AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ಅಜ್ಜಿ ಅಂತಾ ಹೇಳಿ.. ನವಜಾತ ಶಿಶು ಕದ್ದು ಮಾರಿದ್ದ ಕಿರಾತಕರು ಅಂದರ್​ ಆದರು

ಬೆಂಗಳೂರು: ವಾಣಿ ವಿಲಾಸ್ ಆಸ್ಪತ್ರೆಯ ಸಿಬ್ಬಂದಿ ಯಡವಟ್ಟಿನಿಂದ ಕಿರಾತಕರು ಮಗುವನ್ನು ಅಪಹರಿಸಿದ ಪ್ರಸಂಗ ನಡೆದಿತ್ತು. ಆದ್ರೆ ಕಿಡ್ನಾಪ್ ಕಿರಾತಕರನ್ನು ನಿನ್ನೆ ರಾತ್ರಿ ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 9 ರಂದು ವಾಣಿವಿಲಾಸ್ ಆಸ್ಪತ್ರೆಯಲ್ಲಿ ಅಬ್ದುಲ್ ರಶೀದ್ ಹಾಗೂ ಆಯೇಶಾ ದಂಪತಿಗೆ ಮಗು ಜನಿಸಿತ್ತು. ಆದರೆ ಮಗುವಿನ ಲಂಗ್ಸ್​ನಲ್ಲಿ ನೀರು ಶೇಖರಣೆ ಆಗಿದ್ದರಿಂದ ಮಗುವನ್ನು ಎನ್ಐಸಿಯುನಲ್ಲಿ ಇಡಲಾಗಿತ್ತು. ನವೆಂಬರ್​ 11 ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೀಗಾಗಿ ಮಗುವನ್ನು ತಾಯಿ ಬಳಿ ಕರೆದುಕೊಂಡು ಹೋಗುವಂತೆ […]

ಮಗುವಿನ ಅಜ್ಜಿ ಅಂತಾ ಹೇಳಿ.. ನವಜಾತ ಶಿಶು ಕದ್ದು ಮಾರಿದ್ದ ಕಿರಾತಕರು ಅಂದರ್​ ಆದರು
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Nov 20, 2020 | 11:42 AM

Share

ಬೆಂಗಳೂರು: ವಾಣಿ ವಿಲಾಸ್ ಆಸ್ಪತ್ರೆಯ ಸಿಬ್ಬಂದಿ ಯಡವಟ್ಟಿನಿಂದ ಕಿರಾತಕರು ಮಗುವನ್ನು ಅಪಹರಿಸಿದ ಪ್ರಸಂಗ ನಡೆದಿತ್ತು. ಆದ್ರೆ ಕಿಡ್ನಾಪ್ ಕಿರಾತಕರನ್ನು ನಿನ್ನೆ ರಾತ್ರಿ ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 9 ರಂದು ವಾಣಿವಿಲಾಸ್ ಆಸ್ಪತ್ರೆಯಲ್ಲಿ ಅಬ್ದುಲ್ ರಶೀದ್ ಹಾಗೂ ಆಯೇಶಾ ದಂಪತಿಗೆ ಮಗು ಜನಿಸಿತ್ತು. ಆದರೆ ಮಗುವಿನ ಲಂಗ್ಸ್​ನಲ್ಲಿ ನೀರು ಶೇಖರಣೆ ಆಗಿದ್ದರಿಂದ ಮಗುವನ್ನು ಎನ್ಐಸಿಯುನಲ್ಲಿ ಇಡಲಾಗಿತ್ತು. ನವೆಂಬರ್​ 11 ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೀಗಾಗಿ ಮಗುವನ್ನು ತಾಯಿ ಬಳಿ ಕರೆದುಕೊಂಡು ಹೋಗುವಂತೆ ಆಸ್ಪತ್ರೆಯಲ್ಲಿ ಅನೌನ್ಸ್​ಮೆಂಟ್ ಆಗಿದೆ.

80 ಸಾವಿರಕ್ಕೆ ಮಾರಾಟ ಮಾಡಿದ್ದಳು.. ಅನೌನ್ಸ್​ಮೆಂಟ್ ಆಗಿ 2 ನಿಮಿಷದೊಳಗೆ ಎಂಟ್ರಿ ಕೊಟ್ಟಿದ್ದ ಮಹಿಳೆಯೊಬ್ಬಳು ತಾನು ಮಗುವಿನ ಅಜ್ಜಿ ಅಂತಾ ಹೇಳಿ, ಮಗುವನ್ನು ನವೆಂಬರ್ 11 ರಂದು ಮಧ್ಯಾಹ್ನ 1.30 ರ ಸಮಯದಲ್ಲಿ ಕದ್ದು ಪರಾರಿಯಾಗಿದ್ದಳು. ಪರಾರಿಯಾಗಿದ್ದ ಮಹಿಳೆ ಮಗುವನ್ನು ಕುಮಾರಸ್ವಾಮಿ ಲೇಔಟ್​ನಲ್ಲಿ 80 ಸಾವಿರಕ್ಕೆ ಮಾರಾಟ ಮಾಡಿದ್ದಳು. ಬಳಿಕ ಮಗು ಕಾಣದಾದಾಗ ಎಚ್ಚೆತ್ತುಕೊಂಡ ಆಸ್ಪತ್ರೆ ಸಿಬ್ಬಂದಿ ಹಾಗೂ ಮಗುವಿನ ಪೋಷಕರು ಈ ಸಂಬಂಧವಾಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ ಮಗುವನ್ನು ಸುರಕ್ಷಿತವಾಗಿ ಪೋಷಕರ ವಶಕ್ಕೆ ನೀಡಿದ್ದಾರೆ. ಆದರೆ ಇಲ್ಲಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯತನ ಎದ್ದು ಕಾಣಿಸುತ್ತಿದೆ.

ಬಹುಮುಖ್ಯವಾಗಿ ಹಾಸ್ಪಿಟಲ್ ಸಿಬ್ಬಂದಿ ಸರಿಯಾಗಿ ವೆರಿಫೈ ಮಾಡದೇ ಪೋಷಕರು ಅಂತಾ ಬಂದೋರಿಗೆ ಮಗು ಕೊಟ್ಟಿದ್ದು ದೊಡ್ಡ ಅಪರಾಧವಾಗಿದೆ. ಅಲ್ಲದೆ ನಿಯಮದ ಪ್ರಕಾರ ಮಗುವನ್ನು ತಾಯಿಯ ಬಳಿಯೇ ಬಿಡಬೇಕು. ಇದ್ಯಾವುದನ್ನೂ ಲೆಕ್ಕಿಸದೇ ಪೋಷಕರು ಅಂತಾ ಬಂದ ಮಹಿಳೆ ಕೈಗೆ ಸಿಬ್ಬಂದಿ ಮಗುವನ್ನು ಕೊಟ್ಟಿದ್ದರು. ಮುಂದೆಯಾದರೂ ತಪ್ಪು ಸಿಬ್ಬಂದಿ ಎಚ್ಚರವಹಿಸಬೇಕಿದೆ.

Published On - 11:26 am, Fri, 20 November 20

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!