AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ಪೊಲೀಸರ ಲಾಠಿ ರುಚಿ

ದಾವಣಗೆರೆ: ಹಾಸ್ಟೆಲ್​ನಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ದಾವಣಗೆರೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದಂತೆ ಧರಣಿ ನಡೆಸ್ತಿದ್ದವರು ಪರಾರಿಯಾಗಿದ್ದಾರೆ. ಸಪ್ತಗಿರಿ ಶಾಲೆ ಬಳಿಯ ಬಿಸಿಎಂ ಹಾಸ್ಟೆಲ್​ನಲ್ಲಿ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿ ಹರಿದಾಡುತ್ತಿದೆ. ಇದನ್ನು ನಂಬಿ ಆಶಾ ಕಾರ್ಯಕರ್ತೆಯರ ಊಟ ತಯಾರಿಕೆ ಕೇಂದ್ರದ ಬಳಿ ಯಲ್ಲಮ್ಮ ನಗರ ನಿವಾಸಿಗಳ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಲ್ಲಿ ಯಾರನ್ನು ಕ್ವಾರಂಟೈನ್ ಮಾಡುತ್ತಿಲ್ಲ ಎಂದು ಪೊಲೀಸರು ಹಾಗೂ ಅಧಿಕಾರಿಗಳು […]

ದಾವಣಗೆರೆ: ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ಪೊಲೀಸರ ಲಾಠಿ ರುಚಿ
ಸಾಧು ಶ್ರೀನಾಥ್​
|

Updated on:May 01, 2020 | 3:12 PM

Share

ದಾವಣಗೆರೆ: ಹಾಸ್ಟೆಲ್​ನಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿಗೆ ಕಿವಿಗೊಟ್ಟು ಪ್ರತಿಭಟನೆ ನಡೆಸುತ್ತಿದ್ದವರಿಗೆ ದಾವಣಗೆರೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದಂತೆ ಧರಣಿ ನಡೆಸ್ತಿದ್ದವರು ಪರಾರಿಯಾಗಿದ್ದಾರೆ.

ಸಪ್ತಗಿರಿ ಶಾಲೆ ಬಳಿಯ ಬಿಸಿಎಂ ಹಾಸ್ಟೆಲ್​ನಲ್ಲಿ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂಬ ವದಂತಿ ಹರಿದಾಡುತ್ತಿದೆ. ಇದನ್ನು ನಂಬಿ ಆಶಾ ಕಾರ್ಯಕರ್ತೆಯರ ಊಟ ತಯಾರಿಕೆ ಕೇಂದ್ರದ ಬಳಿ ಯಲ್ಲಮ್ಮ ನಗರ ನಿವಾಸಿಗಳ ಪ್ರತಿಭಟನೆಗೆ ಮುಂದಾಗಿದ್ದಾರೆ.

ಇಲ್ಲಿ ಯಾರನ್ನು ಕ್ವಾರಂಟೈನ್ ಮಾಡುತ್ತಿಲ್ಲ ಎಂದು ಪೊಲೀಸರು ಹಾಗೂ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಆದ್ರೂ ಸಹ ಪೊಲೀಸರ ಮಾತಿಗೆ ಸಾರ್ವಜನಿಕರು ಮಣಿದಿಲ್ಲ. ಹಾಗಾಗಿ ಪೊಲೀಸರು ಲಾಠಿ ಬೀಸಿದ ನಂತರ ಸಾರ್ವಜನಿಕರು ಪರಾರಿಯಾಗಿದ್ದಾರೆ.

ಪೊಲೀಸರ ಲಾಠಿ ಏಟಿಗೆ ಕೈ ಬೆರಳು ಕಟ್: ಇದೇ ವೇಳೆ ನಗರದ ರಿಂಗ್‌ ರಸ್ತೆಯಲ್ಲಿ ಪೊಲೀಸರ ಲಾಠಿ ಏಟಿಗೆ ಲಕ್ಷ್ಮಣ್ ಎಂಬುವರ ಮೈಮೇಲೆ ಬಾಸುಂಡೆ ಬಂದಿದ್ದು, ಕೈಬೆರಳು ಕಟ್ ಆಗಿದೆ. ಯಲ್ಲಮ್ಮ ನಗರದ ಬಳಿ ಲಕ್ಷ್ಮಣ್ ನಡೆದುಕೊಂಡು ಹೋಗುತ್ತಿದ್ದರು. ಅನಗತ್ಯವಾಗಿ ಹೊರಗೆ ಬಂದಿರುವೆ ಎಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಗಾಯಾಳು ಲಕ್ಷ್ಮಣ್‌ಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Published On - 1:03 pm, Fri, 1 May 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು