ಕಾಲಿಗೆ ಗುಂಡು ಹಾರಿಸಿ ದರೋಡೆಕೋರನನ್ನು ಬಂಧಿಸಿದ ಪೊಲೀಸರು

ಯಲಹಂಕದಲ್ಲಿ ಸರಣಿ ಬೈಕ್ ಕಳ್ಳತನ, ಸರ ಕಳ್ಳತನ, ಮತ್ತು ರಾಬರಿ ಮಾಡುತ್ತಿದ್ದ ತಂಡ ಇದಾಗಿದ್ದು, ನಿನ್ನೆ ಓರ್ವ ಹಾಗೂ ಇಂದು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳಿಂದ ಶಬರೀಶ್ ಗ್ಯಾಂಗ್​ನ ಮೂವರ ಬಂಧನವಾಗಿದ್ದು ಶಬರೀಶ್ ಅಲಿಯಾಸ್ ಅಪ್ಪಿ, ಇಮ್ರಾನ್ ಪಾಷ ಮತ್ತು ರಂಜಿತ್ ಈ ವರೆಗೆ ಬಂಧಿತರು.

ಕಾಲಿಗೆ ಗುಂಡು ಹಾರಿಸಿ ದರೋಡೆಕೋರನನ್ನು ಬಂಧಿಸಿದ ಪೊಲೀಸರು
ಗಾಯಗೊಂಡ ಪೊಲೀಸ್ ಕಾನ್ಸ್​ಟೇಬಲ್​ ಮಧುಕುಮಾರ್​ (ಎಡ), ಆರೋಪಿ ಇಮ್ರಾನ್ ಪಾಷ
ಆಯೇಷಾ ಬಾನು Edited By:

Updated on: Feb 12, 2021 | 9:19 AM

ದೇವನಹಳ್ಳಿ: ಬೆಂಗಳೂರಿನಲ್ಲಿ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯ ಕಳತ್ತೂರು ಫಾರ್ಮ್ ಬಳಿ ದರೋಡೆಕೋರ ಇಮ್ರಾನ್ ಪಾಷಾನ ಕಾಲಿಗೆ ಯಲಹಂಕ ಉಪನಗರ ಠಾಣೆ ಇನ್ಸ್​ಪೆಕ್ಟರ್ ಅರುಣ್ ಕುಮಾರ್‌ ಗುಂಡು ಹಾರಿಸಿ ಬಂಧಿಸಿದ್ದಾರೆ. ನಿನ್ನೆ ಯಲಹಂಕದಲ್ಲಿ ಶಬರೀಶ್ ಮೇಲೆ ಗುಂಡು ಹಾರಿಸಿ ಸೆರೆ ಹಿಡಿಯಲಾಗಿತ್ತು. ಇದೀಗ ಈತನ ಸಹಚರ ಇಮ್ರಾನ್ ಪಾಷಾ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಮುಂಜಾನೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಯಲಹಂಕದಲ್ಲಿ ಸರಣಿ ಬೈಕ್ ಕಳ್ಳತನ, ಸರ ಕಳ್ಳತನ, ಮತ್ತು ರಾಬರಿ ಮಾಡುತ್ತಿದ್ದ ತಂಡ ಇದಾಗಿದ್ದು, ನಿನ್ನೆ ಓರ್ವ ಹಾಗೂ ಇಂದು ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳಿಂದ ಶಬರೀಶ್ ಗ್ಯಾಂಗ್​ನ ಮೂವರ ಬಂಧನವಾಗಿದ್ದು ಶಬರೀಶ್ ಅಲಿಯಾಸ್ ಅಪ್ಪಿ, ಇಮ್ರಾನ್ ಪಾಷ ಮತ್ತು ರಂಜಿತ್ ಈ ವರೆಗೆ ಬಂಧಿತರು.

ಇನ್ನು ಇಮ್ರಾನ್ ಬಂಧನದ ವೇಳೆ ಯಲಹಂಕ ಉಪನಗರ ಪೊಲೀಸ್ ಕಾನ್ಸ್​ಟೇಬಲ್​ ಮಧುಕುಮಾರ್​ಗೆ ಗಾಯಗಳಾಗಿವೆ. ಹಾಗೂ ಆರೋಪಿ ಇಮ್ರಾನ್ ಎಡಗಾಲಿಗೆ ಗುಂಡು ಬಿದ್ದಿದೆ. ಸದ್ಯ ಗಾಯಾಳುಗಳಿಗೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಪೊಲೀಸ್ ಗನ್ ಸದ್ದು , ಆರೋಪಿಗಳ ಕಾಲಿಗೆ ಗುಂಡು

Published On - 9:12 am, Fri, 12 February 21

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us