AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ಕೊರೊನಾ ಟೆಸ್ಟ್​ಗೆ ಹೋದ್ರೆ.. ಸಿಗೋದು ಬರೀ ಪಾಸಿಟಿವ್ ರಿಪೋರ್ಟ್

ಬೆಂಗಳೂರು: ನಗರದಲ್ಲಿ ಮತ್ತೊಂದು ಖಾಸಗಿ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. ಈ ಆಸ್ಪತ್ರೆ ರೋಗಿಗಳ ರಿಪೋರ್ಟ್​ನಲ್ಲೇ ಕಳ್ಳಾಟವಾಡ್ತಿದೆಯಂತೆ? ಕೊರೊನಾ ಟೆಸ್ಟ್​ಗೆ ಹೋದ್ರೆ ಪಾಸಿಟಿವ್ ರಿಪೋರ್ಟ್ ನೀಡುತ್ತಿದ್ದಾರಂತೆ. ರಾಜಾಜಿನಗರದಲ್ಲಿರೋ ಸುಗುಣ ಆಸ್ಪತ್ರೆಯ ವಿರುದ್ಧ ಇಂತಹ ಗಂಭೀರ ಆರೋಪ ಕೇಳಿ ಬಂದಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 4 ವರ್ಷದ ಮಗುವಿಗೆ ಟೆಸ್ಟ್ ಮಾಡಿ ಕೊರೊನಾ ಪಾಸಿಟಿವ್ ರಿಪೋರ್ಟ್ ಕೊಟ್ಟಿದ್ದಾರೆ ಎಂದು ಮಗು ತಾಯಿ ಆರೋಪ ಮಾಡಿದ್ದಾರೆ. ಸುಗುಣ ಆಸ್ಪತ್ರೆ ಬಿಟ್ಟು ಬೇರೆ ಲ್ಯಾಬ್​ನಲ್ಲಿ ಟೆಸ್ಟ್ ಮಾಡಿಸಿದಾಗ ಮಗು, ತಂದೆ-ತಾಯಿಗೆ ನೆಗೆಟಿವ್ ಬಂದಿದೆ. […]

ಇಲ್ಲಿ ಕೊರೊನಾ ಟೆಸ್ಟ್​ಗೆ ಹೋದ್ರೆ.. ಸಿಗೋದು ಬರೀ ಪಾಸಿಟಿವ್ ರಿಪೋರ್ಟ್
ಆಯೇಷಾ ಬಾನು
|

Updated on:Jul 30, 2020 | 3:47 PM

Share

ಬೆಂಗಳೂರು: ನಗರದಲ್ಲಿ ಮತ್ತೊಂದು ಖಾಸಗಿ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. ಈ ಆಸ್ಪತ್ರೆ ರೋಗಿಗಳ ರಿಪೋರ್ಟ್​ನಲ್ಲೇ ಕಳ್ಳಾಟವಾಡ್ತಿದೆಯಂತೆ? ಕೊರೊನಾ ಟೆಸ್ಟ್​ಗೆ ಹೋದ್ರೆ ಪಾಸಿಟಿವ್ ರಿಪೋರ್ಟ್ ನೀಡುತ್ತಿದ್ದಾರಂತೆ. ರಾಜಾಜಿನಗರದಲ್ಲಿರೋ ಸುಗುಣ ಆಸ್ಪತ್ರೆಯ ವಿರುದ್ಧ ಇಂತಹ ಗಂಭೀರ ಆರೋಪ ಕೇಳಿ ಬಂದಿದೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 4 ವರ್ಷದ ಮಗುವಿಗೆ ಟೆಸ್ಟ್ ಮಾಡಿ ಕೊರೊನಾ ಪಾಸಿಟಿವ್ ರಿಪೋರ್ಟ್ ಕೊಟ್ಟಿದ್ದಾರೆ ಎಂದು ಮಗು ತಾಯಿ ಆರೋಪ ಮಾಡಿದ್ದಾರೆ. ಸುಗುಣ ಆಸ್ಪತ್ರೆ ಬಿಟ್ಟು ಬೇರೆ ಲ್ಯಾಬ್​ನಲ್ಲಿ ಟೆಸ್ಟ್ ಮಾಡಿಸಿದಾಗ ಮಗು, ತಂದೆ-ತಾಯಿಗೆ ನೆಗೆಟಿವ್ ಬಂದಿದೆ. ಆದ್ರೆ ಸುಗುಣ ಆಸ್ಪತ್ರೆ ಸಿಬ್ಬಂದಿ ಮಗುವಿಗೆ ಕೊರೊನಾ ಪಾಸಿಟಿವ್ ಇದೆ ಎಂದು ಅಡ್ಮಿಟ್ ಮಾಡಿಕೊಂಡಿದ್ದಾರೆ. ಹಣ ಕಸಿಯಲು ಪಾಸಿಟಿವ್ ರಿಪೋರ್ಟ್ ನೀಡ್ತಾಯಿದಿಯಾ ಸುಗುಣ ಆಸ್ಪತ್ರೆ ಎಂಬ ಪ್ರಶ್ನೆ ಎದ್ದಿದೆ.

ಮಗುವಿನ ಸ್ಥಿತಿ ಕಂಡು ತಾಯಿ ಕಣ್ಣೀರಿಟ್ಟಿದ್ದಾರೆ. ಸುಗುಣ ಆಸ್ಪತ್ರೆಗೆ ಬರುವ ಎಲ್ಲರ ರಿಪೋರ್ಟ್​ನಲ್ಲೂ ಇದೇ ರೀತಿ ಯಾಮಾರಿಸಲಾಗ್ತಿದೆ ಅಂತ ಮಗುವಿನ ತಾಯಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ನಮ್ಮಿಂದ ಯಾವ ತಪ್ಪೂ ಆಗಿಲ್ಲ ಸುಗಣ ಆಸ್ಪತ್ರೆಯಲ್ಲಿ ಸ್ವ್ಯಾಬ್ ಟೆಸ್ಟ್ ಮಾಡಲ್ಲ. ಕೇವಲ ಸ್ವ್ಯಾಬ್ ತೆಗೆದು ನಾರಯಣ ನೇತ್ರಾಲಯಕ್ಕೆ ಕಳುಹಿಸಲಾಗುತ್ತೆ. ನಮ್ಮ ಕಡೆಯಿಂದ ಯಾವುದೇ ತಪ್ಪಾಗಿಲ್ಲ. ಅಲ್ಲಿಂದ ಬರುವ ವರದಿಯನ್ನಷ್ಟೆ ರೋಗಿಗೆ ಕೊಡುತ್ತೇವೆ. ನಮ್ಮ ಮೇಲೆ ಮಾಡಿರುವ ಆರೋಪ ಸುಳ್ಳು ಅಂತಾ ಸುಗಣ ಆಸ್ಪತ್ರೆಯ ಮುಖ್ಯಸ್ಥ ಡಾ.ರವೀಂದ್ರ ಟಿವಿ9ಗೆ ಸ್ಪಷ್ಟ ಪಡಿಸಿದ್ದಾರೆ.

Published On - 12:28 pm, Thu, 30 July 20

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ