ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​ನಲ್ಲಿ ಪೈಪೋಟಿ ನಡೆಯುತ್ತಿದೆ -ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್‌ನವರು ಜನರ ತೀರ್ಪನ್ನು ಅವಹೇಳನ ಮಾಡ್ತಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಆಶಯಗಳಿಗೆ ಗೌರವ ನೀಡುತ್ತಿಲ್ಲ ಎಂದು ನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಅವರದ್ದು ಅಧಿಕಾರ ಮಾಡಲು ಬಂದಿದ್ದೇವೆ ಎಂಬ ಮನಸ್ಥಿತಿ. ಕಾಂಗ್ರೆಸ್‌ನವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಮೋದಿ, ಸಿಎಂ ಬಗ್ಗೆ ಸಾಕಷ್ಟು ಮಾತಾಡ್ತಿದ್ದಾರೆ ಎಂದು ಸಹ ಹೇಳಿದರು. ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​​ನಲ್ಲಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ, ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡುತ್ತಿದ್ದಾರೆ. ರಾಹುಲ್ ಗಾಂಧಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. […]

ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​ನಲ್ಲಿ ಪೈಪೋಟಿ ನಡೆಯುತ್ತಿದೆ -ಪ್ರಹ್ಲಾದ್ ಜೋಶಿ
ಪ್ರಹ್ಲಾದ್‌ ಜೋಶಿ

Updated on: Oct 26, 2020 | 2:42 PM

ಹುಬ್ಬಳ್ಳಿ: ಕಾಂಗ್ರೆಸ್‌ನವರು ಜನರ ತೀರ್ಪನ್ನು ಅವಹೇಳನ ಮಾಡ್ತಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಆಶಯಗಳಿಗೆ ಗೌರವ ನೀಡುತ್ತಿಲ್ಲ ಎಂದು ನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಅವರದ್ದು ಅಧಿಕಾರ ಮಾಡಲು ಬಂದಿದ್ದೇವೆ ಎಂಬ ಮನಸ್ಥಿತಿ. ಕಾಂಗ್ರೆಸ್‌ನವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ.
ಸಿದ್ದರಾಮಯ್ಯ ಮೋದಿ, ಸಿಎಂ ಬಗ್ಗೆ ಸಾಕಷ್ಟು ಮಾತಾಡ್ತಿದ್ದಾರೆ ಎಂದು ಸಹ ಹೇಳಿದರು. ಖಾಲಿ ಇಲ್ಲದ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​​ನಲ್ಲಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ, ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡುತ್ತಿದ್ದಾರೆ.

ರಾಹುಲ್ ಗಾಂಧಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. ರಾಹುಲ್ ಹೇಳಿಕೆಗಳ ಬಗ್ಗೆ ಅವರ ಪಾರ್ಟಿಯಲ್ಲೇ ನಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.