AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಹೊಡೆದಾಟ..ರಾಜಕೀಯ ದ್ವೇಷ: ಯೋಧನ ಕುಟುಂಬಸ್ಥರ ಮೇಲೆ ಗ್ರಾಮಸ್ಥರಿಂದ ಹಲ್ಲೆ

ಯೋಧ ಜಗದೀಶ್ ತಾಯಿ ಲಕ್ಕವ್ವ ,ಸಹೋದರ ರಮೇಶ್ ಹಾಗೂ ತಂದೆ ರಂಗಪ್ಪನ ಮೇಲೆ ಆರೋಪಿಗಳು ಕಲ್ಲಿನಿಂದ ಹೊಡೆದಿದ್ದು, ದೈಹಿಕ ಹಲ್ಲೆ ನಡೆಸಿದ್ದಾರೆ. ಇದರಿಂದ ಯೋಧನ ಕುಟುಂಬಸ್ಥರ ಕೈ ಹಾಗೂ ತಲೆಗೆ ಗಾಯಗಳಾಗಿವೆ. ಲಕ್ಕವ್ವ ಜಗಳ ಬಿಡಿಸಲು ಬಂದಾಗ ಆಕೆಯನ್ನು ಎಳೆದಾಡಿ ನೂಕಾಡಿದ ಪರಿಣಾಮ ಕಾಲಿಗೆ ಒಳಪೆಟ್ಟಾಗಿದೆ ಎಂದು ದೂರಲಾಗಿದೆ.

ಗ್ರಾಮ ಪಂಚಾಯತಿ ಹೊಡೆದಾಟ..ರಾಜಕೀಯ ದ್ವೇಷ: ಯೋಧನ ಕುಟುಂಬಸ್ಥರ ಮೇಲೆ ಗ್ರಾಮಸ್ಥರಿಂದ ಹಲ್ಲೆ
ಬಾಗಲಕೋಟೆ ಎಸ್​ಪಿ  ಲೋಕೇಶ್​ ಜಗಲಾಸರ್
Skanda
| Edited By: |

Updated on: Dec 16, 2020 | 1:17 PM

Share

ಬಾಗಲಕೋಟೆ: ಸದ್ಯ ಎಲ್ಲ ಕಡೆ ಗ್ರಾಮ ಪಂಚಾಯತಿ ಚುನಾವಣೆಯದ್ದೇ ಸುದ್ದಿ. ಹಳ್ಳಿ ಕಟ್ಟೆಗಳ ಮೇಲೆಲ್ಲಾ ರಾಜಕೀಯ ಚರ್ಚೆ. ಚುನಾವಣೆ ಹತ್ತಿರಾಗುತ್ತಿದ್ದಂತೆ ಗ್ರಾಮ ಗ್ರಾಮಗಳಲ್ಲಿ ಬಿರುಸಿನ ಚಟುವಟಿಕೆಗಳು ಶುರುವಾಗಿವೆ‌. ಹಳ್ಳಿ ಕದನ ಎಂದರೆ ಕೇಳಬೇಕೇ? ಕೆಲವು ಕಡೆಯಂತೂ ಪ್ರಚಾರದ ಕಾವಿನ ಜೊತೆಗೆ ಜಗಳ, ಹೊಡೆದಾಟಗಳ ಬಿಸಿಯೂ ಊರನ್ನು ತಲುಪುತ್ತಿವೆ.

ಬಾಗಲಕೋಟೆ ಜಿಲ್ಲೆಯ ಶಿರಗುಪ್ಪಿ ಗ್ರಾಮದಲ್ಲೂ ಚುನಾವಣೆಯ ಕಾವು ಜಗಳಕ್ಕೆ ನಾಂದಿ ಹಾಡಿದೆ. ಭಾರತೀಯ ಸೇನೆಯಲ್ಲಿ ಯೋಧನಾಗಿ ಛತ್ತೀಸ್​ಗಢದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಗದೀಶ್​ ಅವರ ಕುಟುಂಬದ ಮೇಲೆ ರಾಜಕೀಯ ಕಾರಣದಿಂದ ಹಲ್ಲೆ ಮಾಡಿರುವುದು ಬೆಳಕಿಗೆ ಬಂದಿದೆ. ಯೋಧ ಜಗದೀಶ್​ ಬರಗಾಲ ಅವರ ಕುಟುಂಬ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದೇ ಹಲ್ಲೆಗೆ ಕಾರಣ ಎನ್ನಲಾಗುತ್ತಿದೆ.

ಕಾತರಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಜೆಪಿ ಅಭ್ಯರ್ಥಿ ಪರ ಜಗದೀಶ್​ ಕುಟುಂಬದವರು ಪ್ರಚಾರ ಮಾಡಿದ್ದಕ್ಕೆ ಕೆರಳಿದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಸಣ್ಣಪ್ಪ ಗಡ್ಡಿ ಹಿಂಬಾಲಕರು ಹಲ್ಲೆ ಮಾಡಿದ್ದಾರೆ. ಲಕ್ಷ್ಮಣ ಜುಂಜೂರಿ, ಹೊಳ್ಳೆಪ್ಪ ಜುಂಜೂರಿ ಮತ್ತು ಸದಪ್ಪ ಜಿಂಜುರಿ ಎನ್ನುವವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಯೋಧನ ತಾಯಿ ಲಕ್ಕವ್ವ, ಸಹೋದರ ರಮೇಶ್ ಹಾಗೂ ತಂದೆ ರಂಗಪ್ಪನ ಮೇಲೆ ಆರೋಪಿಗಳು ಕಲ್ಲಿನಿಂದ ಹೊಡೆದಿದ್ದು, ದೈಹಿಕ ಹಲ್ಲೆ ನಡೆಸಿದ್ದಾರೆ. ಇದರಿಂದ ಯೋಧನ ಕುಟುಂಬಸ್ಥರ ಕೈ ಹಾಗೂ ತಲೆಗೆ ಗಾಯಗಳಾಗಿವೆ. ಲಕ್ಕವ್ವ ಜಗಳ ಬಿಡಿಸಲು ಬಂದಾಗ ಆಕೆಯನ್ನು ಎಳೆದಾಡಿ ನೂಕಾಡಿದ ಪರಿಣಾಮ ಕಾಲಿಗೆ ಒಳಪೆಟ್ಟಾಗಿದೆ ಎಂದು ದೂರಲಾಗಿದೆ.

ದೇಶ ಸೇವೆಯಲ್ಲಿ ನಿರತರಾಗಿರುವ ಯೋಧನ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿರುವುದನ್ನು ಹಲವರು ಖಂಡಿಸಿದ್ದಾರೆ. ಸದ್ಯ ಯೋಧನ ಕುಟುಂಬಸ್ಥರು ರಕ್ಷಣೆ ಕೋರಿ ಎಸ್​ಪಿ ಕಚೇರಿಯ ಮೆಟ್ಟಿಲು ಹತ್ತಿ ಕಣ್ಣೀರಿಟ್ಟಿದ್ದಾರೆ. ಅವರ ನೋವಿಗೆ ಸ್ಪಂದಿಸಿರುವ ಬಾಗಲಕೋಟೆ ಎಸ್​ಪಿ  ಲೋಕೇಶ್​ ಜಗಲಾಸರ್ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಬಗ್ಗೆ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯೋಧನ ಮೇಲೆ ಹಲ್ಲೆ: ಕೇಸ್ ವಾಪಸ್, ತನಿಖೆ ಬಳಿಕ ಪೊಲೀಸರ ವಿರುದ್ಧ ಕ್ರಮ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ