ಮಣ್ಣಿನಡಿ ಸಿಲುಕಿದ್ದ ಪೌರಕಾರ್ಮಿಕನ ರಕ್ಷಣೆ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ

ವಿಜಯಪುರ: ಒಳಚರಂಡಿ ಕಾಮಗಾರಿ ಮಾಡುತ್ತಿದ್ದ ವೇಳೆ ಅವಗಡ ಸಂಭವಿಸಿ ಮಣ್ಣು ಕುಸಿದು ಮಣ್ಣಿನಲ್ಲಿ ಸಿಲುಕಿದ್ದ ಪೌರಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ವಾರ್ಡ್ ನಂಬರ್ 17 ರಲ್ಲಿ ಈ ಘಟನೆ ಸಂಭವಿಸಿತ್ತು. ಅಶೋಕ ದೊಡಮನಿ (42) ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕ. ಕಾಮಗಾರಿ ವೇಳೆ ಅಶೋಕ್ ಮೇಲೆ ಮಣ್ಣು ಕುಸಿದಿತ್ತು. ಇತರ ಕಾರ್ಮಿಕರು ಜೆಸಿಬಿಯಿಂದ ಮಣ್ಣು ತೆರವು ಮಾಡಿ ಕಾರ್ಮಿಕನನ್ನು ರಕ್ಷಣೆ ಮಾಡಿದ್ದಾರೆ. ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಪರಿಣಾಮ ಆಶೋಕ್​ಗೆ ಗಾಯಗಳಾಗಿದ್ದು, ಅಸ್ವಸ್ಥನಾಗಿದ್ದಾನೆ. ಇಂಡಿ ತಾಲೂಕಾ ಆಸ್ಪತ್ರೆಯಲ್ಲಿ […]

ಮಣ್ಣಿನಡಿ ಸಿಲುಕಿದ್ದ ಪೌರಕಾರ್ಮಿಕನ ರಕ್ಷಣೆ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Aug 24, 2020 | 11:07 AM

ವಿಜಯಪುರ: ಒಳಚರಂಡಿ ಕಾಮಗಾರಿ ಮಾಡುತ್ತಿದ್ದ ವೇಳೆ ಅವಗಡ ಸಂಭವಿಸಿ ಮಣ್ಣು ಕುಸಿದು ಮಣ್ಣಿನಲ್ಲಿ ಸಿಲುಕಿದ್ದ ಪೌರಕಾರ್ಮಿಕನನ್ನು ರಕ್ಷಣೆ ಮಾಡಲಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ವಾರ್ಡ್ ನಂಬರ್ 17 ರಲ್ಲಿ ಈ ಘಟನೆ ಸಂಭವಿಸಿತ್ತು. ಅಶೋಕ ದೊಡಮನಿ (42) ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕ. ಕಾಮಗಾರಿ ವೇಳೆ ಅಶೋಕ್ ಮೇಲೆ ಮಣ್ಣು ಕುಸಿದಿತ್ತು. ಇತರ ಕಾರ್ಮಿಕರು ಜೆಸಿಬಿಯಿಂದ ಮಣ್ಣು ತೆರವು ಮಾಡಿ ಕಾರ್ಮಿಕನನ್ನು ರಕ್ಷಣೆ ಮಾಡಿದ್ದಾರೆ.

ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಪರಿಣಾಮ ಆಶೋಕ್​ಗೆ ಗಾಯಗಳಾಗಿದ್ದು, ಅಸ್ವಸ್ಥನಾಗಿದ್ದಾನೆ. ಇಂಡಿ ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸದ್ಯ ಈಗ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂಡಿ ಪಟ್ಟಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us