AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ಅಜ್ಜಿ ಅಂತಾ ಹೇಳಿ.. ನವಜಾತ ಶಿಶು ಕದ್ದು ಮಾರಿದ್ದ ಕಿರಾತಕರು ಅಂದರ್​ ಆದರು

ಬೆಂಗಳೂರು: ವಾಣಿ ವಿಲಾಸ್ ಆಸ್ಪತ್ರೆಯ ಸಿಬ್ಬಂದಿ ಯಡವಟ್ಟಿನಿಂದ ಕಿರಾತಕರು ಮಗುವನ್ನು ಅಪಹರಿಸಿದ ಪ್ರಸಂಗ ನಡೆದಿತ್ತು. ಆದ್ರೆ ಕಿಡ್ನಾಪ್ ಕಿರಾತಕರನ್ನು ನಿನ್ನೆ ರಾತ್ರಿ ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 9 ರಂದು ವಾಣಿವಿಲಾಸ್ ಆಸ್ಪತ್ರೆಯಲ್ಲಿ ಅಬ್ದುಲ್ ರಶೀದ್ ಹಾಗೂ ಆಯೇಶಾ ದಂಪತಿಗೆ ಮಗು ಜನಿಸಿತ್ತು. ಆದರೆ ಮಗುವಿನ ಲಂಗ್ಸ್​ನಲ್ಲಿ ನೀರು ಶೇಖರಣೆ ಆಗಿದ್ದರಿಂದ ಮಗುವನ್ನು ಎನ್ಐಸಿಯುನಲ್ಲಿ ಇಡಲಾಗಿತ್ತು. ನವೆಂಬರ್​ 11 ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೀಗಾಗಿ ಮಗುವನ್ನು ತಾಯಿ ಬಳಿ ಕರೆದುಕೊಂಡು ಹೋಗುವಂತೆ […]

ಮಗುವಿನ ಅಜ್ಜಿ ಅಂತಾ ಹೇಳಿ.. ನವಜಾತ ಶಿಶು ಕದ್ದು ಮಾರಿದ್ದ ಕಿರಾತಕರು ಅಂದರ್​ ಆದರು
ಪೃಥ್ವಿಶಂಕರ
| Edited By: |

Updated on:Nov 20, 2020 | 11:42 AM

Share

ಬೆಂಗಳೂರು: ವಾಣಿ ವಿಲಾಸ್ ಆಸ್ಪತ್ರೆಯ ಸಿಬ್ಬಂದಿ ಯಡವಟ್ಟಿನಿಂದ ಕಿರಾತಕರು ಮಗುವನ್ನು ಅಪಹರಿಸಿದ ಪ್ರಸಂಗ ನಡೆದಿತ್ತು. ಆದ್ರೆ ಕಿಡ್ನಾಪ್ ಕಿರಾತಕರನ್ನು ನಿನ್ನೆ ರಾತ್ರಿ ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 9 ರಂದು ವಾಣಿವಿಲಾಸ್ ಆಸ್ಪತ್ರೆಯಲ್ಲಿ ಅಬ್ದುಲ್ ರಶೀದ್ ಹಾಗೂ ಆಯೇಶಾ ದಂಪತಿಗೆ ಮಗು ಜನಿಸಿತ್ತು. ಆದರೆ ಮಗುವಿನ ಲಂಗ್ಸ್​ನಲ್ಲಿ ನೀರು ಶೇಖರಣೆ ಆಗಿದ್ದರಿಂದ ಮಗುವನ್ನು ಎನ್ಐಸಿಯುನಲ್ಲಿ ಇಡಲಾಗಿತ್ತು. ನವೆಂಬರ್​ 11 ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೀಗಾಗಿ ಮಗುವನ್ನು ತಾಯಿ ಬಳಿ ಕರೆದುಕೊಂಡು ಹೋಗುವಂತೆ ಆಸ್ಪತ್ರೆಯಲ್ಲಿ ಅನೌನ್ಸ್​ಮೆಂಟ್ ಆಗಿದೆ.

80 ಸಾವಿರಕ್ಕೆ ಮಾರಾಟ ಮಾಡಿದ್ದಳು.. ಅನೌನ್ಸ್​ಮೆಂಟ್ ಆಗಿ 2 ನಿಮಿಷದೊಳಗೆ ಎಂಟ್ರಿ ಕೊಟ್ಟಿದ್ದ ಮಹಿಳೆಯೊಬ್ಬಳು ತಾನು ಮಗುವಿನ ಅಜ್ಜಿ ಅಂತಾ ಹೇಳಿ, ಮಗುವನ್ನು ನವೆಂಬರ್ 11 ರಂದು ಮಧ್ಯಾಹ್ನ 1.30 ರ ಸಮಯದಲ್ಲಿ ಕದ್ದು ಪರಾರಿಯಾಗಿದ್ದಳು. ಪರಾರಿಯಾಗಿದ್ದ ಮಹಿಳೆ ಮಗುವನ್ನು ಕುಮಾರಸ್ವಾಮಿ ಲೇಔಟ್​ನಲ್ಲಿ 80 ಸಾವಿರಕ್ಕೆ ಮಾರಾಟ ಮಾಡಿದ್ದಳು. ಬಳಿಕ ಮಗು ಕಾಣದಾದಾಗ ಎಚ್ಚೆತ್ತುಕೊಂಡ ಆಸ್ಪತ್ರೆ ಸಿಬ್ಬಂದಿ ಹಾಗೂ ಮಗುವಿನ ಪೋಷಕರು ಈ ಸಂಬಂಧವಾಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ ಮಗುವನ್ನು ಸುರಕ್ಷಿತವಾಗಿ ಪೋಷಕರ ವಶಕ್ಕೆ ನೀಡಿದ್ದಾರೆ. ಆದರೆ ಇಲ್ಲಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯತನ ಎದ್ದು ಕಾಣಿಸುತ್ತಿದೆ.

ಬಹುಮುಖ್ಯವಾಗಿ ಹಾಸ್ಪಿಟಲ್ ಸಿಬ್ಬಂದಿ ಸರಿಯಾಗಿ ವೆರಿಫೈ ಮಾಡದೇ ಪೋಷಕರು ಅಂತಾ ಬಂದೋರಿಗೆ ಮಗು ಕೊಟ್ಟಿದ್ದು ದೊಡ್ಡ ಅಪರಾಧವಾಗಿದೆ. ಅಲ್ಲದೆ ನಿಯಮದ ಪ್ರಕಾರ ಮಗುವನ್ನು ತಾಯಿಯ ಬಳಿಯೇ ಬಿಡಬೇಕು. ಇದ್ಯಾವುದನ್ನೂ ಲೆಕ್ಕಿಸದೇ ಪೋಷಕರು ಅಂತಾ ಬಂದ ಮಹಿಳೆ ಕೈಗೆ ಸಿಬ್ಬಂದಿ ಮಗುವನ್ನು ಕೊಟ್ಟಿದ್ದರು. ಮುಂದೆಯಾದರೂ ತಪ್ಪು ಸಿಬ್ಬಂದಿ ಎಚ್ಚರವಹಿಸಬೇಕಿದೆ.

Published On - 11:26 am, Fri, 20 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು