AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧೆ ಶ್ಯಾಮ್​ ನಿರ್ದೇಶಕನ ವಿರುದ್ಧ ಪೊಲೀಸರಿಗೆ ಕಂಪ್ಲೆಂಟ್​ ನೀಡಿದ ಪ್ರಭಾಸ್​ ಫ್ಯಾನ್ಸ್ !

ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲ ಒಂದು ವಿಚಾರಗಳು ವೈರಲ್​ ಆಗುತ್ತಿರುತ್ತವೆ. ಈಗಲೂ ಆಗಿದ್ದೂ ಅದೇ.

ರಾಧೆ ಶ್ಯಾಮ್​ ನಿರ್ದೇಶಕನ ವಿರುದ್ಧ ಪೊಲೀಸರಿಗೆ ಕಂಪ್ಲೆಂಟ್​ ನೀಡಿದ ಪ್ರಭಾಸ್​ ಫ್ಯಾನ್ಸ್ !
ಪ್ರಭಾಸ್​-ರಾಧೆಶ್ಯಾಮ್​ ನಿರ್ದೇಶಕ
ರಾಜೇಶ್ ದುಗ್ಗುಮನೆ
|

Updated on: Mar 21, 2021 | 7:40 PM

Share

ಪ್ರಭಾಸ್​ ನಟನೆಯ ರಾಧೆ ಶ್ಯಾಮ್​ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈಗಾಗಲೇ ಚಿತ್ರದ ಕೆಲಸ ಪೂರ್ಣಗೊಂಡಿದ್ದು, ಜುಲೈನಲ್ಲಿ ಸಿನಿಮಾ ತೆರೆಮೇಲೆ ಬರುತ್ತಿದೆ. ಈ ಮಧ್ಯೆ ಸಿನಿಮಾದ ನಿರ್ದೇಶಕ ರಾಧಾ ಕೃಷ್ಣ ಕುಮಾರ್​ ವಿರುದ್ಧ ಪ್ರಭಾಸ್​ ಫ್ಯಾನ್ಸ್ ಗರಂ ಆಗಿದ್ದಾರೆ. ಅಷ್ಟೇ ಅಲ್ಲ, ಹೈದರಾಬಾದ್​ ಪೊಲೀಸರ ಬಳಿ ದೂರನ್ನು ಕೂಡ ನೀಡಿದ್ದಾರೆ. ಅಷ್ಟಕ್ಕೂ ದೂರು ದಾಖಲಿಸೋಕೆ ಕಾರಣ ಏನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲ ಒಂದು ವಿಚಾರಗಳು ವೈರಲ್​ ಆಗುತ್ತಿರುತ್ತವೆ. ಈಗಲೂ ಆಗಿದ್ದೂ ಅದೇ. ನಟ ನಿತಿನ್​ ನಟನೆಯ ರಂಗ್​ ದೆ ಸಿನಿಮಾ ಇದೇ 26ರಂದು ತೆರೆಕಾಣುತ್ತಿದೆ. ಸಿನಿಮಾದ ಪ್ರಮೋಷನ್​ನಲ್ಲಿ ಚಿತ್ರಂಡ ಬ್ಯುಸಿಯಾಗಿದೆ. ಈ ಮಧ್ಯೆ ಚಿತ್ರದ ನಟಿ ಕೀರ್ತಿ ಸುರೇಶ್​ ಅವರು ಸಿನಿಮಾದ ಪ್ರಮೋಷನ್​ನಲ್ಲಿ ಅಷ್ಟಾಗಿ ಪಾಲ್ಗೊಳ್ಳುತ್ತಿಲ್ಲವಂತೆ. ಇದು ಚಿತ್ರತಂಡದ ಬೇಸರಕ್ಕೆ ಕಾರಣವಾಗಿದೆ.

ಇದಕ್ಕಾಗಿ, ಕೀರ್ತಿ ಸುರೇಶ್​ ಅವರ ಫೋಟೋ ಒಂದನ್ನು ಟ್ವೀಟ್​ ಮಾಡಿದ್ದ ನಿತಿನ್​, ಫೋಟೊದಲ್ಲಿ ಇರುವವರು ಕಾಣೆಯಾಗಿದ್ದಾರೆ ಮತ್ತು ಇವರಿಗೆ ಸಿನಿಮಾ ಪ್ರಚಾರ ಕಾರ್ಯಕ್ರಮಗಳಿಗೆ ಹಾಜರಾಗಿ ಎಂದು ಯಾರಾದರೂ ಹೇಳಿ ಎಂದು ಕೋರಿದ್ದರು.ಅಚ್ಚರಿ ಎಂಬಂತೆ ಈ ಟ್ವೀಟ್​ಗೆ ಹೈದರಾಬಾದ್ ಪೊಲೀಸ್ ಇಲಾಖೆ​ ಉತ್ತರಿಸಿ, ನಿತಿನ್​ ಅವರು ಈ ವಿಚಾರ ನೋಡಿಕೊಳ್ಳುತ್ತಾರೆ ಎಂದಿತ್ತು.

ಈ ಟ್ವೀಟ್​ಗೆ ಉತ್ತರಿಸಿದ್ದ ಪ್ರಭಾಸ್​ ಅಭಿಮಾನಿಯೋರ್ವ ರಾಧೆ ಶ್ಯಾಮ್​ ನಿರ್ದೇಶಕ ರಾಧಾ ಕೃಷ್ಣ ಕುಮಾರ್​ ಅವರನ್ನು ಹಿಡಿದುಕೊಡಿ ಎಂದು ಹೈದರಾಬಾದ್ ಪೊಲೀಸರ ಬಳಿ ಆಗ್ರಹಿಸಿದ್ದಾರೆ. ರಾಧಾ ಕೃಷ್ಣ ಕುಮಾರ್​ ರಾಧೆ ಶ್ಯಾಮ್​ ಸಿನಿಮಾವನ್ನು ಸರಿಯಾಗಿ ಪ್ರಮೋಷನ್​ ಮಾಡುತ್ತಿಲ್ಲ ಎನ್ನುವ ಮಾತಿದೆ. ಇದು ಪ್ರಭಾಸ್​ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅಭಿಮಾನಿಗಳು ಹೈದರಾಬಾದ್​ ಪೊಲೀಸರ ಬಳಿ ಈ ದೂರು ನೀಡಿದ್ದಾರೆ. ಸದ್ಯ, ಈ ಟ್ವೀಟ್​ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: ಪ್ರಭಾಸ್​ ಜತೆ 75 ದಿನ ಕಳೆಯಲಿದ್ದಾರೆ ದೀಪಿಕಾ ಪಡುಕೋಣೆ; ಕಾರಣವೇನು ಗೊತ್ತಾ?

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು