AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆ ಮೈದಾನದಲ್ಲಿ ನೂರಾರು ವಲಸೆ ಕಾರ್ಮಿಕರನ್ನ ರಕ್ಷಿಸಿದ ಆರಕ್ಷಕ

ಬೆಂಗಳೂರು: ಪೊಲೀಸ್​ ಕಾನ್ಸ್‌ಟೆಬಲ್ ಸಮಯಪ್ರಜ್ಞೆಯಿಂದ ನಗರದಲ್ಲಿ ಭಾರೀ ಅನಾಹುತ ತಪ್ಪಿದ್ದು, ನೂರಾರು ವಲಸೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಗಾಳಿ ಮಳೆಗೆ ಶೆಲ್ಟರ್ ಕುಸಿದು ಬಿದ್ದಿದ್ದು, ಅವಶೇಷದಡಿ ಸಿಲುಕಿದ್ದ ಮಗು ಸೇರಿ ನೂರಾರು ಜನರನ್ನು ಕಾನ್ಸ್‌ಟೆಬಲ್ ರವಿಕುಮಾರ್ ಒಬ್ಬರೇ ರಕ್ಷಿಸಿದ್ದಾರೆ. ಇದೇ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಮಿಕರನ್ನು ಶಿಫ್ಟ್ ಮಾಡುವ ಕೆಲಸ ನಡೆಯುತ್ತಿತ್ತು. ತಮ್ಮ ರಾಜ್ಯಗಳಿಗೆ ಹೋಗಲು ವಲಸೆ ಕಾರ್ಮಿಕರು ಜಮಾವಣೆಗೊಂಡಿದ್ದರು. ಈ ವೇಳೆ ಬಿರುಗಾಳಿ ಸಹಿತ ಭಾರೀ ಮಳೆಗೆ ಮರ ಧರೆಗುರುಳಿ ಅರಮನೆ ಮೈದಾನದ […]

ಅರಮನೆ ಮೈದಾನದಲ್ಲಿ ನೂರಾರು ವಲಸೆ ಕಾರ್ಮಿಕರನ್ನ ರಕ್ಷಿಸಿದ ಆರಕ್ಷಕ
ಸಾಧು ಶ್ರೀನಾಥ್​
| Edited By: |

Updated on:May 31, 2020 | 2:25 PM

Share

ಬೆಂಗಳೂರು: ಪೊಲೀಸ್​ ಕಾನ್ಸ್‌ಟೆಬಲ್ ಸಮಯಪ್ರಜ್ಞೆಯಿಂದ ನಗರದಲ್ಲಿ ಭಾರೀ ಅನಾಹುತ ತಪ್ಪಿದ್ದು, ನೂರಾರು ವಲಸೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಗಾಳಿ ಮಳೆಗೆ ಶೆಲ್ಟರ್ ಕುಸಿದು ಬಿದ್ದಿದ್ದು, ಅವಶೇಷದಡಿ ಸಿಲುಕಿದ್ದ ಮಗು ಸೇರಿ ನೂರಾರು ಜನರನ್ನು ಕಾನ್ಸ್‌ಟೆಬಲ್ ರವಿಕುಮಾರ್ ಒಬ್ಬರೇ ರಕ್ಷಿಸಿದ್ದಾರೆ.

ಇದೇ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಮಿಕರನ್ನು ಶಿಫ್ಟ್ ಮಾಡುವ ಕೆಲಸ ನಡೆಯುತ್ತಿತ್ತು. ತಮ್ಮ ರಾಜ್ಯಗಳಿಗೆ ಹೋಗಲು ವಲಸೆ ಕಾರ್ಮಿಕರು ಜಮಾವಣೆಗೊಂಡಿದ್ದರು. ಈ ವೇಳೆ ಬಿರುಗಾಳಿ ಸಹಿತ ಭಾರೀ ಮಳೆಗೆ ಮರ ಧರೆಗುರುಳಿ ಅರಮನೆ ಮೈದಾನದ ಶೆಲ್ಟರ್ ಕುಸಿದು ಬಿದ್ದಿತ್ತು. ಕುಸಿದುಬಿಟ್ಟ ಶೆಲ್ಟರ್​ನಲ್ಲಿ ಒಟ್ಟು 400ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಆಶ್ರಯ ಪಡೆದಿದ್ದರು.

ಎಂಬಿಎ ಗೋಲ್ಡ್ ಮೆಡಲಿಸ್ಟ್ ಆಗಿರುವ ಶಿವಾಜನಗರ ಪೊಲೀಸ್ ಠಾಣೆಯ ಕಾನ್ಸ್​ಟೆಬಲ್ ರವಿಕುಮಾರ್, ಅವಶೇಷದಡಿ ಸಿಲುಕಿದ್ದ ನೂರಾರು ಜನರನ್ನು ರಕ್ಷಿಸಿದ್ದಾರೆ. ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಲಕ್ಚರರ್ ಆಗಿದ್ದ ರವಿಕುಮಾರ್, ಪೊಲೀಸ್ ಇಲಾಖೆಯಲ್ಲಿ ಕೆಲಸ ಸಿಕ್ಕ ಬಳಿಕ ರಾಜೀನಾಮೆ ನೀಡಿದ್ದರು.

Published On - 11:50 am, Sun, 31 May 20

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!