AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡನೋಡ್ತಿದ್ದಂತೆ ಪೊಲೀಸರ ಮೇಲೆ ಎರಗಿ ಬಂತು ಟಾಟಾ ಸುಮೋ.. ಎಲ್ಲಿ?

ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿಗೆ ವಾಹನವೊಂದು ಗುದ್ದಿ ಗಾಯಗಳಾಗಿರುವ ಘಟನೆ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ‌ ನಡೆದಿದೆ. ಹೈಕೋರ್ಟ್ ಎದುರು ಇರುವ ವಿಧಾನಸೌಧದ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ವಿಧಾನಸೌಧವನ್ನ ಪ್ರವೇಶಿಸುತ್ತಿದ್ದ ಕೃಷಿ ಇಲಾಖೆಗೆ ಸೇರಿದ್ದ ಟಾಟಾ ಸುಮೋ ವಾಹನದ ಸ್ಟೀರಿಂಗ್​ ಲಾಕ್​ ಆಗಿ ಅಲ್ಲೇ ಇದ್ದ ಭದ್ರತಾ​ ಸಿಬ್ಬಂದಿಯ ಕಡೆಗೆ ನುಗ್ಗಿ ಅವರನ್ನು ಗುದ್ದಿದೆ ಎಂದು ತಿಳಿದುಬಂದಿದೆ. ಪೊಲೀಸರ ಮೇಲೆ ನುಗ್ಗಿದ ಟಾಟಾ ಸುಮೋ ಅವರನ್ನು ಗುದ್ದಿದ ಬಳಿಕ ಗೇಟ್​ ಪಕ್ಕದ ಕಲ್ಲಿನ […]

ನೋಡನೋಡ್ತಿದ್ದಂತೆ ಪೊಲೀಸರ ಮೇಲೆ ಎರಗಿ ಬಂತು ಟಾಟಾ ಸುಮೋ.. ಎಲ್ಲಿ?
KUSHAL V
|

Updated on:Jul 02, 2020 | 12:55 PM

Share

ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿಗೆ ವಾಹನವೊಂದು ಗುದ್ದಿ ಗಾಯಗಳಾಗಿರುವ ಘಟನೆ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ‌ ನಡೆದಿದೆ. ಹೈಕೋರ್ಟ್ ಎದುರು ಇರುವ ವಿಧಾನಸೌಧದ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.

ವಿಧಾನಸೌಧವನ್ನ ಪ್ರವೇಶಿಸುತ್ತಿದ್ದ ಕೃಷಿ ಇಲಾಖೆಗೆ ಸೇರಿದ್ದ ಟಾಟಾ ಸುಮೋ ವಾಹನದ ಸ್ಟೀರಿಂಗ್​ ಲಾಕ್​ ಆಗಿ ಅಲ್ಲೇ ಇದ್ದ ಭದ್ರತಾ​ ಸಿಬ್ಬಂದಿಯ ಕಡೆಗೆ ನುಗ್ಗಿ ಅವರನ್ನು ಗುದ್ದಿದೆ ಎಂದು ತಿಳಿದುಬಂದಿದೆ. ಪೊಲೀಸರ ಮೇಲೆ ನುಗ್ಗಿದ ಟಾಟಾ ಸುಮೋ ಅವರನ್ನು ಗುದ್ದಿದ ಬಳಿಕ ಗೇಟ್​ ಪಕ್ಕದ ಕಲ್ಲಿನ ಕಾಂಪೌಂಡ್​ಗೆ ಗುದ್ದಿ ಅಲ್ಲಿ ನಿಂತಿತು.

ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ, ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ASI ರಾಮು ಅವರ ಕಾಲು ಮುರಿದಿದೆ ಎಂದು ತಿಳಿದುಬಂದಿದೆ. ಮತ್ತೋರ್ವ ಮಹಿಳಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯಕ್ಕೆ ಗಾಯಾಳುಗಳನ್ನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗಿದೆ.

Published On - 12:32 pm, Thu, 2 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್