AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಿಗೆ ಗುಂಡು ಹಾರಿಸಿ ದರೋಡೆಕೋರನನ್ನು ಬಂಧಿಸಿದ ಪೊಲೀಸರು

ಯಲಹಂಕದಲ್ಲಿ ಸರಣಿ ಬೈಕ್ ಕಳ್ಳತನ, ಸರ ಕಳ್ಳತನ, ಮತ್ತು ರಾಬರಿ ಮಾಡುತ್ತಿದ್ದ ತಂಡ ಇದಾಗಿದ್ದು, ನಿನ್ನೆ ಓರ್ವ ಹಾಗೂ ಇಂದು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳಿಂದ ಶಬರೀಶ್ ಗ್ಯಾಂಗ್​ನ ಮೂವರ ಬಂಧನವಾಗಿದ್ದು ಶಬರೀಶ್ ಅಲಿಯಾಸ್ ಅಪ್ಪಿ, ಇಮ್ರಾನ್ ಪಾಷ ಮತ್ತು ರಂಜಿತ್ ಈ ವರೆಗೆ ಬಂಧಿತರು.

ಕಾಲಿಗೆ ಗುಂಡು ಹಾರಿಸಿ ದರೋಡೆಕೋರನನ್ನು ಬಂಧಿಸಿದ ಪೊಲೀಸರು
ಗಾಯಗೊಂಡ ಪೊಲೀಸ್ ಕಾನ್ಸ್​ಟೇಬಲ್​ ಮಧುಕುಮಾರ್​ (ಎಡ), ಆರೋಪಿ ಇಮ್ರಾನ್ ಪಾಷ
ಆಯೇಷಾ ಬಾನು
| Updated By: Digi Tech Desk|

Updated on:Feb 12, 2021 | 9:19 AM

Share

ದೇವನಹಳ್ಳಿ: ಬೆಂಗಳೂರಿನಲ್ಲಿ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯ ಕಳತ್ತೂರು ಫಾರ್ಮ್ ಬಳಿ ದರೋಡೆಕೋರ ಇಮ್ರಾನ್ ಪಾಷಾನ ಕಾಲಿಗೆ ಯಲಹಂಕ ಉಪನಗರ ಠಾಣೆ ಇನ್ಸ್​ಪೆಕ್ಟರ್ ಅರುಣ್ ಕುಮಾರ್‌ ಗುಂಡು ಹಾರಿಸಿ ಬಂಧಿಸಿದ್ದಾರೆ. ನಿನ್ನೆ ಯಲಹಂಕದಲ್ಲಿ ಶಬರೀಶ್ ಮೇಲೆ ಗುಂಡು ಹಾರಿಸಿ ಸೆರೆ ಹಿಡಿಯಲಾಗಿತ್ತು. ಇದೀಗ ಈತನ ಸಹಚರ ಇಮ್ರಾನ್ ಪಾಷಾ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಮುಂಜಾನೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಯಲಹಂಕದಲ್ಲಿ ಸರಣಿ ಬೈಕ್ ಕಳ್ಳತನ, ಸರ ಕಳ್ಳತನ, ಮತ್ತು ರಾಬರಿ ಮಾಡುತ್ತಿದ್ದ ತಂಡ ಇದಾಗಿದ್ದು, ನಿನ್ನೆ ಓರ್ವ ಹಾಗೂ ಇಂದು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳಿಂದ ಶಬರೀಶ್ ಗ್ಯಾಂಗ್​ನ ಮೂವರ ಬಂಧನವಾಗಿದ್ದು ಶಬರೀಶ್ ಅಲಿಯಾಸ್ ಅಪ್ಪಿ, ಇಮ್ರಾನ್ ಪಾಷ ಮತ್ತು ರಂಜಿತ್ ಈ ವರೆಗೆ ಬಂಧಿತರು.

ಇನ್ನು ಇಮ್ರಾನ್ ಬಂಧನದ ವೇಳೆ ಯಲಹಂಕ ಉಪನಗರ ಪೊಲೀಸ್ ಕಾನ್ಸ್​ಟೇಬಲ್​ ಮಧುಕುಮಾರ್​ಗೆ ಗಾಯಗಳಾಗಿವೆ. ಹಾಗೂ ಆರೋಪಿ ಇಮ್ರಾನ್ ಎಡಗಾಲಿಗೆ ಗುಂಡು ಬಿದ್ದಿದೆ. ಸದ್ಯ ಗಾಯಾಳುಗಳಿಗೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಪೊಲೀಸ್ ಗನ್ ಸದ್ದು , ಆರೋಪಿಗಳ ಕಾಲಿಗೆ ಗುಂಡು

Published On - 9:12 am, Fri, 12 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ