AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ಪೊಲೀಸರ ಲಾಠಿ ರುಚಿ

ದಾವಣಗೆರೆ: ಹಾಸ್ಟೆಲ್​ನಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ದಾವಣಗೆರೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದಂತೆ ಧರಣಿ ನಡೆಸ್ತಿದ್ದವರು ಪರಾರಿಯಾಗಿದ್ದಾರೆ. ಸಪ್ತಗಿರಿ ಶಾಲೆ ಬಳಿಯ ಬಿಸಿಎಂ ಹಾಸ್ಟೆಲ್​ನಲ್ಲಿ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿ ಹರಿದಾಡುತ್ತಿದೆ. ಇದನ್ನು ನಂಬಿ ಆಶಾ ಕಾರ್ಯಕರ್ತೆಯರ ಊಟ ತಯಾರಿಕೆ ಕೇಂದ್ರದ ಬಳಿ ಯಲ್ಲಮ್ಮ ನಗರ ನಿವಾಸಿಗಳ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಲ್ಲಿ ಯಾರನ್ನು ಕ್ವಾರಂಟೈನ್ ಮಾಡುತ್ತಿಲ್ಲ ಎಂದು ಪೊಲೀಸರು ಹಾಗೂ ಅಧಿಕಾರಿಗಳು […]

ದಾವಣಗೆರೆ: ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ಪೊಲೀಸರ ಲಾಠಿ ರುಚಿ
ಸಾಧು ಶ್ರೀನಾಥ್​
|

Updated on:May 01, 2020 | 3:12 PM

Share

ದಾವಣಗೆರೆ: ಹಾಸ್ಟೆಲ್​ನಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ದಾವಣಗೆರೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದಂತೆ ಧರಣಿ ನಡೆಸ್ತಿದ್ದವರು ಪರಾರಿಯಾಗಿದ್ದಾರೆ.

ಸಪ್ತಗಿರಿ ಶಾಲೆ ಬಳಿಯ ಬಿಸಿಎಂ ಹಾಸ್ಟೆಲ್​ನಲ್ಲಿ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿ ಹರಿದಾಡುತ್ತಿದೆ. ಇದನ್ನು ನಂಬಿ ಆಶಾ ಕಾರ್ಯಕರ್ತೆಯರ ಊಟ ತಯಾರಿಕೆ ಕೇಂದ್ರದ ಬಳಿ ಯಲ್ಲಮ್ಮ ನಗರ ನಿವಾಸಿಗಳ ಪ್ರತಿಭಟನೆಗೆ ಮುಂದಾಗಿದ್ದಾರೆ.

ಇಲ್ಲಿ ಯಾರನ್ನು ಕ್ವಾರಂಟೈನ್ ಮಾಡುತ್ತಿಲ್ಲ ಎಂದು ಪೊಲೀಸರು ಹಾಗೂ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಆದ್ರೂ ಸಹ ಪೊಲೀಸರ ಮಾತಿಗೆ ಸಾರ್ವಜನಿಕರು ಮಣಿದಿಲ್ಲ. ಹಾಗಾಗಿ ಪೊಲೀಸರು ಲಾಠಿ ಬೀಸಿದ ನಂತರ ಸಾರ್ವಜನಿಕರು ಪರಾರಿಯಾಗಿದ್ದಾರೆ.

ಪೊಲೀಸರ ಲಾಠಿ ಏಟಿಗೆ ಕೈ ಬೆರಳು ಕಟ್: ಇದೇ ವೇಳೆ ನಗರದ ರಿಂಗ್‌ ರಸ್ತೆಯಲ್ಲಿ ಪೊಲೀಸರ ಲಾಠಿ ಏಟಿಗೆ ಲಕ್ಷ್ಮಣ್ ಎಂಬುವರ ಮೈಮೇಲೆ ಬಾಸುಂಡೆ ಬಂದಿದ್ದು, ಕೈಬೆರಳು ಕಟ್ ಆಗಿದೆ. ಯಲ್ಲಮ್ಮ ನಗರದ ಬಳಿ ಲಕ್ಷ್ಮಣ್ ನಡೆದುಕೊಂಡು ಹೋಗುತ್ತಿದ್ದರು. ಅನಗತ್ಯವಾಗಿ ಹೊರಗೆ ಬಂದಿರುವೆ ಎಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಗಾಯಾಳು ಲಕ್ಷ್ಮಣ್‌ಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Published On - 1:03 pm, Fri, 1 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ