AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧೆ ಶ್ಯಾಮ್​ ನಿರ್ದೇಶಕನ ವಿರುದ್ಧ ಪೊಲೀಸರಿಗೆ ಕಂಪ್ಲೆಂಟ್​ ನೀಡಿದ ಪ್ರಭಾಸ್​ ಫ್ಯಾನ್ಸ್ !

ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲ ಒಂದು ವಿಚಾರಗಳು ವೈರಲ್​ ಆಗುತ್ತಿರುತ್ತವೆ. ಈಗಲೂ ಆಗಿದ್ದೂ ಅದೇ.

ರಾಧೆ ಶ್ಯಾಮ್​ ನಿರ್ದೇಶಕನ ವಿರುದ್ಧ ಪೊಲೀಸರಿಗೆ ಕಂಪ್ಲೆಂಟ್​ ನೀಡಿದ ಪ್ರಭಾಸ್​ ಫ್ಯಾನ್ಸ್ !
ಪ್ರಭಾಸ್​-ರಾಧೆಶ್ಯಾಮ್​ ನಿರ್ದೇಶಕ
ರಾಜೇಶ್ ದುಗ್ಗುಮನೆ
|

Updated on: Mar 21, 2021 | 7:40 PM

Share

ಪ್ರಭಾಸ್​ ನಟನೆಯ ರಾಧೆ ಶ್ಯಾಮ್​ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈಗಾಗಲೇ ಚಿತ್ರದ ಕೆಲಸ ಪೂರ್ಣಗೊಂಡಿದ್ದು, ಜುಲೈನಲ್ಲಿ ಸಿನಿಮಾ ತೆರೆಮೇಲೆ ಬರುತ್ತಿದೆ. ಈ ಮಧ್ಯೆ ಸಿನಿಮಾದ ನಿರ್ದೇಶಕ ರಾಧಾ ಕೃಷ್ಣ ಕುಮಾರ್​ ವಿರುದ್ಧ ಪ್ರಭಾಸ್​ ಫ್ಯಾನ್ಸ್ ಗರಂ ಆಗಿದ್ದಾರೆ. ಅಷ್ಟೇ ಅಲ್ಲ, ಹೈದರಾಬಾದ್​ ಪೊಲೀಸರ ಬಳಿ ದೂರನ್ನು ಕೂಡ ನೀಡಿದ್ದಾರೆ. ಅಷ್ಟಕ್ಕೂ ದೂರು ದಾಖಲಿಸೋಕೆ ಕಾರಣ ಏನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲ ಒಂದು ವಿಚಾರಗಳು ವೈರಲ್​ ಆಗುತ್ತಿರುತ್ತವೆ. ಈಗಲೂ ಆಗಿದ್ದೂ ಅದೇ. ನಟ ನಿತಿನ್​ ನಟನೆಯ ರಂಗ್​ ದೆ ಸಿನಿಮಾ ಇದೇ 26ರಂದು ತೆರೆಕಾಣುತ್ತಿದೆ. ಸಿನಿಮಾದ ಪ್ರಮೋಷನ್​ನಲ್ಲಿ ಚಿತ್ರಂಡ ಬ್ಯುಸಿಯಾಗಿದೆ. ಈ ಮಧ್ಯೆ ಚಿತ್ರದ ನಟಿ ಕೀರ್ತಿ ಸುರೇಶ್​ ಅವರು ಸಿನಿಮಾದ ಪ್ರಮೋಷನ್​ನಲ್ಲಿ ಅಷ್ಟಾಗಿ ಪಾಲ್ಗೊಳ್ಳುತ್ತಿಲ್ಲವಂತೆ. ಇದು ಚಿತ್ರತಂಡದ ಬೇಸರಕ್ಕೆ ಕಾರಣವಾಗಿದೆ.

ಇದಕ್ಕಾಗಿ, ಕೀರ್ತಿ ಸುರೇಶ್​ ಅವರ ಫೋಟೋ ಒಂದನ್ನು ಟ್ವೀಟ್​ ಮಾಡಿದ್ದ ನಿತಿನ್​, ಫೋಟೊದಲ್ಲಿ ಇರುವವರು ಕಾಣೆಯಾಗಿದ್ದಾರೆ ಮತ್ತು ಇವರಿಗೆ ಸಿನಿಮಾ ಪ್ರಚಾರ ಕಾರ್ಯಕ್ರಮಗಳಿಗೆ ಹಾಜರಾಗಿ ಎಂದು ಯಾರಾದರೂ ಹೇಳಿ ಎಂದು ಕೋರಿದ್ದರು.ಅಚ್ಚರಿ ಎಂಬಂತೆ ಈ ಟ್ವೀಟ್​ಗೆ ಹೈದರಾಬಾದ್ ಪೊಲೀಸ್ ಇಲಾಖೆ​ ಉತ್ತರಿಸಿ, ನಿತಿನ್​ ಅವರು ಈ ವಿಚಾರ ನೋಡಿಕೊಳ್ಳುತ್ತಾರೆ ಎಂದಿತ್ತು.

ಈ ಟ್ವೀಟ್​ಗೆ ಉತ್ತರಿಸಿದ್ದ ಪ್ರಭಾಸ್​ ಅಭಿಮಾನಿಯೋರ್ವ ರಾಧೆ ಶ್ಯಾಮ್​ ನಿರ್ದೇಶಕ ರಾಧಾ ಕೃಷ್ಣ ಕುಮಾರ್​ ಅವರನ್ನು ಹಿಡಿದುಕೊಡಿ ಎಂದು ಹೈದರಾಬಾದ್ ಪೊಲೀಸರ ಬಳಿ ಆಗ್ರಹಿಸಿದ್ದಾರೆ. ರಾಧಾ ಕೃಷ್ಣ ಕುಮಾರ್​ ರಾಧೆ ಶ್ಯಾಮ್​ ಸಿನಿಮಾವನ್ನು ಸರಿಯಾಗಿ ಪ್ರಮೋಷನ್​ ಮಾಡುತ್ತಿಲ್ಲ ಎನ್ನುವ ಮಾತಿದೆ. ಇದು ಪ್ರಭಾಸ್​ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅಭಿಮಾನಿಗಳು ಹೈದರಾಬಾದ್​ ಪೊಲೀಸರ ಬಳಿ ಈ ದೂರು ನೀಡಿದ್ದಾರೆ. ಸದ್ಯ, ಈ ಟ್ವೀಟ್​ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: ಪ್ರಭಾಸ್​ ಜತೆ 75 ದಿನ ಕಳೆಯಲಿದ್ದಾರೆ ದೀಪಿಕಾ ಪಡುಕೋಣೆ; ಕಾರಣವೇನು ಗೊತ್ತಾ?

Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ