AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ: ಸಹಕರಿಸದ ಮಹಿಳೆಯನ್ನ ಕೊಂದ ಪಾಪಿ ಮಾಡಿದ್ದೇನು ಗೊತ್ತಾ?

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಒಂಟಿ ಮಹಿಳೆಯ ಮೇಲೆ ಕಣ್ಣು ಹಾಕಿದ್ದ ವಿಕೃತ ಕಾಮಿಯೋರ್ವ, ಅತ್ಯಾಚಾರಕ್ಕೆ ಸಹಕರಿಸಲಿಲ್ಲ ಅಂತಾ ಕತ್ತು ಹಿಸುಕಿ ಮಹಿಳೆಯನ್ನ ಕೊಂದು ನಂತರ ಶವದ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆದ್ರೆ ಪೊಲೀಸರು ವಿಕೃತ ಕಾಮಿಯನ್ನ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೋನಾಪುರ ಗ್ರಾಮದ 27 ವರ್ಷದ ಗೃಹಿಣಿ ಶೋಭಾ ತನ್ನ ಸ್ವಂತ ಜಮೀನಿನಲ್ಲಿ ಕಡಲೇಕಾಯಿ ಬಿಡಿಸುತ್ತಿದ್ದಳು. ಇದೇ ಸಂದರ್ಭಕ್ಕೆ ಹೊಂಚು ಹಾಕಿ ಕಾಯುತ್ತಿದ್ದ ಅದೊಬ್ಬ ವ್ಯಕ್ತಿ, ಜಮೀನಿನಲ್ಲಿದ್ದ ಒಂಟಿ ಮಹಿಳೆ ಬಳಿ ಬಂದು, […]

ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ: ಸಹಕರಿಸದ ಮಹಿಳೆಯನ್ನ ಕೊಂದ ಪಾಪಿ ಮಾಡಿದ್ದೇನು ಗೊತ್ತಾ?
ಪೃಥ್ವಿಶಂಕರ
|

Updated on: Nov 21, 2020 | 7:07 AM

Share

ಚಿಕ್ಕಬಳ್ಳಾಪುರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಒಂಟಿ ಮಹಿಳೆಯ ಮೇಲೆ ಕಣ್ಣು ಹಾಕಿದ್ದ ವಿಕೃತ ಕಾಮಿಯೋರ್ವ, ಅತ್ಯಾಚಾರಕ್ಕೆ ಸಹಕರಿಸಲಿಲ್ಲ ಅಂತಾ ಕತ್ತು ಹಿಸುಕಿ ಮಹಿಳೆಯನ್ನ ಕೊಂದು ನಂತರ ಶವದ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆದ್ರೆ ಪೊಲೀಸರು ವಿಕೃತ ಕಾಮಿಯನ್ನ ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೋನಾಪುರ ಗ್ರಾಮದ 27 ವರ್ಷದ ಗೃಹಿಣಿ ಶೋಭಾ ತನ್ನ ಸ್ವಂತ ಜಮೀನಿನಲ್ಲಿ ಕಡಲೇಕಾಯಿ ಬಿಡಿಸುತ್ತಿದ್ದಳು. ಇದೇ ಸಂದರ್ಭಕ್ಕೆ ಹೊಂಚು ಹಾಕಿ ಕಾಯುತ್ತಿದ್ದ ಅದೊಬ್ಬ ವ್ಯಕ್ತಿ, ಜಮೀನಿನಲ್ಲಿದ್ದ ಒಂಟಿ ಮಹಿಳೆ ಬಳಿ ಬಂದು, ಪರಿಚಯದ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಕತ್ತು ಹಿಸುಕಿ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ.. ಆಗ ಶೋಭಾ ವಿರೋಧ ವ್ಯಕ್ತಪಡಿಸಿದ್ದ ಕಾರಣ ಆಕೆಯ ಕತ್ತು ಹಿಸುಕಿ ಕೊಂದು ಶವದ ಮೇಲೆ ಅತ್ಯಾಚಾರವೆಸಗಿ ವಿಕೃತ ಕಾಮ ಮೆರೆದಿದ್ದ. ಕೊಲೆ ನಡೆದು ಬರೋಬ್ಬರಿ 1 ತಿಂಗಳಲ್ಲಿ ಬಟ್ಲಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿ ಬೆಂಡೆತ್ತಿದ್ದಾರೆ.

ಅಸಲಿಗೆ ಬಂಧಿತ ಆರೋಪಿ ಕೆ.ಎನ್. ಶಂಕರಪ್ಪ ಆಗಿದ್ದು, ಆಂಧ್ರದ ಎದ್ದುಲೋಳ್ಳಪಲ್ಲಿ ನಿವಾಸಿ. ಸ್ನೇಹಿತನ ಮನೆಗೆ ಅಂತ ಕರ್ನಾಟಕ ಕೋನಾಪುರ ಗ್ರಾಮಕ್ಕೆ ಬಂದಿದ್ದ, ಕೂಲಿ ಮಾಡಿಕೊಂಡು ಇಲ್ಲೆ ಇರ್ತೀನಿ ಅಂತ ಹೇಳಿದ್ದ. ಆದ್ರೆ ಕೂಲಿ ಕೆಲ್ಸಕ್ಕೆ ಹೋಗೋದ್ರ ಬದಲು ಕೆಲಸದಲ್ಲಿ ನಿರತವಾಗಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಲು ಹೋಗಿ ಕೊನೆಗೆ ಆಕೆಯನ್ನು ಕೊಂದು ಆಕೆಯ ಶವದ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾನೆ.

ಒಟ್ನಲ್ಲಿ ಆಂಧ್ರ ಮೂಲದ ಆರೋಪಿ ಶಂಕರಪ್ಪ, ಮೊದ್ಲೇ ಕಳೆದ 2 ವರ್ಷಗಳ ಹಿಂದೆ ಹೆಂಡತಿಯನ್ನ ತೊರೆದು ಅಲ್ಲಿ ಇಲ್ಲಿ ಓಡಾಡಿಕೊಂಡಿದ್ದ. ಪಾಪಿಯ ವಿಕೃತಿಯನ್ನ ಕೇಳಿ ಸ್ವತಃ ಪೊಲೀಸರೇ ದಂಗಾಗಿದ್ದಾರೆ. ಈ ರೀತಿ ಎಲ್ಲಾದ್ರೂ ಮಾಡಿದ್ದಾನಾ ಅನ್ನೋದ್ರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?