AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಂಬ್’ ರಾಜಶೇಖರ್​ ಅಸಲಿ ಚರಿತ್ರೆ: ಮಾವನ ಕುಟುಂಬಸ್ಥರಿಗೆ 10 ವರ್ಷದಿಂದ ನೀಡ್ತಿದ್ದ ಚಿತ್ರಹಿಂಸೆ

ತುಮಕೂರು: CCB, ಸಿಟಿ ಸಿವಿಲ್ ಕೋರ್ಟ್​ಗೆ ಬೆದರಿಕೆ ಪತ್ರ ರವಾನಿಸಿ ಸದ್ಯ ಅರೆಸ್ಟ್​ ಆಗಿರುವ ರಾಜಶೇಖರ್​ಅಲಿಯಾಸ್​ ಬಾಂಬ್​ ರಾಜಶೇಖರ್​ ಅಸಲಿ ಚರಿತ್ರೆ ಪೊಲೀಸ್​ ವಿಚಾರಣೆ ವೇಳೆ ಬಯಲಾಗಿದೆ. ಅತ್ತೆಯ ಆಸ್ತಿಗಾಗಿ ಹವಣಿಸುತ್ತಿದ್ದ ರಾಜಶೇಖರ್​ ಕಳೆದ ಹತ್ತು ವರ್ಷಗಳಿಂದ ಅದಕ್ಕಾಗಿ ಎಲ್ಲಿಲ್ಲದ ನಾಟಕ ಮಾಡಿಕೊಂಡು ಬಂದಿದ್ದನಂತೆ. ಆಸ್ತಿಯನ್ನು ಕಬಳಿಸಲು ತನ್ನ ಅತ್ತೆ, ಹೆಂಡತಿ, ಮಾವ ಮತ್ತು ನಾದಿನಿಗೆ ಇನ್ನಿಲ್ಲದ ಚಿತ್ರಹಿಂಸೆ ನೀಡುತ್ತಿದ್ದ ಎಂದು ಸಹ ತಿಳಿದುಬಂದಿದೆ. ನಾಲ್ಕು ಎಕರೆ ಜಮೀನಿಗಾಗಿ ಷಡ್ಯಂತ್ರ ನಡೆಸಿದ್ದ ರಾಜಶೇಖರ್​ 2019ರಲ್ಲಿ ನಕಲಿ ಛಾಪಾ […]

‘ಬಾಂಬ್’ ರಾಜಶೇಖರ್​ ಅಸಲಿ ಚರಿತ್ರೆ: ಮಾವನ ಕುಟುಂಬಸ್ಥರಿಗೆ 10 ವರ್ಷದಿಂದ ನೀಡ್ತಿದ್ದ ಚಿತ್ರಹಿಂಸೆ
KUSHAL V
| Edited By: |

Updated on: Oct 20, 2020 | 1:24 PM

Share

ತುಮಕೂರು: CCB, ಸಿಟಿ ಸಿವಿಲ್ ಕೋರ್ಟ್​ಗೆ ಬೆದರಿಕೆ ಪತ್ರ ರವಾನಿಸಿ ಸದ್ಯ ಅರೆಸ್ಟ್​ ಆಗಿರುವ ರಾಜಶೇಖರ್​ಅಲಿಯಾಸ್​ ಬಾಂಬ್​ ರಾಜಶೇಖರ್​ ಅಸಲಿ ಚರಿತ್ರೆ ಪೊಲೀಸ್​ ವಿಚಾರಣೆ ವೇಳೆ ಬಯಲಾಗಿದೆ.

ಅತ್ತೆಯ ಆಸ್ತಿಗಾಗಿ ಹವಣಿಸುತ್ತಿದ್ದ ರಾಜಶೇಖರ್​ ಕಳೆದ ಹತ್ತು ವರ್ಷಗಳಿಂದ ಅದಕ್ಕಾಗಿ ಎಲ್ಲಿಲ್ಲದ ನಾಟಕ ಮಾಡಿಕೊಂಡು ಬಂದಿದ್ದನಂತೆ. ಆಸ್ತಿಯನ್ನು ಕಬಳಿಸಲು ತನ್ನ ಅತ್ತೆ, ಹೆಂಡತಿ, ಮಾವ ಮತ್ತು ನಾದಿನಿಗೆ ಇನ್ನಿಲ್ಲದ ಚಿತ್ರಹಿಂಸೆ ನೀಡುತ್ತಿದ್ದ ಎಂದು ಸಹ ತಿಳಿದುಬಂದಿದೆ.

ನಾಲ್ಕು ಎಕರೆ ಜಮೀನಿಗಾಗಿ ಷಡ್ಯಂತ್ರ ನಡೆಸಿದ್ದ ರಾಜಶೇಖರ್​ 2019ರಲ್ಲಿ ನಕಲಿ ಛಾಪಾ ಕಾಗದ ಸೃಷ್ಟಿಸಿ ರಮೇಶ್​ ಹಾಗೂ ತನ್ನ ಮಾವ ಬಸವಲಿಂಗಯ್ಯ ಮೇಲೆ ಆರೋಪ ಹೊರಿಸಿದ್ದನಂತೆ.

ಬಸವಲಿಂಗಯ್ಯ ತನ್ನ ಮಗಳು ಭೂಮಿಕಾಳನ್ನ ಒಂದೂವರೆ ಲಕ್ಷಕ್ಕೆ ಮಾರಟ ಮಾಡಿದ್ದಾರೆಂದು ಆರೋಪ ಮಾಡಿದ್ದನಂತೆ. ತನ್ನ ಮಾವ ಬಸವಲಿಂಗಯ್ಯ ಹಾಗೂ ರಮೇಶ್​ನ ಮೇಲೆ ಆರೋಪ ಹೊರಿಸಲು ನಾದಿನಿ ಮಾರಾಟದ ನಾಟಕವಾಡಿದ್ದ.

ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಈ ಸುಳ್ಳು ಸುದ್ದಿಯನ್ನ ಸಹ ಹಬ್ಬಿಸಿದ್ದನಂತೆ. ಸುದ್ದಿ ಬಳಿಕ ಭೂಮಿಕಾ ಹೇಳಿಕೆ ದಾಖಲು ಮಾಡಿಕೊಂಡಿದ್ದ ಪೊಲೀಸರು ಮತ್ತು ಮಕ್ಕಳ ಸಂರಕ್ಷಣೆ ಅಧಿಕಾರಿಗಳಿಗೆ ರಾಜಶೇಖರ್​ ಸ್ವತಃ ಭೂಮಿಕಾಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಮಾಹಿತಿ ಸಿಕ್ಕಿದೆ. ಆಗ, ಭೂಮಿಕಾ ಮತ್ತು ಬಸವಲಿಂಗಪ್ಪ ನೀಡಿದ್ದ ದೂರಿನನ್ವಯ ಚೇಳೂರು ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದರು.

ರಾಜಶೇಖರ್ ಆಗ ಚೇಳೂರು ಪೊಲೀಸರಿಗೂ ತಲೆ ಬಿಸಿ ತಂದಿದ್ದ ಎಂದು ಹೇಳಲಾಗಿದೆ. ಈ ನಡುವೆ ಪ್ರಕರಣದ ತನಿಖೆ‌ ನಡೆಸಿದ್ದ ಪೊಲೀಸರಿಗೆ ರಾಜಶೇಖರ್​ನ ಷಡ್ಯಂತ್ರ ಗೊತ್ತಾಗಿತ್ತು. ಆಗ, ರಾಜಶೇಖರ್​ಗೆ ಎಚ್ಚರಿಕೆ ನೀಡಿದ್ದರಂತೆ. ಆದರೆ, ಪೊಲೀಸರ‌ ಎಚ್ಚರಿಕೆಯನ್ನ ಲಘುವಾಗಿ ಪರಿಗಣಿಸಿದ ರಾಜಶೇಖರ್​ ಇದೀಗ ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆದು ಬಾಂಬ್​ ರಾಜಶೇಖರ್​ ಆಗಿ ಪರಿಣಮಿಸಿದ್ದಾನೆ.

CCB, ಸಿವಿಲ್ ಕೋರ್ಟ್​ಗೆ ಬೆದರಿಕೆ ಪತ್ರ: ಸಿಕ್ಕಿಬಿದ್ದರು ಇಬ್ಬರು ಆರೋಪಿಗಳು!

ಬಾಂಬ್ ಬೆದರಿಕೆ ಪ್ರಕರಣದ ಸೆನ್ಸೇಷನಲ್ ಇನ್‌ಸೈಡ್ ಸ್ಟೋರಿ.. ಸಿನಿಮೀಯವಾಗಿದೆ ಓದಿ!

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್: