AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ಪೊಲೀಸರ ಲಾಠಿ ರುಚಿ

ದಾವಣಗೆರೆ: ಹಾಸ್ಟೆಲ್​ನಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ದಾವಣಗೆರೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದಂತೆ ಧರಣಿ ನಡೆಸ್ತಿದ್ದವರು ಪರಾರಿಯಾಗಿದ್ದಾರೆ. ಸಪ್ತಗಿರಿ ಶಾಲೆ ಬಳಿಯ ಬಿಸಿಎಂ ಹಾಸ್ಟೆಲ್​ನಲ್ಲಿ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿ ಹರಿದಾಡುತ್ತಿದೆ. ಇದನ್ನು ನಂಬಿ ಆಶಾ ಕಾರ್ಯಕರ್ತೆಯರ ಊಟ ತಯಾರಿಕೆ ಕೇಂದ್ರದ ಬಳಿ ಯಲ್ಲಮ್ಮ ನಗರ ನಿವಾಸಿಗಳ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಲ್ಲಿ ಯಾರನ್ನು ಕ್ವಾರಂಟೈನ್ ಮಾಡುತ್ತಿಲ್ಲ ಎಂದು ಪೊಲೀಸರು ಹಾಗೂ ಅಧಿಕಾರಿಗಳು […]

ದಾವಣಗೆರೆ: ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ಪೊಲೀಸರ ಲಾಠಿ ರುಚಿ
ಸಾಧು ಶ್ರೀನಾಥ್​
|

Updated on:May 01, 2020 | 3:12 PM

Share

ದಾವಣಗೆರೆ: ಹಾಸ್ಟೆಲ್​ನಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ದಾವಣಗೆರೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದಂತೆ ಧರಣಿ ನಡೆಸ್ತಿದ್ದವರು ಪರಾರಿಯಾಗಿದ್ದಾರೆ.

ಸಪ್ತಗಿರಿ ಶಾಲೆ ಬಳಿಯ ಬಿಸಿಎಂ ಹಾಸ್ಟೆಲ್​ನಲ್ಲಿ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿ ಹರಿದಾಡುತ್ತಿದೆ. ಇದನ್ನು ನಂಬಿ ಆಶಾ ಕಾರ್ಯಕರ್ತೆಯರ ಊಟ ತಯಾರಿಕೆ ಕೇಂದ್ರದ ಬಳಿ ಯಲ್ಲಮ್ಮ ನಗರ ನಿವಾಸಿಗಳ ಪ್ರತಿಭಟನೆಗೆ ಮುಂದಾಗಿದ್ದಾರೆ.

ಇಲ್ಲಿ ಯಾರನ್ನು ಕ್ವಾರಂಟೈನ್ ಮಾಡುತ್ತಿಲ್ಲ ಎಂದು ಪೊಲೀಸರು ಹಾಗೂ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಆದ್ರೂ ಸಹ ಪೊಲೀಸರ ಮಾತಿಗೆ ಸಾರ್ವಜನಿಕರು ಮಣಿದಿಲ್ಲ. ಹಾಗಾಗಿ ಪೊಲೀಸರು ಲಾಠಿ ಬೀಸಿದ ನಂತರ ಸಾರ್ವಜನಿಕರು ಪರಾರಿಯಾಗಿದ್ದಾರೆ.

ಪೊಲೀಸರ ಲಾಠಿ ಏಟಿಗೆ ಕೈ ಬೆರಳು ಕಟ್: ಇದೇ ವೇಳೆ ನಗರದ ರಿಂಗ್‌ ರಸ್ತೆಯಲ್ಲಿ ಪೊಲೀಸರ ಲಾಠಿ ಏಟಿಗೆ ಲಕ್ಷ್ಮಣ್ ಎಂಬುವರ ಮೈಮೇಲೆ ಬಾಸುಂಡೆ ಬಂದಿದ್ದು, ಕೈಬೆರಳು ಕಟ್ ಆಗಿದೆ. ಯಲ್ಲಮ್ಮ ನಗರದ ಬಳಿ ಲಕ್ಷ್ಮಣ್ ನಡೆದುಕೊಂಡು ಹೋಗುತ್ತಿದ್ದರು. ಅನಗತ್ಯವಾಗಿ ಹೊರಗೆ ಬಂದಿರುವೆ ಎಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಗಾಯಾಳು ಲಕ್ಷ್ಮಣ್‌ಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Published On - 1:03 pm, Fri, 1 May 20

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ