AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Sambargi: ಪ್ರಶಾಂತ್​ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್​ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ

ಪ್ರಶಾಂತ್​ ಅವರನ್ನು ಈ ಜೈಲಿಗೆ ಹಾಕಿ ಎನ್ನುವ ಬೇಡಿಕೆ ನಿಧಿ ಅವರದ್ದು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

Prashanth Sambargi: ಪ್ರಶಾಂತ್​ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್​ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on: Mar 04, 2021 | 12:45 PM

Share

ಬಿಹ್​ ಬಾಸ್​ ಮನೆ ಒಳಗೆ ತೆರಳಿರುವ 17 ಸ್ಪರ್ಧಿಗಳ ಅಸಲಿ ಮುಖ ಈಗ ಬಯಲಾಗುತ್ತಿದೆ. ಕೆಲವರು ತುಂಬಾನೇ ಸಾಫ್ಟ್​ ತರ ಕಂಡರೂ ಮನೆ ಒಳಗೆ ಸಖತ್​ ರಫ್​-ಆ್ಯಂಡ್​ ಟಫ್​. ಮನೆ ಹೊರಗೆ ತುಂಬಾನೇ ಅಬ್ಬರ ಮಾಡಿದವರು ಮನೆ ಒಳಗೆ ತುಂಬಾನೇ ಸೈಲೆಂಟ್​. ಆದರೆ, ಮನೆ ಒಳಗೂ ಹೊರಗೂ ಒಂದೇ ತರ ಇದ್ದವರು ಪ್ರಶಾಂತ್​ ಸಂಬರಗಿ. ಸಾಕಷ್ಟು ವಿವಾದಗಳಿಂದಲೇ ಸುದ್ದಿಯಾಗಿದ್ದ ಅವರು, ಈಗ ಮನೆ ಒಳಗೂ ಜಗಳಕ್ಕೆ ಕಾರಣರಾಗುತ್ತಿದ್ದಾರೆ. ಅವರನ್ನು ಮನೆ ಒಳಗೆ ಇರುವ ಜೈಲಿಗೆ ಕಳುಹಿಸುವಂತೆ ನಿಧಿ ಸುಬ್ಬಯ್ಯ ಆಗ್ರಹಿಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಜೈಲು ಇರುವ ವಿಚಾರ ಗೊತ್ತೇ ಇದೆ. ಏನಾದರೂ ತಪ್ಪು ಮಾಡಿದರೆ ಅಥವಾ ಬಿಗ್​ ಬಾಸ್​ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ ಈ ಜೈಲಿನೊಳಗೆ ಹಾಕಲಾಗುತ್ತದೆ. ಬಿಗ್​ ಬಾಸ್​ ಮನೆಯೇ ಒಂದು ಜೈಲಿನ ರೀತಿ ಇದ್ದರೆ, ಅದಕ್ಕೂ ಒಂದು ಹೆಜ್ಜೆ ಮುಂದೆ ಎಂಬಂತಿದೆ ಈ ಜೈಲು. ಪ್ರಶಾಂತ್​ ಅವರನ್ನು ಈ ಜೈಲಿಗೆ ಹಾಕಿ ಎನ್ನುವ ಬೇಡಿಕೆ ನಿಧಿ ಅವರದ್ದು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ನಿಧಿ ಹಾಗೂ ಅರವಿಂದ್​ ನಿನ್ನೆ ಕ್ಯಾಮೆರಾ ಎದುರು ಬಂದಿದ್ದರು. ಈ ವೇಳೆ, ನನಗೆ ಸ್ವಿಮ್ಮಿಂಗ್​ ಫೂಲ್​ನ ಟಾಸ್ಕ್​ ಮಾಡಿ ನೆಗಡಿ ಆಗಿದೆ. ಕಾಫಿ ಕುಡಿಯೋಣ ಎಂದರೆ ಕಾಫಿ ಪೌಡರ್​ ಇಲ್ಲ. ಪ್ರಶಾಂತ್​ ಅವರು ಕಾಫಿ ಪೌಡರ್​ ಖಾಲಿ ಮಾಡಿದ್ದಾರೆ. ಅಗತ್ಯ ಬಿದ್ದರೆ ಅವರನ್ನು ಜೈಲಿಗೆ ಹಾಕಿ. ನಮಗೆ ಕಾಫಿ ಪೌಡರ್​ ಕಳುಹಿಸಿ ಎಂದಿದ್ದಾರೆ.

ಒಂದೊಮ್ಮೆ ನಿಧಿ ಇಟ್ಟ ಬೇಡಿಕೆ ಪ್ರಶಾಂತ್​ ಅವರಿಗೆ ಗೊತ್ತಾದರೆ ಬಿಗ್ ಬಾಸ್​ ಮನೆಯಲ್ಲಿ ದೊಡ್ಡ ಜಗಳ ನಡೆಯೋದು ಗ್ಯಾರಂಟಿ. ನಿನ್ನೆ ನಡೆದ ಸಣ್ಣ ವಿಚಾರಕ್ಕೆ ಬ್ರೋ ಗೌಡ ಜತೆ ಪ್ರಶಾಂತ್​ ಕಾಲ್ಕೆರುದುಕೊಂಡು ಜಗಳಕ್ಕೆ ಹೋಗಿದ್ದರು. ಹೀಗಿರುವಾಗ ನಿಧಿ ತಮ್ಮನ್ನು ಜೈಲಿಗೆ ಕಳುಹಿಸುವಂತೆ ಕೋರಿದ್ದು ಗೊತ್ತಾದರೆ ಪ್ರಶಾಂತ್​ ಮತ್ತೆ ಕೂಗಾಡುವುದರಲ್ಲಿ  ಅನುಮಾನವಿಲ್ಲ.

ಇದನ್ನೂ ಓದಿ: BBK8: ಬಿಗ್​ ಬಾಸ್​ ಮೊದಲ ವಾರದಲ್ಲಿ ಹೊರ ಹೋಗೋದು ಶುಭಾ ಪೂಂಜಾ? ಮೂರನೇ ದಿನ ಹೊಸ ಟ್ವಿಸ್ಟ್​

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?