ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ, ಸೋಂಕಿತರ ಆರೋಪವೇನು?

ಬೆಂಗಳೂರು: ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಕೊರೊನಾ ಸೋಂಕಿತರಿಗೆ ಅವ್ಯವಸ್ಥೆ ಎದುರಾಗಿದೆ. ನೀರು ಬೇಕಾದರೆ ಗಲಾಟೆ ಮಾಡಿ ಪಡೆದುಕೊಳ್ಳಬೇಕಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ನಮಗೆ ಊಟವನ್ನು ನೀಡಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಯಾದ್ರೂ ಉಪಾಹಾರವನ್ನು ನೀಡಿಲ್ಲ. ಕೋವಿಡ್​ ವಾರಿಯರ್ಸ್‌ಗೂ ಸೂಕ್ತ ಸೌಲಭ್ಯ ನೀಡಿಲ್ಲ. ಶೌಚಾಲಯದಲ್ಲಿ ನೀರು ತುಂಬಿಕೊಳ್ಳುವುದಕ್ಕೆ ಜಗ್ ಇಲ್ಲ. ಇಲ್ಲಿ ಸೋಪು, ಪೇಸ್ಟ್, ಸ್ಯಾನಿಟೈಸರ್ ಯಾವುದೂ ಇಲ್ಲ. ಒಂದು ಕೊಠಡಿಯಲ್ಲಿ ಸುಮಾರು 20 […]

ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ, ಸೋಂಕಿತರ ಆರೋಪವೇನು?
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 20, 2020 | 12:13 PM

ಬೆಂಗಳೂರು: ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಕೊರೊನಾ ಸೋಂಕಿತರಿಗೆ ಅವ್ಯವಸ್ಥೆ ಎದುರಾಗಿದೆ. ನೀರು ಬೇಕಾದರೆ ಗಲಾಟೆ ಮಾಡಿ ಪಡೆದುಕೊಳ್ಳಬೇಕಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ.

ನಿನ್ನೆ ಸಂಜೆ 6 ಗಂಟೆಗೆ ನಮಗೆ ಊಟವನ್ನು ನೀಡಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಯಾದ್ರೂ ಉಪಾಹಾರವನ್ನು ನೀಡಿಲ್ಲ. ಕೋವಿಡ್​ ವಾರಿಯರ್ಸ್‌ಗೂ ಸೂಕ್ತ ಸೌಲಭ್ಯ ನೀಡಿಲ್ಲ. ಶೌಚಾಲಯದಲ್ಲಿ ನೀರು ತುಂಬಿಕೊಳ್ಳುವುದಕ್ಕೆ ಜಗ್ ಇಲ್ಲ. ಇಲ್ಲಿ ಸೋಪು, ಪೇಸ್ಟ್, ಸ್ಯಾನಿಟೈಸರ್ ಯಾವುದೂ ಇಲ್ಲ.

ಒಂದು ಕೊಠಡಿಯಲ್ಲಿ ಸುಮಾರು 20 ಸೋಂಕಿತರಿದ್ದೇವೆ. ನಮಗೆ ಯಾವುದೇ ಸೂಕ್ತ ಚಿಕಿತ್ಸೆ ನೀಡಿಲ್ಲ. ನರ್ಸ್ ಬಂದು ಕೇವಲ 2 ಮಾತ್ರೆ ಕೊಟ್ಟು ಹೋಗುತ್ತಾರೆ. ಅದನ್ನು ಬಿಟ್ಟರೆ ಬೇರೆ ಯಾರೂ ಇಲ್ಲಿಗೆ ಬರುವುದಿಲ್ಲ. ರಾಜೀವ್ ಗಾಂಧಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಅವ್ಯವಸ್ಥೆಯ ಬಗ್ಗೆ ಕೊರೊನಾ ಸೋಂಕಿತರು ಆರೋಪಿಸಿದ್ದಾರೆ.

 

Published On - 12:13 pm, Sat, 20 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us