ಪೊಲೀಸ್​ ಠಾಣೆ ಅಭಿವೃದ್ಧಿಗಾಗಿ ಎಂದು ಸಾಹೇಬರ ಹೆಸರು ಬಳಸಿ, ಮುಖ್ಯಪೇದೆ ಹಣ ವಸೂಲಿ

ವಿಜಯಪುರ: ಬೈಕ್ ಸವಾರರಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ವಸೂಲಿ ಮಾಡತ್ತಿರುವ ಘಟನೆ ಜಿಲ್ಲೆಯ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಬಸವನಬಾಗೇವಾಡಿ ಠಾಣೆ ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿ ವಿರುದ್ಧ ಇಂತಹದೊಂದು ಆರೋಪ ಕೇಳಿಬಂದಿದೆ. ಬೈಕ್​ಗಳಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ಪೀಕುತ್ತಿದ್ದಾರಂತೆ. ಈ ಬಗ್ಗೆ ಪ್ರಶ್ನಿಸಿದ್ರೆ ಪೊಲೀಸ್ ಠಾಣೆಗೆ ಉಪಕರಣ ಖರೀದಿ ಮಾಡಲು ಮತ್ತು ಸಿಸಿಕ್ಯಾಮರಾಗಾಗಿ PSI ಸೂಚನೆ ಮೇರೆಗೆ ಹಣ ಸಂಗ್ರಹಿಸುತ್ತಿರುವುದಾಗಿ ಗ್ರಾಮಸ್ಥರಿಗೆ ಹೇಳುತ್ತಿದ್ದಾರಂತೆ. ಪ್ರತಿ ಬೈಕ್ ಸವಾರರ ಬಳಿ 500 ರೂಪಾಯಿಯಂತೆ ಹಣ […]

ಪೊಲೀಸ್​ ಠಾಣೆ ಅಭಿವೃದ್ಧಿಗಾಗಿ ಎಂದು ಸಾಹೇಬರ ಹೆಸರು ಬಳಸಿ, ಮುಖ್ಯಪೇದೆ ಹಣ ವಸೂಲಿ
ಆಯೇಷಾ ಬಾನು

Updated on: Oct 11, 2020 | 12:29 PM

ವಿಜಯಪುರ: ಬೈಕ್ ಸವಾರರಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ವಸೂಲಿ ಮಾಡತ್ತಿರುವ ಘಟನೆ ಜಿಲ್ಲೆಯ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಬಸವನಬಾಗೇವಾಡಿ ಠಾಣೆ ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿ ವಿರುದ್ಧ ಇಂತಹದೊಂದು ಆರೋಪ ಕೇಳಿಬಂದಿದೆ.

ಬೈಕ್​ಗಳಿಗೆ ದಂಡ ಹಾಕುವ ನೆಪದಲ್ಲಿ ಪೊಲೀಸಪ್ಪ ಹಣ ಪೀಕುತ್ತಿದ್ದಾರಂತೆ. ಈ ಬಗ್ಗೆ ಪ್ರಶ್ನಿಸಿದ್ರೆ ಪೊಲೀಸ್ ಠಾಣೆಗೆ ಉಪಕರಣ ಖರೀದಿ ಮಾಡಲು ಮತ್ತು ಸಿಸಿಕ್ಯಾಮರಾಗಾಗಿ PSI ಸೂಚನೆ ಮೇರೆಗೆ ಹಣ ಸಂಗ್ರಹಿಸುತ್ತಿರುವುದಾಗಿ ಗ್ರಾಮಸ್ಥರಿಗೆ ಹೇಳುತ್ತಿದ್ದಾರಂತೆ.

ಪ್ರತಿ ಬೈಕ್ ಸವಾರರ ಬಳಿ 500 ರೂಪಾಯಿಯಂತೆ ಹಣ ಸಂಗ್ರಹ ಮಾಡುತ್ತಿದ್ದಾರಂತೆ. ಹೆಡ್‌ ಕಾನ್ಸ್‌ಟೇಬಲ್ H.S.ಹೊಸಮನಿಯ ಈ ಕೃತ್ಯ ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಪೊಲೀಸಪ್ಪನ ವಸೂಲಿಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಮೇಲಾಧಿಕಾರಿಗಳಿಗೆ ಒತ್ತಾಯಿಸಲಾಗಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us