Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರಿನಲ್ಲಿ ಕರೆಂಟ್ ಇರಲ್ಲ.. ಎಲ್ಲೆಲ್ಲಿ?

ನಾಳೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬೆಂಗಳೂರಿನ ವಿವಿದೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಲ್ಲೆಲ್ಲಿ? ಇಲ್ಲಿದೆ ವಿವರ.

ನಾಳೆ ಬೆಂಗಳೂರಿನಲ್ಲಿ ಕರೆಂಟ್ ಇರಲ್ಲ.. ಎಲ್ಲೆಲ್ಲಿ?
ನಾಳೆ ಬೆಂಗಳೂರಿನಲ್ಲಿ ಕರೆಂಟ್ ಇರಲ್ಲ..
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Nov 28, 2020 | 6:24 PM

ಬೆಂಗಳೂರು: ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಘಂಟೆಯವರೆಗೆ ಬೆಂಗಳೂರಿನ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಎನ್​ಆರ್​ಎಸ್ ಉಪಕೇಂದ್ರದ ತ್ರೈಮಾಸಿಕ ನಿರ್ವಹಣೆಯಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತಿಳಿಸಿದೆ.

ಎಲ್ಲಿ ಕರೆಂಟ್ ಇರಲ್ಲ? ರಾಜಾಜಿನಗರದ 1ರಿಂದ 6ನೇ ಬ್ಲಾಕ್, ಕೆ.ಎಸ್.ಎಸ್.ಐ.ಡಿ.ಸಿ ಮತ್ತು ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್, ಡಾ. ರಾಜ್​ಕುಮಾರ್ ರಸ್ತೆ, ಇ.ಎಸ್.ಐ ಆಸ್ಪತ್ರೆ, ಮನುವನ, ಅಗ್ರಹಾರ ದಾಸಹಳ್ಳಿ, ಗೋವಿಂದರಾಜನಗರ, ಬಸವೇಶ್ವರನಗರ, ಮಹಾಗಣಪತಿಪುರ, ಕಂಠೀರವ ನಗರ, ಜಡ್ಜಸ್ ಕಾಲೋನಿ, ಕೆ ಎಚ್ ಬಿ ಕಾಲೋನಿ 2ನೇ ಹಂತ,4ನೇ ಹಂತ, 4ನೇ ಬ್ಲಾಕ್, 3ನೇಹಂತ, 3ನೇ ಬ್ಲಾಕ್, ಕೆ.ಎಚ್.ಬಿ ಕಾಲೋನಿ, ಪ್ರಕಾಶ ನಗರ, ಎಲ್ ಎನ್ ಪುರ, ಶ್ರೀರಾಂಪುರ, ರಾಮಚಂದ್ರಪುರ, ದೇವಯ್ಯ ಪಾರ್ಕ್, ಪಾದರಾಯನಪುರ, ಪೈಪ್​ಲೈನ್, ಚೋಳೂರು ಪಾಳ್ಯ, ಶಾಮಣ್ಣ ಗಾರ್ಡನ್, ಶಂಕರಪ್ಪ ಗಾರ್ಡನ್, ಟೆಲಿಕಾಂ ಲೇಔಟ್, ಕೆ ಪಿ ಅಗ್ರಹಾರ, ಮಾಗಡಿ ರಸ್ತೆ, ಬ್ರಿಗೇಡ್ ಒರಾಯನ್ ಕಾಂಪ್ಲೆಕ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ .

ವಿದ್ಯುತ್ ವ್ಯತ್ಯಯಕ್ಕೆ ಸಂಬಂಧಿಸಿದ ಯಾವುದೇ ಸಹಾಯಕ್ಕೆ 1912ಕ್ಕೆ ಕರೆ ಮಾಡಬಹುದು ಎಂದು ಬೆಂ.ವಿ.ಕಂ. ಪಶ್ಚಿಮ ವಿಭಾಗದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ