
ಬೆಂಗಳೂರು: ಕಳೆದ ರಾತ್ರಿ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭುಗಿಲೆದ್ದ ಹಿಂಸಾಚಾರದ ವೇಳೆ ನಡೆದ ಪೊಲೀಸ್ ಫೈರಿಂಗ್ನಲ್ಲಿ ಮೃತರಾದವರ ಅಂತ್ಯಕ್ರಿಯೆಗೆ ಸೂಚನೆ ನೀಡಲಾಗಿದೆ.
ಈ ಬಗ್ಗೆ ಮೃತರ ಕುಟುಂಬಗಳಿಗೆ ಕೆಲ ಸೂಚನೆ ನೀಡಿರುವ ಪೊಲೀಸರು, ಶವಗಳನ್ನು ಮನೆಗೆ ತೆಗೆದುಕೊಂಡು ಹೋಗುವುದು, ದರ್ಶನಕ್ಕೆ ಇಡುವುದನ್ನು ಮಾಡುವಂತಿಲ್ಲ ಎಂದು ಸೂಚಿಸಿದ್ದಾರೆ.
ಇದರ ಬದಲು ಮೃತರ ದೇಹವನ್ನು ಆಸ್ಪತ್ರೆಯಿಂದ ಸೀದಾ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ಮಾಡುವಂತೆ ಸೂಚಿಸಲಾಗಿದೆ.
Published On - 1:56 pm, Wed, 12 August 20