AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​

ವೈರಸ್​ ಟಾಸ್ಕ್​ ನಡೆಯುವಾಗ ರಾತ್ರಿ ಕೆಲವರನ್ನು ಪ್ರಶಾಂತ್​ ಗಟ್ಟಿಯಾಗಿ ಹಗ್​ ಮಾಡಿಕೊಂಡಿದ್ದರು. ಈ ಫೋಟೋಗಳು ಸಾಕಷ್ಟು ವೈರಲ್​ ಆಗಿತ್ತು.

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​
ಪ್ರಶಾಂತ್​ ಸಂಬರಗಿ-ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 14, 2021 | 9:27 AM

Share

ಬಿಗ್​ ಬಾಸ್​ ಮನೆ ಸೇರಿರುವ ಪ್ರಶಾಂತ್​ ಸಂಬರಗಿ ತುಂಬಾನೇ ಚರ್ಚೆಗೆ ಕಾರಣರಾಗಿದ್ದರು. ಇದಕ್ಕೆ ಕಾರಣ ಅವರು ಎಲ್ಲಾ ಸ್ಪರ್ಧಿಗಳ ಬಗ್ಗೆ ರೇಗೋದು. ಮತ್ತೊಂದು ಎಂದರೆ, ಪ್ರಶಾಂತ್​ ಸಂಬರಗಿ ಹೆಣ್ಣುಮಕ್ಕಳನ್ನು ಟೈಟ್​ ಆಗಿ ಹಗ್​ ಮಾಡಿಕೊಳ್ಳುವುದು. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಟ್ರೋಲ್​ ಕೂಡ ಹರಿದಾಡಿತ್ತು. ಈಗ ಈ ವಿಚಾರದಲ್ಲಿ ಪ್ರಶಾಂತ್​ಗೆ ಸುದೀಪ್​ ಖಡಕ್​ ಆಗಿ ವಾರ್ನಿಂಗ್​ ನೀಡಿದ್ದಾರೆ. ವೈರಸ್​ ಟಾಸ್ಕ್​ ನಡೆಯುವಾಗ ರಾತ್ರಿ ಕೆಲವರನ್ನು ಪ್ರಶಾಂತ್​ ಗಟ್ಟಿಯಾಗಿ ಹಗ್​ ಮಾಡಿಕೊಂಡಿದ್ದರು. ಈ ಫೋಟೋಗಳು ಸಾಕಷ್ಟು ವೈರಲ್​ ಆಗಿತ್ತು. ಇದನ್ನು ನೋಡಿದ ಅನೇಕರು ಪ್ರಶಾಂತ್​ ಸಂಬರಗಿ ಹೀಗೆಕೆ ಮಾಡ್ತಾರಪ್ಪ ಎಂದುಕೊಂಡಿದ್ದರು! ಈಗ ಈ ವಿಚಾರದಲ್ಲಿ ಸುದೀಪ್​ ಅವರೇ ಮಧ್ಯಪ್ರವೇಶಿಸಿದ್ದಾರೆ.

ವೀಕೆಂಡ್​ನಲ್ಲಿ ಸ್ಪರ್ಧಿಗಳ ಜತೆ ಕಿಚ್ಚ ಮಾತನಾಡಿದ್ದಾರೆ. ಆಗ ಸುದೀಪ್​ ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಪ್ರಶಾಂತ್​ ಅವರೇ ನೀವು ಎಲ್ಲರನ್ನೂ ತಬ್ಬಿಕೊಳ್ಳುತ್ತೀರಿ. ಕೆಲವರನ್ನು ತುಂಬಾನೇ ಟೈಟ್​ ಆಗಿ ತಬ್ಬಿಕೊಳ್ಳುತ್ತೀರಿ. ನೀವು ತಬ್ಬಿಕೊಳ್ಳುತ್ತೀರಲ್ಲ ಅದು ಸಮಸ್ಯೆ ಅಲ್ಲ. ಆದರೆ ತಬ್ಬಿಕೊಂಡಾಗ ಮಾತನಾಡುತ್ತೀರಲ್ಲ ಅದು ಸಮಸ್ಯೆ. ನೀವು ತಬ್ಬಿಕೊಂಡಾಗ ಮೈಕ್​ ಒತ್ತಿಕೊಂಡಿರುತ್ತದೆ. ಹಾಗಾಗಿ ನೀವು ಮಾತನಾಡಿದ್ದು ಬೇರೆಯದೇ ರೀತಿ ಕೇಳುತ್ತದೆ ಎಂದಿದ್ದಾರೆ ಸುದೀಪ್​.

ನೀವು ಒಬ್ಬೊಬ್ಬರನ್ನು ತುಂಬಾ ದೀರ್ಘಕಾಲ ತಬ್ಬಿಕೊಳ್ಳುತ್ತೀರಿ. ಅದು ತಪ್ಪು ಎಂದು ನಾನು ಹೇಳುತ್ತಿಲ್ಲ. ತಬ್ಬಿಸಿಕೊಳ್ಳುವವರಿಗೆ ಅಭ್ಯಂತರವಿಲ್ಲ ಎಂದರೆ ನಮ್ಮದೇನು ಅಭ್ಯಂತರ? 2 ಸೆಕೆಂಡ್​ಗಿಂತ ಹೆಚ್ಚು ಕಾಲ ತಬ್ಬಿಕೊಳ್ಳಬಾರದು ಎಂದು ಬಿಗ್​ ಬಾಸ್​ ನಿಯಮ ಹಾಕಿಲ್ಲ. ಆದರೆ, ಬಿಗ್​ ಬಾಸ್​ ಈ ರೀತಿ ನಿಯಮ ತರೋ ತರ ಮಾಡಿಕೊಳ್ಳಬೇಡಿ ಎಂದು ಹೇಳಿದ್ದಾರೆ ಸುದೀಪ್​.

ಇದನ್ನೂ ಓದಿ: Bigg Boss Kannada Elimination: ಈ ವಾರ ಬಿಗ್​ ಬಾಸ್​​ ಮನೆಯಿಂದ ಹೊರಹೋಗುತ್ತಿರುವ ಸ್ಪರ್ಧಿ ಯಾರು?

Published On - 7:44 am, Sun, 14 March 21

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?