AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಿಗೆ ಗುಂಡು ಹಾರಿಸಿ ದರೋಡೆಕೋರನನ್ನು ಬಂಧಿಸಿದ ಪೊಲೀಸರು

ಯಲಹಂಕದಲ್ಲಿ ಸರಣಿ ಬೈಕ್ ಕಳ್ಳತನ, ಸರ ಕಳ್ಳತನ, ಮತ್ತು ರಾಬರಿ ಮಾಡುತ್ತಿದ್ದ ತಂಡ ಇದಾಗಿದ್ದು, ನಿನ್ನೆ ಓರ್ವ ಹಾಗೂ ಇಂದು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳಿಂದ ಶಬರೀಶ್ ಗ್ಯಾಂಗ್​ನ ಮೂವರ ಬಂಧನವಾಗಿದ್ದು ಶಬರೀಶ್ ಅಲಿಯಾಸ್ ಅಪ್ಪಿ, ಇಮ್ರಾನ್ ಪಾಷ ಮತ್ತು ರಂಜಿತ್ ಈ ವರೆಗೆ ಬಂಧಿತರು.

ಕಾಲಿಗೆ ಗುಂಡು ಹಾರಿಸಿ ದರೋಡೆಕೋರನನ್ನು ಬಂಧಿಸಿದ ಪೊಲೀಸರು
ಗಾಯಗೊಂಡ ಪೊಲೀಸ್ ಕಾನ್ಸ್​ಟೇಬಲ್​ ಮಧುಕುಮಾರ್​ (ಎಡ), ಆರೋಪಿ ಇಮ್ರಾನ್ ಪಾಷ
ಆಯೇಷಾ ಬಾನು
| Edited By: |

Updated on:Feb 12, 2021 | 9:19 AM

Share

ದೇವನಹಳ್ಳಿ: ಬೆಂಗಳೂರಿನಲ್ಲಿ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯ ಕಳತ್ತೂರು ಫಾರ್ಮ್ ಬಳಿ ದರೋಡೆಕೋರ ಇಮ್ರಾನ್ ಪಾಷಾನ ಕಾಲಿಗೆ ಯಲಹಂಕ ಉಪನಗರ ಠಾಣೆ ಇನ್ಸ್​ಪೆಕ್ಟರ್ ಅರುಣ್ ಕುಮಾರ್‌ ಗುಂಡು ಹಾರಿಸಿ ಬಂಧಿಸಿದ್ದಾರೆ. ನಿನ್ನೆ ಯಲಹಂಕದಲ್ಲಿ ಶಬರೀಶ್ ಮೇಲೆ ಗುಂಡು ಹಾರಿಸಿ ಸೆರೆ ಹಿಡಿಯಲಾಗಿತ್ತು. ಇದೀಗ ಈತನ ಸಹಚರ ಇಮ್ರಾನ್ ಪಾಷಾ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಮುಂಜಾನೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಯಲಹಂಕದಲ್ಲಿ ಸರಣಿ ಬೈಕ್ ಕಳ್ಳತನ, ಸರ ಕಳ್ಳತನ, ಮತ್ತು ರಾಬರಿ ಮಾಡುತ್ತಿದ್ದ ತಂಡ ಇದಾಗಿದ್ದು, ನಿನ್ನೆ ಓರ್ವ ಹಾಗೂ ಇಂದು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳಿಂದ ಶಬರೀಶ್ ಗ್ಯಾಂಗ್​ನ ಮೂವರ ಬಂಧನವಾಗಿದ್ದು ಶಬರೀಶ್ ಅಲಿಯಾಸ್ ಅಪ್ಪಿ, ಇಮ್ರಾನ್ ಪಾಷ ಮತ್ತು ರಂಜಿತ್ ಈ ವರೆಗೆ ಬಂಧಿತರು.

ಇನ್ನು ಇಮ್ರಾನ್ ಬಂಧನದ ವೇಳೆ ಯಲಹಂಕ ಉಪನಗರ ಪೊಲೀಸ್ ಕಾನ್ಸ್​ಟೇಬಲ್​ ಮಧುಕುಮಾರ್​ಗೆ ಗಾಯಗಳಾಗಿವೆ. ಹಾಗೂ ಆರೋಪಿ ಇಮ್ರಾನ್ ಎಡಗಾಲಿಗೆ ಗುಂಡು ಬಿದ್ದಿದೆ. ಸದ್ಯ ಗಾಯಾಳುಗಳಿಗೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಪೊಲೀಸ್ ಗನ್ ಸದ್ದು , ಆರೋಪಿಗಳ ಕಾಲಿಗೆ ಗುಂಡು

Published On - 9:12 am, Fri, 12 February 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?