ದಾವಣಗೆರೆ: ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ಪೊಲೀಸರ ಲಾಠಿ ರುಚಿ

ದಾವಣಗೆರೆ: ಹಾಸ್ಟೆಲ್​ನಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ದಾವಣಗೆರೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದಂತೆ ಧರಣಿ ನಡೆಸ್ತಿದ್ದವರು ಪರಾರಿಯಾಗಿದ್ದಾರೆ. ಸಪ್ತಗಿರಿ ಶಾಲೆ ಬಳಿಯ ಬಿಸಿಎಂ ಹಾಸ್ಟೆಲ್​ನಲ್ಲಿ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿ ಹರಿದಾಡುತ್ತಿದೆ. ಇದನ್ನು ನಂಬಿ ಆಶಾ ಕಾರ್ಯಕರ್ತೆಯರ ಊಟ ತಯಾರಿಕೆ ಕೇಂದ್ರದ ಬಳಿ ಯಲ್ಲಮ್ಮ ನಗರ ನಿವಾಸಿಗಳ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಲ್ಲಿ ಯಾರನ್ನು ಕ್ವಾರಂಟೈನ್ ಮಾಡುತ್ತಿಲ್ಲ ಎಂದು ಪೊಲೀಸರು ಹಾಗೂ ಅಧಿಕಾರಿಗಳು […]

ದಾವಣಗೆರೆ: ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ಪೊಲೀಸರ ಲಾಠಿ ರುಚಿ
Follow us
|

Updated on:May 01, 2020 | 3:12 PM

ದಾವಣಗೆರೆ: ಹಾಸ್ಟೆಲ್​ನಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ದಾವಣಗೆರೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದಂತೆ ಧರಣಿ ನಡೆಸ್ತಿದ್ದವರು ಪರಾರಿಯಾಗಿದ್ದಾರೆ.

ಸಪ್ತಗಿರಿ ಶಾಲೆ ಬಳಿಯ ಬಿಸಿಎಂ ಹಾಸ್ಟೆಲ್​ನಲ್ಲಿ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿ ಹರಿದಾಡುತ್ತಿದೆ. ಇದನ್ನು ನಂಬಿ ಆಶಾ ಕಾರ್ಯಕರ್ತೆಯರ ಊಟ ತಯಾರಿಕೆ ಕೇಂದ್ರದ ಬಳಿ ಯಲ್ಲಮ್ಮ ನಗರ ನಿವಾಸಿಗಳ ಪ್ರತಿಭಟನೆಗೆ ಮುಂದಾಗಿದ್ದಾರೆ.

ಇಲ್ಲಿ ಯಾರನ್ನು ಕ್ವಾರಂಟೈನ್ ಮಾಡುತ್ತಿಲ್ಲ ಎಂದು ಪೊಲೀಸರು ಹಾಗೂ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಆದ್ರೂ ಸಹ ಪೊಲೀಸರ ಮಾತಿಗೆ ಸಾರ್ವಜನಿಕರು ಮಣಿದಿಲ್ಲ. ಹಾಗಾಗಿ ಪೊಲೀಸರು ಲಾಠಿ ಬೀಸಿದ ನಂತರ ಸಾರ್ವಜನಿಕರು ಪರಾರಿಯಾಗಿದ್ದಾರೆ.

ಪೊಲೀಸರ ಲಾಠಿ ಏಟಿಗೆ ಕೈ ಬೆರಳು ಕಟ್: ಇದೇ ವೇಳೆ ನಗರದ ರಿಂಗ್‌ ರಸ್ತೆಯಲ್ಲಿ ಪೊಲೀಸರ ಲಾಠಿ ಏಟಿಗೆ ಲಕ್ಷ್ಮಣ್ ಎಂಬುವರ ಮೈಮೇಲೆ ಬಾಸುಂಡೆ ಬಂದಿದ್ದು, ಕೈಬೆರಳು ಕಟ್ ಆಗಿದೆ. ಯಲ್ಲಮ್ಮ ನಗರದ ಬಳಿ ಲಕ್ಷ್ಮಣ್ ನಡೆದುಕೊಂಡು ಹೋಗುತ್ತಿದ್ದರು. ಅನಗತ್ಯವಾಗಿ ಹೊರಗೆ ಬಂದಿರುವೆ ಎಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಗಾಯಾಳು ಲಕ್ಷ್ಮಣ್‌ಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Published On - 1:03 pm, Fri, 1 May 20

ತಾಜಾ ಸುದ್ದಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!