AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರ ವೈವಾಹಿಕ ಜೀವನದಲ್ಲಿ ಏರಿಳಿತಗಳು ಇರೋಲ್ಲ ಹೇಳಿ? ನಾವು ಮತ್ತೆ ಒಂದಾಗಿದ್ದೇವೆ’

ಮುಂಬೈ: ಮದುವೆಯಾಗಿ ಇನ್ನೂ ಕೈಗೆ ಹಾಕಿದ ಮೆಹಂದಿ ಸಹ ಮಾಸಿಲ್ಲ. ಅಷ್ಟರಲ್ಲಾಗಲೇ ಪೂನಂ ಪಾಂಡೆ ಹಾಗೂ ಪತಿ ಸ್ಯಾಮ್ ಅಹಮದ್ ಬಾಂಬೆ ನಡುವೆ ಅನೇಕ ಬಿರುಕುಗಳು ಕಾಣಿಸುತ್ತಿವೆ. ಕೆಲ ದಿನಗಳ ಹಿಂದೆಯಷ್ಟೆ ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಳು. ನನ್ನ ಪತಿ ಕಿರುಕುಳ ನೀಡಿ ಬೆದರಿಕೆ ಹಾಕಿ, ಹಲ್ಲೆ ಮಾಡಿದ್ದಾನೆ ಎಂದು ಗೋವಾ ಪೊಲೀಸರಿಂದ ಪತಿಯನ್ನು ಅರೆಸ್ಟ್ ಮಾಡಿಸಿದ್ದಳು. ಇಷ್ಟೆಲ್ಲಾ ರಂಪಾಟದ ನಂತರ ಈ ನವ ಜೋಡಿ ಮತ್ತೆ ಒಂದಾಗಿದ್ದಾರೆ. ‘ಯಾರ ವೈವಾಹಿಕ ಜೀವನದಲ್ಲಿ […]

‘ಯಾರ ವೈವಾಹಿಕ ಜೀವನದಲ್ಲಿ ಏರಿಳಿತಗಳು ಇರೋಲ್ಲ ಹೇಳಿ? ನಾವು ಮತ್ತೆ ಒಂದಾಗಿದ್ದೇವೆ’
ಆಯೇಷಾ ಬಾನು
ಆಯೇಷಾ ಬಾನು|

Updated on:Nov 24, 2020 | 7:42 AM

Share

ಮುಂಬೈ: ಮದುವೆಯಾಗಿ ಇನ್ನೂ ಕೈಗೆ ಹಾಕಿದ ಮೆಹಂದಿ ಸಹ ಮಾಸಿಲ್ಲ. ಅಷ್ಟರಲ್ಲಾಗಲೇ ಪೂನಂ ಪಾಂಡೆ ಹಾಗೂ ಪತಿ ಸ್ಯಾಮ್ ಅಹಮದ್ ಬಾಂಬೆ ನಡುವೆ ಅನೇಕ ಬಿರುಕುಗಳು ಕಾಣಿಸುತ್ತಿವೆ. ಕೆಲ ದಿನಗಳ ಹಿಂದೆಯಷ್ಟೆ ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಳು. ನನ್ನ ಪತಿ ಕಿರುಕುಳ ನೀಡಿ ಬೆದರಿಕೆ ಹಾಕಿ, ಹಲ್ಲೆ ಮಾಡಿದ್ದಾನೆ ಎಂದು ಗೋವಾ ಪೊಲೀಸರಿಂದ ಪತಿಯನ್ನು ಅರೆಸ್ಟ್ ಮಾಡಿಸಿದ್ದಳು. ಇಷ್ಟೆಲ್ಲಾ ರಂಪಾಟದ ನಂತರ ಈ ನವ ಜೋಡಿ ಮತ್ತೆ ಒಂದಾಗಿದ್ದಾರೆ. ‘ಯಾರ ವೈವಾಹಿಕ ಜೀವನದಲ್ಲಿ ಏರಿಳಿತಗಳು ಇರೋಲ್ಲ ಹೇಳಿ? ನಾವು ಮತ್ತೆ ಒಂದಾಗಿದ್ದೇವೆ’ ಎಂದೂ ಪೂನಂ ವಗ್ಗರಣೆ ಹಾಕಿದ್ದಾಳೆ.

ನಾವಿಬ್ಬರೂ ಪರಸ್ಪರ ಹುಚ್ಚರಂತೆ ಪ್ರೀತಿಸ್ತಿದ್ದೇವೆ! ಹೌದು ಅರೆಸ್ಟ್ ಆದ ಬಳಿಕ ಜಾಮೀನಿನ ಮೇಲೆ ಪತಿ ಸ್ಯಾಮ್​ ಬಿಡುಗಡೆ ಆಗಿದ್ದಾನೆ. ಶನಿವಾರ ತಡರಾತ್ರಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅವರ ವಿವಾಹದ ಫೋಟೋಗಳನ್ನು ಫೋಸ್ಟ್ ಮಾಡಿದ್ದಾನೆ.

ಈ ಬಗ್ಗೆ ಮಾತನಾಡಿದ ಹಾಟ್ ಬ್ಯೂಟಿ ಪೂನಂ, ಸ್ಯಾಮ್ ಅಳುತ್ತಿದ್ದಾನೆ. ಆತನ ವಿರುದ್ಧ ಹಾಕಿರುವ ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ಆತ ಬೇಡಿಕೊಳ್ಳುತ್ತಿದ್ದಾನೆ. ಹಾಗೂ ಮುಂದೆ ಈ ರೀತಿಯ ತಪ್ಪು ಮಾಡುವುದಿಲ್ಲ. ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದೂ ಭರವಸೆ ನೀಡಿದ್ದಾನೆ ಎಂದು ಅಲವತ್ತುಕೊಂಡಿದ್ದಳು.

ಇದನ್ನೂ ಓದಿ: ಲೈಂಗಿಕ ಕಿರುಕುಳ: ಮದುವೆಯಾದ ಎರಡೇ ವಾರಕ್ಕೆ ಪತಿಯನ್ನ ಅರೆಸ್ಟ್ ಮಾಡಿಸಿದ ಪೂನಂ ಪಾಂಡೆ

ಈ ರೀತಿ ಸ್ಯಾಮ್ ತನ್ನ ತಪ್ಪನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾನೆ. ಹೀಗಾಗಿ ಮತ್ತೆ ಒಟ್ಟಿಗೆ ಜೀವನ ನಡೆಸಲು ನಿರ್ಧರಿಸಿದ್ದೇವೆ. ಅಲ್ಲದೆ ನಾವಿಬ್ಬರೂ ಒಬ್ಬರನೊಬ್ಬರು ಹುಚ್ಚರಂತೆ ಪ್ರೀತಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಸದ್ಯ ದಂಪತಿ ಗೋವಾದಲ್ಲಿದ್ದು, ಪೂನಂ ಪತಿ ಮೇಲೆ ಹಾಕಿದ್ದ ಕೇಸ್ ಹಿಂಪಡೆದಿದ್ದಾರೆ. ಹೀಗಾಗಿ ದಂಪತಿ ಮುಂಬೈಗೆ ತೆರಳಲಿದ್ದಾರೆ. ಇಬ್ಬರ ನಡುವಿನ ಜಗಳ ತಣ್ಣಗಾದ ಬಳಿಕ ಸ್ಯಾಮ್ ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಮದುವೆ ಫೋಟೋ ಹಂಚಿಕೊಂಡಿದ್ದಾರೆ.

ಬಿಗ್ ಬಾಸ್​ಗಾಗಿ ನಡೀತಾ ಈ ಡ್ರಾಮಾ? ಇನ್ನು ಕನಸಿನ ರಾಣಿ ಪೂನಂ ಮತ್ತು ಸ್ಯಾಮ್ ನಡುವಿನ ಜಗಳ ಕೇವಲ ನಾಟಕ. ಮುಂಬರುವ ಬಿಗ್ ಬಾಸ್ ಸೀಸನ್ 14ರಲ್ಲಿ ಭಾಗವಹಿಸಲು ಪೂನಂ ಈ ರೀತಿ ಪ್ರಚಾರ ಮಾಡಿಕೊಂಡಿದ್ದಾಳೆ ಎಂಬ ಮಾತುಗಳೂ ಬಾಲಿವುಡ್​ನಲ್ಲಿ ಕೇಳಿ ಬರುತ್ತಿವೆ.

ಆದರೆ ಈ ಬಗ್ಗೆ ಮಾತನಾಡಿದ ಪೂನಂ ಆ ಮಾತನ್ನು ತಳ್ಳಿ ಹಾಕಿದ್ದಾರೆ. ನಾನು ವಿವಾದಾತ್ಮಕ ರಿಯಾಲಿಟಿ ಶೋನಲ್ಲಿ ಭಾಗವಹಿಸಲು ಹೋಗುತ್ತಿಲ್ಲ. ಬಿಗ್ ಬಾಸ್​ನಲ್ಲಿ ಪಾಲ್ಗೊಳ್ಳಲು ನಾನು ತುಂಬಾ ಚಿಕ್ಕವಳು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ಕಿರುಕಳ ಆರೋಪ: ಪಾಪಾ ಪಾಂಡೆ ಗಂಡನಿಗೆ ಬೇಲ್ ಸಿಕ್ತು

Published On - 3:33 pm, Mon, 28 September 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!