AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ಪಡೆ ಭರ್ಜರಿ ಬೇಟೆ: ಫೈರಿಂಗ್ ಮಾಡಿ 4 ಕೊಲೆ ಆರೋಪಿಗಳ ಅರೆಸ್ಟ್​

ಆನೇಕಲ್: ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಆದ್ರೆ ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವನ ಮೇಲೆ ಫೈರಿಂಗ್ ನಡೆದಿದೆ. ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಆನೇಕಲ್ ಠಾಣೆ […]

ಖಾಕಿ ಪಡೆ ಭರ್ಜರಿ ಬೇಟೆ: ಫೈರಿಂಗ್ ಮಾಡಿ 4 ಕೊಲೆ ಆರೋಪಿಗಳ ಅರೆಸ್ಟ್​
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Nov 02, 2020 | 9:57 AM

Share

ಆನೇಕಲ್: ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಆದ್ರೆ ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವನ ಮೇಲೆ ಫೈರಿಂಗ್ ನಡೆದಿದೆ.

ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಆನೇಕಲ್ ಠಾಣೆ ಪೊಲೀಸರು ಅವಡದೇವನಹಳ್ಳಿಯಲ್ಲಿದ್ದ ಆರೋಪಿಗಳಾದ ಗಂಗಾ ಮತ್ತು ಗೋಪಿಯನ್ನು ಶರಣಾಗುವಂತೆ ಸೂಚಿಸಿದ್ದಾರೆ. ಆದ್ರೆ ಆರೋಪಿಗಳು ಕಾನ್ಸ್‌ಟೇಬಲ್‌ಗಳಾದ ಮಹೇಶ್ ಮತ್ತು ಸುರೇಶ್ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾರೆ. ಹೀಗಾಗಿ ಆರೋಪಿಗಳ ಕಾಲಿಗೆ ಆನೇಕಲ್ ಡಿವೈಎಸ್‌ಪಿ ಮಹಾದೇವ್ ಮತ್ತು ಆನೇಕಲ್ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣರಿಂದ ಫೈರಿಂಗ್ ನಡೆದಿದೆ.

ಇನ್ನು ಮುತ್ಯಾನಲ್ಲೂರಿನಲ್ಲಿ ಅನಂತ್ ಮತ್ತು ಬಸವನಿರುವ ಮಾಹಿತಿ ತಿಳಿದ ಅತ್ತಿಬೆಲೆ, ಸರ್ಜಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದ್ರು. ಆದ್ರೆ ಆರೋಪಿಗಳು ಶರಣಾಗದೆ PCಗಳಾದ ಇರ್ಫಾನ್, ನಾಗರಾಜ್‌ ಮೇಲೆ ಹಲ್ಲೆ ಮಾಡಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾರೆ. ಹೀಗಾಗಿ ಅತ್ತಿಬೆಲೆ ಠಾಣೆಯ ಇನ್ಸ್‌ಪೆಕ್ಟರ್ ಸತೀಶ್ ಮತ್ತು ಸರ್ಜಾಪುರ ಎಸ್‌ಐ ಹರೀಶ್‌ರಿಂದ ಗುಂಡಿನ ದಾಳಿ ನಡೆದಿದೆ. ಸದ್ಯ ನಾಲ್ವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

Published On - 8:21 am, Mon, 2 November 20

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ