿ ಬಂದು, ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಕತ್ತು ಹಿಸುಕಿ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ.. ಆಗ ಶೋಭಾ ವಿರೋಧ ವ್ಯಕ್ತಪಡಿಸಿದ್ದ ಕಾರಣ ಆಕೆಯ ಕತ್ತು ಹಿಸುಕಿ ಕೊಂದು ಶವದ ಮೇಲೆ ಅತ್ಯಾಚಾರವೆಸಗಿ ವಿಕೃತ ಕಾಮ ಮೆರೆದಿದ್ದ. ಕೊಲೆ ನಡೆದು ಬರೋಬ್ಬರಿ 1 ತಿಂಗಳಲ್ಲಿ ಬಟ್ಲಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿ ಬೆಂಡೆತ್ತಿದ್ದಾರೆ.

ಅಸಲಿಗೆ ಬಂಧಿತ ಆರೋಪಿ ಕೆ.ಎನ್. ಶಂಕರಪ್ಪ ಆಗಿದ್ದು, ಆಂಧ್ರದ ಎದ್ದುಲೋಳ್ಳಪಲ್ಲಿ ನಿವಾಸಿ. ಸ್ನೇಹಿತನ ಮನೆಗೆ ಅಂತ ಕರ್ನಾಟಕ ಕೋನಾಪುರ ಗ್ರಾಮಕ್ಕೆ ಬಂದಿದ್ದ, ಕೂಲಿ ಮಾಡಿಕೊಂಡು ಇಲ್ಲೆ ಇರ್ತೀನಿ ಅಂತ ಹೇಳಿದ್ದ. ಆದ್ರೆ ಕೂಲಿ ಕೆಲ್ಸಕ್ಕೆ ಹೋಗೋದ್ರ ಬದಲು ಕೆಲಸದಲ್ಲಿ ನಿರತವಾಗಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಲು ಹೋಗಿ ಕೊನೆಗೆ ಆಕೆಯನ್ನು ಕೊಂದು ಆಕೆಯ ಶವದ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾನೆ.

ಒಟ್ನಲ್ಲಿ ಆಂಧ್ರ ಮೂಲದ ಆರೋಪಿ ಶಂಕರಪ್ಪ, ಮೊದ್ಲೇ ಕಳೆದ 2 ವರ್ಷಗಳ ಹಿಂದೆ ಹೆಂಡತಿಯನ್ನ ತೊರೆದು ಅಲ್ಲಿ ಇಲ್ಲಿ ಓಡಾಡಿಕೊಂಡಿದ್ದ. ಪಾಪಿಯ ವಿಕೃತಿಯನ್ನ ಕೇಳಿ ಸ್ವತಃ ಪೊಲೀಸರೇ ದಂಗಾಗಿದ್ದಾರೆ. ಈ ರೀತಿ ಎಲ್ಲಾದ್ರೂ ಮಾಡಿದ್ದಾನಾ ಅನ್ನೋದ್ರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ