AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪಾರಿ ಕೇಸ್: ರೌಡಿಶೀಟರುಗಳ ವಿಚಾರಣೆ, ಗಡಿ ಪಾರಿಗೆ SP ಚನ್ನಣ್ಣವರ್ ಸೂಚನೆ ಸಾಧ್ಯತೆ

ನೆಲಮಂಗಲ:ಕಾಂಗ್ರೆಸ್ ಮುಖಂಡನ ಹತ್ಯೆಗೆ 60 ಲಕ್ಷ ಸುಪಾರಿ ಪ್ರಕರಣಕ್ಕೆ ಸಂಬಂದಿಸಿದ್ದಂತೆ ಮಾದನಾಯಕನಹಳ್ಳಿ ಪೋಲಿಸ್ ಠಾಣೆಯಲ್ಲಿ ಹಲವು ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ನನ್ನ ಹತ್ಯೆಗೆ 60ಲಕ್ಷ ಸುಪಾರಿ ನೀಡಿದ್ದಾರೆ ಎಂದು ಗೋಪಾಲಪುರ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ವಡೇರಹಳ್ಳಿ ಜಯರಾಮಯ್ಯ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣವರ್ ಸೂಚನೆ ಮೇರೆಗೆ ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳಾದ ಬೆತ್ತನಗೆರೆ ಮಂಜ, ಮುನಿರಾಜು, ಹುಸ್ಕೂರು ಶಿವನನ್ನು ಮಾದನಾಯಕನಹಳ್ಳಿ […]

ಸುಪಾರಿ ಕೇಸ್: ರೌಡಿಶೀಟರುಗಳ ವಿಚಾರಣೆ, ಗಡಿ ಪಾರಿಗೆ SP ಚನ್ನಣ್ಣವರ್ ಸೂಚನೆ ಸಾಧ್ಯತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 02, 2020 | 12:12 PM

Share

ನೆಲಮಂಗಲ:ಕಾಂಗ್ರೆಸ್ ಮುಖಂಡನ ಹತ್ಯೆಗೆ 60 ಲಕ್ಷ ಸುಪಾರಿ ಪ್ರಕರಣಕ್ಕೆ ಸಂಬಂದಿಸಿದ್ದಂತೆ ಮಾದನಾಯಕನಹಳ್ಳಿ ಪೋಲಿಸ್ ಠಾಣೆಯಲ್ಲಿ ಹಲವು ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ನನ್ನ ಹತ್ಯೆಗೆ 60ಲಕ್ಷ ಸುಪಾರಿ ನೀಡಿದ್ದಾರೆ ಎಂದು ಗೋಪಾಲಪುರ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ವಡೇರಹಳ್ಳಿ ಜಯರಾಮಯ್ಯ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದರು.

ಈ ಆರೋಪದ ಹಿನ್ನೆಲೆಯಲ್ಲಿ ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣವರ್ ಸೂಚನೆ ಮೇರೆಗೆ ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್​ಗಳಾದ ಬೆತ್ತನಗೆರೆ ಮಂಜ, ಮುನಿರಾಜು, ಹುಸ್ಕೂರು ಶಿವನನ್ನು ಮಾದನಾಯಕನಹಳ್ಳಿ ಪೋಲಿಸರು ವಿಚಾರಣೆ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ನೆಲಮಂಗಲ ಉಪ ವಿಭಾಗದ ಮಾದನಾಯಕನಹಳ್ಳಿ ಠಾಣೆಯಲ್ಲಿ ವಿಚಾರಣೆ ನಡೆಸಿರುವ ಪೊಲೀಸರು ಜಯರಾಮಯ್ಯನ ಹತ್ಯೆಗೆ ಸಂಚು ರೂಪಿಸಿದ್ದ ರೌಡಿಶೀಟರ್​ಗಳನ್ನು ಗಡಿ ಪಾರು ಮಾಡುವ ಸಾಧ್ಯತೆಗಳಿವೆ.

ನನ್ನ ಕೊಲೆಗೆ 60 ಲಕ್ಷ ಸುಪಾರಿ: SR ವಿಶ್ವನಾಥ್​ ವಿರುದ್ಧ ವಡೇರಹಳ್ಳಿ ಜಯರಾಮ್ ಆರೋಪ

Published On - 10:56 am, Wed, 2 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು