ನಿರ್ಲಕ್ಷ್ಯ ಆರೋಪ: ವಿಡಿಯೋ ಮಾಡಿ ಅಳಲು ತೋಡಿಕೊಂಡ ಸೋಂಕಿತ ವಾರಿಯರ್
ಚಿತ್ರದುರ್ಗ: ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಕೊರೊನಾ ವಾರಿಯರ್ಸ್ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಇಂತಹ ವಾರಿಯರ್ಸ್ಗಳಿಗೂ ಸರಿಯಾದ ಸ್ಪಂದನೆ ಅನುಕೂಲಗಳನ್ನು ಸರ್ಕಾರ ಮಾಡುತ್ತಿಲ್ಲ. ಕೊರೊನಾ ಸೋಂಕಿತ ವಾರಿಯರ್ಸ್ ಬಗ್ಗೆ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ. ಕೊರೊನಾ ಸೋಂಕಿತ ಹಿರೇಗುಂಟನೂರು ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ವಿಡಿಯೋ ಮಾಡಿ ಅಳಲು ತೋಡಿಕೊಂಡಿದ್ದಾರೆ. ಕೊರೊನಾ ಟೆಸ್ಟ್ ವರದಿ ವಿಳಂಬವಾಗುತ್ತಿದೆ. ಹಾಗೂ ಚಿಕಿತ್ಸೆ ನಿರ್ಲಕ್ಷದ ಬಗ್ಗೆ ಕಿಡಿ ಕಾರಿದ್ದಾರೆ. ಕೊವಿಡ್ ವಾರ್ಡ್ ಅವ್ಯವಸ್ಥೆ ಬಗ್ಗೆಯೂ ಸೋಂಕಿತ […]

ಚಿತ್ರದುರ್ಗ: ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಕೊರೊನಾ ವಾರಿಯರ್ಸ್ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಇಂತಹ ವಾರಿಯರ್ಸ್ಗಳಿಗೂ ಸರಿಯಾದ ಸ್ಪಂದನೆ ಅನುಕೂಲಗಳನ್ನು ಸರ್ಕಾರ ಮಾಡುತ್ತಿಲ್ಲ.
ಕೊರೊನಾ ಸೋಂಕಿತ ವಾರಿಯರ್ಸ್ ಬಗ್ಗೆ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ. ಕೊರೊನಾ ಸೋಂಕಿತ ಹಿರೇಗುಂಟನೂರು ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ವಿಡಿಯೋ ಮಾಡಿ ಅಳಲು ತೋಡಿಕೊಂಡಿದ್ದಾರೆ. ಕೊರೊನಾ ಟೆಸ್ಟ್ ವರದಿ ವಿಳಂಬವಾಗುತ್ತಿದೆ. ಹಾಗೂ ಚಿಕಿತ್ಸೆ ನಿರ್ಲಕ್ಷದ ಬಗ್ಗೆ ಕಿಡಿ ಕಾರಿದ್ದಾರೆ. ಕೊವಿಡ್ ವಾರ್ಡ್ ಅವ್ಯವಸ್ಥೆ ಬಗ್ಗೆಯೂ ಸೋಂಕಿತ ಆಕ್ರೋಶ ವ್ಯಕ್ತಪಡಿಸಿದ್ದಾರೆ.




