Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​

ವೈರಸ್​ ಟಾಸ್ಕ್​ ನಡೆಯುವಾಗ ರಾತ್ರಿ ಕೆಲವರನ್ನು ಪ್ರಶಾಂತ್​ ಗಟ್ಟಿಯಾಗಿ ಹಗ್​ ಮಾಡಿಕೊಂಡಿದ್ದರು. ಈ ಫೋಟೋಗಳು ಸಾಕಷ್ಟು ವೈರಲ್​ ಆಗಿತ್ತು.

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​
ಪ್ರಶಾಂತ್​ ಸಂಬರಗಿ-ಸುದೀಪ್​
Follow us
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು

Updated on:Mar 14, 2021 | 9:27 AM

ಬಿಗ್​ ಬಾಸ್​ ಮನೆ ಸೇರಿರುವ ಪ್ರಶಾಂತ್​ ಸಂಬರಗಿ ತುಂಬಾನೇ ಚರ್ಚೆಗೆ ಕಾರಣರಾಗಿದ್ದರು. ಇದಕ್ಕೆ ಕಾರಣ ಅವರು ಎಲ್ಲಾ ಸ್ಪರ್ಧಿಗಳ ಬಗ್ಗೆ ರೇಗೋದು. ಮತ್ತೊಂದು ಎಂದರೆ, ಪ್ರಶಾಂತ್​ ಸಂಬರಗಿ ಹೆಣ್ಣುಮಕ್ಕಳನ್ನು ಟೈಟ್​ ಆಗಿ ಹಗ್​ ಮಾಡಿಕೊಳ್ಳುವುದು. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಟ್ರೋಲ್​ ಕೂಡ ಹರಿದಾಡಿತ್ತು. ಈಗ ಈ ವಿಚಾರದಲ್ಲಿ ಪ್ರಶಾಂತ್​ಗೆ ಸುದೀಪ್​ ಖಡಕ್​ ಆಗಿ ವಾರ್ನಿಂಗ್​ ನೀಡಿದ್ದಾರೆ. ವೈರಸ್​ ಟಾಸ್ಕ್​ ನಡೆಯುವಾಗ ರಾತ್ರಿ ಕೆಲವರನ್ನು ಪ್ರಶಾಂತ್​ ಗಟ್ಟಿಯಾಗಿ ಹಗ್​ ಮಾಡಿಕೊಂಡಿದ್ದರು. ಈ ಫೋಟೋಗಳು ಸಾಕಷ್ಟು ವೈರಲ್​ ಆಗಿತ್ತು. ಇದನ್ನು ನೋಡಿದ ಅನೇಕರು ಪ್ರಶಾಂತ್​ ಸಂಬರಗಿ ಹೀಗೆಕೆ ಮಾಡ್ತಾರಪ್ಪ ಎಂದುಕೊಂಡಿದ್ದರು! ಈಗ ಈ ವಿಚಾರದಲ್ಲಿ ಸುದೀಪ್​ ಅವರೇ ಮಧ್ಯಪ್ರವೇಶಿಸಿದ್ದಾರೆ.

ವೀಕೆಂಡ್​ನಲ್ಲಿ ಸ್ಪರ್ಧಿಗಳ ಜತೆ ಕಿಚ್ಚ ಮಾತನಾಡಿದ್ದಾರೆ. ಆಗ ಸುದೀಪ್​ ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಪ್ರಶಾಂತ್​ ಅವರೇ ನೀವು ಎಲ್ಲರನ್ನೂ ತಬ್ಬಿಕೊಳ್ಳುತ್ತೀರಿ. ಕೆಲವರನ್ನು ತುಂಬಾನೇ ಟೈಟ್​ ಆಗಿ ತಬ್ಬಿಕೊಳ್ಳುತ್ತೀರಿ. ನೀವು ತಬ್ಬಿಕೊಳ್ಳುತ್ತೀರಲ್ಲ ಅದು ಸಮಸ್ಯೆ ಅಲ್ಲ. ಆದರೆ ತಬ್ಬಿಕೊಂಡಾಗ ಮಾತನಾಡುತ್ತೀರಲ್ಲ ಅದು ಸಮಸ್ಯೆ. ನೀವು ತಬ್ಬಿಕೊಂಡಾಗ ಮೈಕ್​ ಒತ್ತಿಕೊಂಡಿರುತ್ತದೆ. ಹಾಗಾಗಿ ನೀವು ಮಾತನಾಡಿದ್ದು ಬೇರೆಯದೇ ರೀತಿ ಕೇಳುತ್ತದೆ ಎಂದಿದ್ದಾರೆ ಸುದೀಪ್​.

ನೀವು ಒಬ್ಬೊಬ್ಬರನ್ನು ತುಂಬಾ ದೀರ್ಘಕಾಲ ತಬ್ಬಿಕೊಳ್ಳುತ್ತೀರಿ. ಅದು ತಪ್ಪು ಎಂದು ನಾನು ಹೇಳುತ್ತಿಲ್ಲ. ತಬ್ಬಿಸಿಕೊಳ್ಳುವವರಿಗೆ ಅಭ್ಯಂತರವಿಲ್ಲ ಎಂದರೆ ನಮ್ಮದೇನು ಅಭ್ಯಂತರ? 2 ಸೆಕೆಂಡ್​ಗಿಂತ ಹೆಚ್ಚು ಕಾಲ ತಬ್ಬಿಕೊಳ್ಳಬಾರದು ಎಂದು ಬಿಗ್​ ಬಾಸ್​ ನಿಯಮ ಹಾಕಿಲ್ಲ. ಆದರೆ, ಬಿಗ್​ ಬಾಸ್​ ಈ ರೀತಿ ನಿಯಮ ತರೋ ತರ ಮಾಡಿಕೊಳ್ಳಬೇಡಿ ಎಂದು ಹೇಳಿದ್ದಾರೆ ಸುದೀಪ್​.

ಇದನ್ನೂ ಓದಿ: Bigg Boss Kannada Elimination: ಈ ವಾರ ಬಿಗ್​ ಬಾಸ್​​ ಮನೆಯಿಂದ ಹೊರಹೋಗುತ್ತಿರುವ ಸ್ಪರ್ಧಿ ಯಾರು?

Published On - 7:44 am, Sun, 14 March 21

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು