AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಯನ್ನು ನೆನಪಿಸಿಕೊಂಡು ಗಳಗಳನೆ ಅತ್ತ ಪ್ರಶಾಂತ್​ ಸಂಬರಗಿ..

ಮನೆಯಲ್ಲಿ ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ದಿವ್ಯಾ ಸುರೇಶ್​ ಸೇರಿ ಅನೇಕರು ಅತ್ತಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಪ್ರಶಾಂತ್​ ಅತ್ತಂತಾಗಿದೆ. 

ಹೆಂಡತಿಯನ್ನು ನೆನಪಿಸಿಕೊಂಡು ಗಳಗಳನೆ ಅತ್ತ ಪ್ರಶಾಂತ್​ ಸಂಬರಗಿ..
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Mar 18, 2021 | 7:10 AM

Share

ಬಿಗ್​ ಬಾಸ್​ ಮನೆ ಸೇರಿರುವ ಸ್ಟ್ರಾಂಗ್​ ಅಭ್ಯರ್ಥಿ ಯಾರು ಎಂದು ಕೇಳಿದರೆ ಬಹುತೇಕರು ಪ್ರಶಾಂತ್​ ಸಂಬರಗಿ ಅವರ ಹೆಸರನ್ನು ಹೇಳುತ್ತಾರೆ. ಇದನ್ನು ಅವರು ಟಾಸ್ಕ್​ ಮೂಲಕವೂ ಸಾಬೀತು ಮಾಡಿದ್ದಾರೆ. ಯಾವುದೇ ವಿಚಾರಕ್ಕೂ ಪ್ರಶಾಂತ್​ ಅವರು ಎಮೋಷನಲ್​ ಆಗಿಲ್ಲ. ಈ ಕಾರಣಕ್ಕೇ ಅವರು ಅನೇಕ ಟಾಸ್ಕ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಆದರೆ, ಈಗ ಮಾತ್ರ ಅವರು ಹೆಂಡತಿಯನ್ನು ನೆನೆದು ಗಳಗಳನೆ ಅತ್ತಿದ್ದಾರೆ. ಬಿಗ್​ ಬಾಸ್​ ಮನೆ ಸೇರಿದ ಸ್ಪರ್ಧಿಗಳು ಮೂರನೇ ವಾರವನ್ನು ಕಳೆಯುತ್ತಿದ್ದಾರೆ. ಈ ಅವಧಿಯಲ್ಲಿ ಅವರು ಯಾರಿಗೂ ಹೊರ ಜಗತ್ತಿನ ಸಂಪರ್ಕ ಇಲ್ಲ. ಮನೆಯವರ ಜತೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ಇದೇ ವಿಚಾರಕ್ಕೆ ರಘು ತುಂಬಾನೇ ನೊಂದುಕೊ0ಡಿದ್ದರು. ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ನಿರ್ಧಾರಕ್ಕೂ ಬಂದಿದ್ದರು.

ಆದರೆ ಪ್ರಶಾಂತ್​ ಮಾತ್ರ ಒಂದೇ ಒಂದು ದಿನ ಮನೆಯವರನ್ನು ನೆನಪು ಮಾಡಿಕೊಂಡು ಅತ್ತಿಲ್ಲ. ಆದರೆ, ಬುಧವಾರ ಬಿಗ್​ ಬಾಸ್​ ಎದುರು ಪ್ರಶಾಂತ್​ ಅತ್ತಿದ್ದಾರೆ. ವಿಶೇಷ ರೂಂಗೆ ಬರುವಂತೆ ಪ್ರಶಾಂತ್​ಗೆ ಬಿಗ್​ ಬಾಸ್​ ಆಹ್ವಾನ ನೀಡಿದ್ದರು. ಈ ವೇಳೆ ನಿಮ್ಮ ಆರೋಗ್ಯ ಹೇಗಿದೆ ಎಂದು ಬಿಗ್​ ಬಾಸ್​ ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಪ್ರಶಾಂತ್​ ಆರೋಗ್ಯವಾಗಿದ್ದೇನೆ ಎಂದಿದ್ದಾರೆ. ಏನಾದ್ರೂ ಹೇಳೋದಿದೆಯಾ ಎಂದು ಬಿಗ್​ ಬಾಸ್​ ಕೇಳಿದರು.

ಇದಕ್ಕೆ ಅಳುತ್ತಲೇ ಉತ್ತರಿಸಿದ ಪ್ರಶಾಂತ್​, ನನ್ನ ಪತ್ನಿ ಆಯುರ್ವೇದಿಕ್​ ವೈದ್ಯೆ. ಅವರಿಗೆ ನನ್ನ ಧ್ವನಿ ಹೋಗಿರುವುದು ನೋಡಿ ಔಷಧ ಕಳುಹಿಸಿಕೊಟ್ಟಿದ್ದಾರೆ. ಅವರು ಮನೆಯಲ್ಲೇ ಕೂತು ನನ್ನ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ. ಇಷ್ಟು ದಿನ ಅವರ ನೆನಪು ಆಗುತ್ತಾ ಇರಲಿಲ್ಲ. ಈಗ ಔಷಧ ಕಳುಹಿಸಿಕೊಟ್ಟಿದ್ದರಿಂದ ಅವಳ ನೆನಪಾಗುತ್ತಿದೆ ಎಂದರು. ನಂತರ ಕಣ್ಣು ಒರಿಸಿಕೊಂಡು ಸುಧಾರಿಸಿಕೊಂಡರು.

ಮನೆಯಲ್ಲಿ ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ದಿವ್ಯಾ ಸುರೇಶ್​ ಸೇರಿ ಅನೇಕರು ಅತ್ತಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಪ್ರಶಾಂತ್​ ಅತ್ತಂತಾಗಿದೆ. ಅಲ್ಲದೆ, ಅನೇಕರಿಗೆ ಈ ವಿಚಾರ ಅಚ್ಚರಿ ಕೂಡ ಮೂಡಿಸಿದೆ.

ಇದನ್ನೂ ಓದಿ: ದಿವ್ಯಾ ಉರುಡುಗ ಮದುವೆ ಆಗುವ ಹುಡುಗ ಹೇಗಿರಬೇಕು​? ಬಿಗ್​ ಬಾಸ್​ನಲ್ಲಿ ಸತ್ಯ ಬಾಯ್ಬಿಟ್ಟ ಮಲೆನಾಡ ಹುಡುಗಿ!

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ