AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ವಿರುದ್ಧ ಗೋ ಬ್ಯಾಕ್ ಘೋಷಣೆ, ತುಮಕೂರು ರೈತರಿಂದ ಪ್ರತಿಭಟನೆ

ತುಮಕೂರು: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಭೇಟಿ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡಲು ರೈತ ಸಂಘ ನಿರ್ಧರಿಸಿದೆ. ಪ್ರಧಾನಿ ಮೋದಿ ರೈತರ ಸಮಸ್ಯೆಗೆ ಸ್ಪಂದಿಸಿಲ್ಲ. ರೈತರನ್ನು ಕಡೆಗಣಿಸಿದ್ದಾರೆಂದು ಆರೋಪಿಸಿ ಇಂದು ತುಮಕೂರು ಡಿಸಿ ಕಚೇರಿ ವೃತ್ತದಿಂದ ಮೆರವಣಿಗೆ ಹೊರಡಲು ರೈತ ಸಂಘ ಮತ್ತು ಹಸಿರು ಸೇನೆ ತೀರ್ಮಾನಿಸಿದೆ. ಮೆರವಣಿಗೆಯ ವೇಳೆ ಕಪ್ಪು ಬಾವುಟ ಪ್ರದರ್ಶನ ಕೂಡ ಮಾಡಲಾಗುತ್ತದೆ. ಹಲವೆಡೆ […]

ಮೋದಿ ವಿರುದ್ಧ ಗೋ ಬ್ಯಾಕ್ ಘೋಷಣೆ, ತುಮಕೂರು ರೈತರಿಂದ ಪ್ರತಿಭಟನೆ
ಸಾಧು ಶ್ರೀನಾಥ್​
|

Updated on:Jan 02, 2020 | 3:28 PM

Share

ತುಮಕೂರು: ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಭೇಟಿ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡಲು ರೈತ ಸಂಘ ನಿರ್ಧರಿಸಿದೆ. ಪ್ರಧಾನಿ ಮೋದಿ ರೈತರ ಸಮಸ್ಯೆಗೆ ಸ್ಪಂದಿಸಿಲ್ಲ. ರೈತರನ್ನು ಕಡೆಗಣಿಸಿದ್ದಾರೆಂದು ಆರೋಪಿಸಿ ಇಂದು ತುಮಕೂರು ಡಿಸಿ ಕಚೇರಿ ವೃತ್ತದಿಂದ ಮೆರವಣಿಗೆ ಹೊರಡಲು ರೈತ ಸಂಘ ಮತ್ತು ಹಸಿರು ಸೇನೆ ತೀರ್ಮಾನಿಸಿದೆ. ಮೆರವಣಿಗೆಯ ವೇಳೆ ಕಪ್ಪು ಬಾವುಟ ಪ್ರದರ್ಶನ ಕೂಡ ಮಾಡಲಾಗುತ್ತದೆ.

ಹಲವೆಡೆ ನೂರಾರು ರೈತರನ್ನು ವಶಕ್ಕೆ ಪಡೆದ ಪೊಲೀಸ್: ಮೋದಿಗೆ ರೈತರ ಪ್ರತಿಭಟನೆಯ ‌ಬಿಸಿ ತಟ್ಟುವ ಹಿನ್ನೆಲೆ ಹಲವೆಡೆ ಪೊಲೀಸರಿಂದ ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆಯಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಗೋ ಬ್ಯಾಕ್ ಮೋದಿ ಎಂದು ಘೋಷಣೆ ಕೂಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ರೈತರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಚಿಕ್ಕನಾಯಕನಹಳ್ಳಿ, ಕುಣಿಗಲ್, ಕೊರಟಗೆರೆ, ತಿಪಟೂರು ಸೇರಿದಂತೆ ಹಲವೆಡೆ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ವರ್ತನೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 11:01 am, Thu, 2 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ