AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AA22: ಮತ್ತೋರ್ವ ತೆಲುಗು ಸ್ಟಾರ್​ ನಟನ ಹಿಂದೆ ಬಿದ್ರಾ ಪ್ರಶಾಂತ್​ ನೀಲ್​? ಹೈದರಾಬಾದ್​ನಲ್ಲಿ ಅಚ್ಚರಿಯ ಭೇಟಿ

ಸಲಾರ್​ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಇರುವ ಪ್ರಶಾಂತ್​ ನೀಲ್​ ಇಂದು ಹೈದರಾಬಾದ್​ನಲ್ಲಿರುವ ಗೀತಾ ಆರ್ಟ್ಸ್​ ಸ್ಟುಡಿಯೋಗೆ ಭೇಟಿಕೊಟ್ಟಿದ್ದಾರೆ. ಈ ವೇಳೆ ಅಲ್ಲು ಅರ್ಜುನ್​ ಕೂಡ ಅಲ್ಲಿಗೆ ಬಂದಿದ್ದು ವಿಶೇಷವಾಗಿತ್ತು.

AA22: ಮತ್ತೋರ್ವ ತೆಲುಗು ಸ್ಟಾರ್​ ನಟನ ಹಿಂದೆ ಬಿದ್ರಾ ಪ್ರಶಾಂತ್​ ನೀಲ್​? ಹೈದರಾಬಾದ್​ನಲ್ಲಿ ಅಚ್ಚರಿಯ ಭೇಟಿ
ಅಲ್ಲು ಅರ್ಜುನ್​-ಪ್ರಶಾಂತ್​ ನೀಲ್​
ರಾಜೇಶ್ ದುಗ್ಗುಮನೆ
|

Updated on: Mar 09, 2021 | 6:56 PM

Share

ಕೆಜಿಎಫ್​ ಚಾಪ್ಟರ್​ 2 ನಂತರ ಪ್ರಶಾಂತ್​ ನೀಲ್​ ಮುಂದಿನ ಪ್ರಾಜೆಕ್ಟ್​ ಯಾವುದು ಎನ್ನುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ತೆಲುಗಿನ ಸ್ಟಾರ್​ ನಟ ಪ್ರಭಾಸ್​ ಜತೆ ಸಲಾರ್​ ಚಿತ್ರಕ್ಕಾಗಿ ಕೈಜೋಡಿಸುವ ಮೂಲಕ ಪ್ರಶಾಂತ್​ ನೀಲ್​ ಈ ಎಲ್ಲ ಚರ್ಚೆಗಳಿಗೆ ತೆರೆ ಎಳೆದಿದ್ದರು. ಈಗ ಸಲಾರ್​ ಬಗ್ಗೆ ಒಂದಷ್ಟು ಕುತೂಹಲಗಳು ಹುಟ್ಟಿ ತಣ್ಣಗಾಗುವುದರೊಳಗೆ ಪ್ರಶಾಂತ್​ ನೀಲ್​ ಮತ್ತೋರ್ವ ಟಾಲಿವುಡ್​ ಸ್ಟಾರ್​ ನಟನ ಹಿಂದೆ ಬಿದ್ದಂತೆ ಕಾಣುತ್ತಿದೆ. ಇಂದು (ಮಾ.9) ಅಲ್ಲು ಅರ್ಜುನ್​ ಅವರನ್ನು ಪ್ರಶಾಂತ್​ ನೀಲ್​ ಭೇಟಿ ಮಾಡಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಸಲಾರ್​ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಇರುವ ಪ್ರಶಾಂತ್​ ನೀಲ್​ ಇಂದು ಹೈದರಾಬಾದ್​ನಲ್ಲಿರುವ ಗೀತಾ ಆರ್ಟ್ಸ್​ ಸ್ಟುಡಿಯೋಗೆ ಭೇಟಿಕೊಟ್ಟಿದ್ದಾರೆ. ಈ ವೇಳೆ ಅಲ್ಲು ಅರ್ಜುನ್​ ಕೂಡ ಅಲ್ಲಿಗೆ ಬಂದಿದ್ದರು. ಇದೊಂದು ಸಾಮಾನ್ಯ ಭೇಟಿ ಎನ್ನುವ ಸ್ಪಷ್ಟನೆ ಕೇಳಿ ಬಂದಿದೆ. ಆದರೆ, ಈ ಭೇಟಿ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ.

ಮೂಲಗಳ ಪ್ರಕಾರ್​ ಅಲ್ಲು ಅರ್ಜುನ್​ 22ನೇ ಸಿನಿಮಾಗೆ ಪ್ರಶಾಂತ್​ ನೀಲ್​ ಆ್ಯಕ್ಷನ್​ ಕಟ್​ ಹೇಳಲಿದ್ದಾರಂತೆ. ಇಂದಿನ ಭೇಟಿ ವೇಳೆ ಪ್ರಶಾಂತ್​ ಸಿನಿಮಾ ಕಥೆಯ ಒಂದೆಳೆ ಬಿಚ್ಚಿಟ್ಟಿದ್ದು, ಇದು ಅಲ್ಲು ಅರ್ಜುನ್​ಗೆ ಇಷ್ಟವಾಗಿದೆ ಎನ್ನಲಾಗಿದೆ.

ಏಪ್ರಿಲ್​ 8 ಅಲ್ಲು ಅರ್ಜುನ್​ ಜನ್ಮದಿನ. ಈ ವೇಳೆ ಅವರ ನಟನೆಯ ಪುಷ್ಪ ಸಿನಿಮಾದ ಟೀಸರ್​ ರಿಲೀಸ್​ ಆಗುತ್ತಿದೆ. ಅವರ 21ನೇ ಸಿನಿಮಾದ ಟೈಟಲ್​ ಲಾಂಚ್​ ಕೂಡ ಆಗುತ್ತಿದೆ. ಇದರ ಜತೆಗೆ ಪ್ರಶಾಂತ್​ ನೀಲ್​ ಸಿನಿಮಾದ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ ಎಂಬುದು ಸದ್ಯ ಕೇಳಿಬರುತ್ತಿರುವ ಮಾಹಿತಿ.

ಇನ್ನು, ಪ್ರಶಾಂತ್​ ನೀಲ್​-ಅಲ್ಲು ಅರ್ಜುನ್​ ಭೇಟಿ ನಂತರದಲ್ಲಿ ಟ್ವಿಟರ್​ನಲ್ಲಿ AA22 ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿದೆ. ಅಭಿಮಾನಿಗಳು ಈ ಹ್ಯಾಶ್​ಟ್ಯಾಗ್​ ಅಡಿಯಲ್ಲಿ ಸಾಲು ಸಾಲು ಟ್ವೀಟ್​ಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಉಗ್ರಂ ನಂತರ ಮತ್ತೆ ಒಂದಾದ್ರು ಶ್ರೀಮುರುಳಿ-ಪ್ರಶಾಂತ್​ ನೀಲ್​!

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ