AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ನಗರಸಭೆ ಯಡವಟ್ಟು, ಜೀವಂತವಾಗಿದ್ದರೂ ಬಡ ಕುಟುಂಬದವರಿಗೆ ಮರಣ ಪ್ರಮಾಣ ಪತ್ರ, ಪೊಲೀಸರಿಂದಲೂ ಕಿರುಕುಳದ ಆರೋಪ 

ತಮ್ಮದೇ ಮರಣ ಪ್ರಮಾಣ ಪತ್ರವನ್ನು ಕೈಯಲ್ಲಿ ಹಿಡಿದು ಅಲೆಯುತ್ತಿರೋ ಬಡ ಕುಟುಂಬ.. ಗದಗ ಬೆಟಗೇರಿ ನಗರಸಭೆ ಅಧಿಕಾರಿಗಳ ಮಹಾ ಯಡವಟ್ಟಿನಿಂದ ಆ ಬಡ ಕುಟುಂಬ ಕಂಗಾಲು.. ಮನೆ ಯಜಮಾನನ ಕಿಲಾಡಿ ಬುದ್ದಿಗೆ ನಲುಗಿದ ಬಡ ಕುಟುಂಬ ಸದಸ್ಯರು.  ಹೌದು ಈ ಎಲ್ಲಾ ವಿದ್ಯಮಾನಗಳು ಕಾಣಸಿಗೋದು ಗದಗ ನಗರದ  ಖಾನತೋಟದಲ್ಲಿ...

ಗದಗ ನಗರಸಭೆ ಯಡವಟ್ಟು, ಜೀವಂತವಾಗಿದ್ದರೂ ಬಡ ಕುಟುಂಬದವರಿಗೆ  ಮರಣ ಪ್ರಮಾಣ ಪತ್ರ, ಪೊಲೀಸರಿಂದಲೂ ಕಿರುಕುಳದ ಆರೋಪ 
ಗದಗ: ಜೀವಂತವಾಗಿಯೇ ಇದ್ದರೂ ದಾಖಲೆಗಳಲ್ಲಿ ಸಾವನ್ನಪ್ಪಿರುವ ಬಡ ಕುಟುಂಬ!
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Feb 23, 2024 | 5:38 PM

Share
ಆ ಮನೆಯ ಯಜಮಾನ ಮಾಡಿರುವ ಘನಂದಾರಿ ಕೆಲಸಕ್ಕೆ ಇಡೀ ಕುಟುಂಬ ವಿಲವಿಲ ಅಂತಿದೆ. ಹೌದು ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮರಣ ಪ್ರಮಾಣ ಪತ್ರವನ್ನು ಪಡೆದುಕೊಂಡು, 12 ವರ್ಷಗಳಿಂದ ನಾಪತ್ತೆಯಾಗಿದ್ದಾನೆ ಪತಿರಾಯ. ಇದಕ್ಕೆ ಗದಗ ಬೆಟಗೇರಿ ನಗರಸಭೆಯೂ ಸಾಥ್​ ನೀಡಿದ್ದು, ಜೀವಂತವಿರುವವರಿಗೇ ಮರಣ ಪ್ರಮಾಣ ಪತ್ರ ನೀಡುವ ಮೂಲಕ ಮಹಾ ಯಡವಟ್ಟು ಮಾಡಿಟ್ಟಿದೆ. ಹೀಗಾಗಿ ಜೀವಂತವಾಗಿಯೇ ಇದ್ದರು ಕೂಡಾ ದಾಖಲೆಗಳಲ್ಲಿ ಸಾವನ್ನಪ್ಪಿರುವ ಬಡ ಕುಟುಂಬ ಪರದಾಟ ನಡೆಸಿದೆ.

ಗದಗ ನಗರದ  ಖಾನತೋಟ ನಿವಾಸಿಯಾದ ತಿಪ್ಪಣ್ಣ ಲಕ್ಕುಂಡಿ ತನ್ನ ಪತ್ನಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮರಣ ಪ್ರಮಾಣ ಪತ್ರವನ್ನು ಹುಟ್ಟು ಹಾಕಿದ್ದಾನೆ. ವಿಚಿತ್ರ ಅಂದ್ರೆ, ಈ ತಿಪ್ಪಣ್ಣ ಲಕ್ಕುಂಡಿ 12 ವರ್ಷಗಳಿಂದ ಪತ್ನಿ ಮಕ್ಕಳನ್ನು ಬಿಟ್ಟು ನಾ ಪತ್ತೆಯಾಗಿಬಿಟ್ಟಿದ್ದಾನೆ. ತಿಪ್ಪಣ್ಣ ಪತ್ನಿ ದ್ರಾಕ್ಷಾಯಣಿ 2004 ರಲ್ಲಿ ಸಾವನ್ನಪ್ಪಿದ್ದಾಳೆ ಎಂದು ಮರಣ ಪ್ರಮಾಣ ಪತ್ರವನ್ನು ಹುಟ್ಟು ಹಾಕಲಾಗಿದೆ. ಹಾಗೆಯೇ ಇಬ್ಬರು ಮಕ್ಕಳಾದ ಅಶೋಕ ಹಾಗೂ ಕಲ್ಲಪ್ಪ ಎನ್ನುವವರು ಕೂಡಾ ಸಾವನ್ನಪ್ಪಿದ್ದಾರೆ ಎಂದು ಅವರ ಹೆಸರಿನಲ್ಲಿಯೂ ಕೂಡಾ ಮರಣ ಪ್ರಮಾಣ ಪತ್ರವನ್ನು ಸೃಷ್ಟಿಸಲಾಗಿದೆ. ಈ ಮಧ್ಯೆ ಮನೆ ಜಪ್ತಿ ಮಾಡುತ್ತೇವೆ ಎಂದು ಪೊಲೀಸರು ಮನೆಗೆ ಬರ್ತಾರಂತೆ. ಹೀಗಾಗಿ ನೊಂದ ಕುಟುಂಬ ಕಂಗಾಲಾಗಿದೆ.

Also Read: ಸತ್ತವರ ಬ್ಯಾಂಕ್ ಖಾತೆಗೂ ಗೃಹಲಕ್ಷ್ಮಿ ಹಣ ಜಮೆ; ಯೋಜನೆಯ ಹಣ ಪಡೆಯಲು ಕುಟುಂಬಸ್ಥರ ಪರದಾಟ

ಇನ್ನು ಗದಗ ನಗರದಲ್ಲಿ ಮನೆಗಳಿಗೆ ಸಾಕಷ್ಟು ಬೇಡಿಕೆಯಿದೆ. ಈ ಭಾಗದಲ್ಲಿ ಮನೆಗಳು ಕೋಟ್ಯಾಂತರ ರೂಪಾಯಿ ಮೌಲ್ಯದಲ್ಲಿ ಮಾರಾಟ ಆಗುತ್ತವೆ. ಹಾಗಅಗಿ ಈ ಅನಕ್ಷರಸ್ಥ ಹಾಗೂ ಬಡ ಕುಟುಂಬ ಸದಸ್ಯರಿಗೆ ಮೋಸ ಮಾಡಲು ಯಾರಾದರೂ ಹುನ್ನಾರ ನಡೆಸಿದ್ದಾರೆಯಾ ಎನ್ನುವ ಅನುಮಾನ ಕೂಡಾ ಕಾಡ್ತಾಯಿದೆ. ಇನ್ನು ಒಂದು ಕಡೆ ಮರಣ ಪ್ರಮಾಣ ಪತ್ರವನ್ನು ನೀಡಿರುವ ಸರ್ಕಾರ, ಈ ಕುಟುಂಬಕ್ಕೆ ಪಡಿತರ ಚೀಟಿ, ವೋಟರ್ ಐಡಿ ಕೂಡಾ ದಯಪಾಲಿಸಿದೆ‌. ಗದಗ ಶಹರ ಪೊಲೀಸರು ಮನೆಗೆ ಬಂದಾಗ ವಾಸ್ತವ ಅರಿವಾಗಿದೆ. ತಕ್ಷಣ ಮನೆಯವರು ನಗರಸಭೆಗೆ ಹೋಗಿ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ, ಈ ವಿಚಾರ ಬೆಳೆಕಿಗೆ ಬಂದಿದೆ. ನಗರಸಭೆ ಯಡವಟ್ಟಿನಿಂದ ನಾವು ಬದುಕಿದ್ದರೂ, ದಾಖಲೆಗಳಲ್ಲಿ ಸಾವನ್ನಪ್ಪಿರುವುದಾಗಿ ಮರಣ ಪ್ರಮಾಣ ಪತ್ರ ನೀಡಿದ್ದಾರೆ ಎಂದು ಆ ಸಂಸಾರಸ್ಥರು ಗೋಳಾಟ ನಡೆಸಿದ್ದಾರೆ. ಇನ್ನಾದ್ರು ಹಿರಿಯ ಅಧಿಕಾರಿಗಳು ನಗರಸಭೆ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Fri, 23 February 24

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್