AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ನಗರಸಭೆ ಯಡವಟ್ಟು, ಜೀವಂತವಾಗಿದ್ದರೂ ಬಡ ಕುಟುಂಬದವರಿಗೆ ಮರಣ ಪ್ರಮಾಣ ಪತ್ರ, ಪೊಲೀಸರಿಂದಲೂ ಕಿರುಕುಳದ ಆರೋಪ 

ತಮ್ಮದೇ ಮರಣ ಪ್ರಮಾಣ ಪತ್ರವನ್ನು ಕೈಯಲ್ಲಿ ಹಿಡಿದು ಅಲೆಯುತ್ತಿರೋ ಬಡ ಕುಟುಂಬ.. ಗದಗ ಬೆಟಗೇರಿ ನಗರಸಭೆ ಅಧಿಕಾರಿಗಳ ಮಹಾ ಯಡವಟ್ಟಿನಿಂದ ಆ ಬಡ ಕುಟುಂಬ ಕಂಗಾಲು.. ಮನೆ ಯಜಮಾನನ ಕಿಲಾಡಿ ಬುದ್ದಿಗೆ ನಲುಗಿದ ಬಡ ಕುಟುಂಬ ಸದಸ್ಯರು.  ಹೌದು ಈ ಎಲ್ಲಾ ವಿದ್ಯಮಾನಗಳು ಕಾಣಸಿಗೋದು ಗದಗ ನಗರದ  ಖಾನತೋಟದಲ್ಲಿ...

ಗದಗ ನಗರಸಭೆ ಯಡವಟ್ಟು, ಜೀವಂತವಾಗಿದ್ದರೂ ಬಡ ಕುಟುಂಬದವರಿಗೆ  ಮರಣ ಪ್ರಮಾಣ ಪತ್ರ, ಪೊಲೀಸರಿಂದಲೂ ಕಿರುಕುಳದ ಆರೋಪ 
ಗದಗ: ಜೀವಂತವಾಗಿಯೇ ಇದ್ದರೂ ದಾಖಲೆಗಳಲ್ಲಿ ಸಾವನ್ನಪ್ಪಿರುವ ಬಡ ಕುಟುಂಬ!
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಸಾಧು ಶ್ರೀನಾಥ್​|

Updated on:Feb 23, 2024 | 5:38 PM

Share
ಆ ಮನೆಯ ಯಜಮಾನ ಮಾಡಿರುವ ಘನಂದಾರಿ ಕೆಲಸಕ್ಕೆ ಇಡೀ ಕುಟುಂಬ ವಿಲವಿಲ ಅಂತಿದೆ. ಹೌದು ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮರಣ ಪ್ರಮಾಣ ಪತ್ರವನ್ನು ಪಡೆದುಕೊಂಡು, 12 ವರ್ಷಗಳಿಂದ ನಾಪತ್ತೆಯಾಗಿದ್ದಾನೆ ಪತಿರಾಯ. ಇದಕ್ಕೆ ಗದಗ ಬೆಟಗೇರಿ ನಗರಸಭೆಯೂ ಸಾಥ್​ ನೀಡಿದ್ದು, ಜೀವಂತವಿರುವವರಿಗೇ ಮರಣ ಪ್ರಮಾಣ ಪತ್ರ ನೀಡುವ ಮೂಲಕ ಮಹಾ ಯಡವಟ್ಟು ಮಾಡಿಟ್ಟಿದೆ. ಹೀಗಾಗಿ ಜೀವಂತವಾಗಿಯೇ ಇದ್ದರು ಕೂಡಾ ದಾಖಲೆಗಳಲ್ಲಿ ಸಾವನ್ನಪ್ಪಿರುವ ಬಡ ಕುಟುಂಬ ಪರದಾಟ ನಡೆಸಿದೆ.

ಗದಗ ನಗರದ  ಖಾನತೋಟ ನಿವಾಸಿಯಾದ ತಿಪ್ಪಣ್ಣ ಲಕ್ಕುಂಡಿ ತನ್ನ ಪತ್ನಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮರಣ ಪ್ರಮಾಣ ಪತ್ರವನ್ನು ಹುಟ್ಟು ಹಾಕಿದ್ದಾನೆ. ವಿಚಿತ್ರ ಅಂದ್ರೆ, ಈ ತಿಪ್ಪಣ್ಣ ಲಕ್ಕುಂಡಿ 12 ವರ್ಷಗಳಿಂದ ಪತ್ನಿ ಮಕ್ಕಳನ್ನು ಬಿಟ್ಟು ನಾ ಪತ್ತೆಯಾಗಿಬಿಟ್ಟಿದ್ದಾನೆ. ತಿಪ್ಪಣ್ಣ ಪತ್ನಿ ದ್ರಾಕ್ಷಾಯಣಿ 2004 ರಲ್ಲಿ ಸಾವನ್ನಪ್ಪಿದ್ದಾಳೆ ಎಂದು ಮರಣ ಪ್ರಮಾಣ ಪತ್ರವನ್ನು ಹುಟ್ಟು ಹಾಕಲಾಗಿದೆ. ಹಾಗೆಯೇ ಇಬ್ಬರು ಮಕ್ಕಳಾದ ಅಶೋಕ ಹಾಗೂ ಕಲ್ಲಪ್ಪ ಎನ್ನುವವರು ಕೂಡಾ ಸಾವನ್ನಪ್ಪಿದ್ದಾರೆ ಎಂದು ಅವರ ಹೆಸರಿನಲ್ಲಿಯೂ ಕೂಡಾ ಮರಣ ಪ್ರಮಾಣ ಪತ್ರವನ್ನು ಸೃಷ್ಟಿಸಲಾಗಿದೆ. ಈ ಮಧ್ಯೆ ಮನೆ ಜಪ್ತಿ ಮಾಡುತ್ತೇವೆ ಎಂದು ಪೊಲೀಸರು ಮನೆಗೆ ಬರ್ತಾರಂತೆ. ಹೀಗಾಗಿ ನೊಂದ ಕುಟುಂಬ ಕಂಗಾಲಾಗಿದೆ.

Also Read: ಸತ್ತವರ ಬ್ಯಾಂಕ್ ಖಾತೆಗೂ ಗೃಹಲಕ್ಷ್ಮಿ ಹಣ ಜಮೆ; ಯೋಜನೆಯ ಹಣ ಪಡೆಯಲು ಕುಟುಂಬಸ್ಥರ ಪರದಾಟ

ಇನ್ನು ಗದಗ ನಗರದಲ್ಲಿ ಮನೆಗಳಿಗೆ ಸಾಕಷ್ಟು ಬೇಡಿಕೆಯಿದೆ. ಈ ಭಾಗದಲ್ಲಿ ಮನೆಗಳು ಕೋಟ್ಯಾಂತರ ರೂಪಾಯಿ ಮೌಲ್ಯದಲ್ಲಿ ಮಾರಾಟ ಆಗುತ್ತವೆ. ಹಾಗಅಗಿ ಈ ಅನಕ್ಷರಸ್ಥ ಹಾಗೂ ಬಡ ಕುಟುಂಬ ಸದಸ್ಯರಿಗೆ ಮೋಸ ಮಾಡಲು ಯಾರಾದರೂ ಹುನ್ನಾರ ನಡೆಸಿದ್ದಾರೆಯಾ ಎನ್ನುವ ಅನುಮಾನ ಕೂಡಾ ಕಾಡ್ತಾಯಿದೆ. ಇನ್ನು ಒಂದು ಕಡೆ ಮರಣ ಪ್ರಮಾಣ ಪತ್ರವನ್ನು ನೀಡಿರುವ ಸರ್ಕಾರ, ಈ ಕುಟುಂಬಕ್ಕೆ ಪಡಿತರ ಚೀಟಿ, ವೋಟರ್ ಐಡಿ ಕೂಡಾ ದಯಪಾಲಿಸಿದೆ‌. ಗದಗ ಶಹರ ಪೊಲೀಸರು ಮನೆಗೆ ಬಂದಾಗ ವಾಸ್ತವ ಅರಿವಾಗಿದೆ. ತಕ್ಷಣ ಮನೆಯವರು ನಗರಸಭೆಗೆ ಹೋಗಿ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ, ಈ ವಿಚಾರ ಬೆಳೆಕಿಗೆ ಬಂದಿದೆ. ನಗರಸಭೆ ಯಡವಟ್ಟಿನಿಂದ ನಾವು ಬದುಕಿದ್ದರೂ, ದಾಖಲೆಗಳಲ್ಲಿ ಸಾವನ್ನಪ್ಪಿರುವುದಾಗಿ ಮರಣ ಪ್ರಮಾಣ ಪತ್ರ ನೀಡಿದ್ದಾರೆ ಎಂದು ಆ ಸಂಸಾರಸ್ಥರು ಗೋಳಾಟ ನಡೆಸಿದ್ದಾರೆ. ಇನ್ನಾದ್ರು ಹಿರಿಯ ಅಧಿಕಾರಿಗಳು ನಗರಸಭೆ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Fri, 23 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!