AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Sambargi: ಪ್ರಶಾಂತ್​ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್​ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ

ಪ್ರಶಾಂತ್​ ಅವರನ್ನು ಈ ಜೈಲಿಗೆ ಹಾಕಿ ಎನ್ನುವ ಬೇಡಿಕೆ ನಿಧಿ ಅವರದ್ದು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

Prashanth Sambargi: ಪ್ರಶಾಂತ್​ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್​ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on: Mar 04, 2021 | 12:45 PM

Share

ಬಿಹ್​ ಬಾಸ್​ ಮನೆ ಒಳಗೆ ತೆರಳಿರುವ 17 ಸ್ಪರ್ಧಿಗಳ ಅಸಲಿ ಮುಖ ಈಗ ಬಯಲಾಗುತ್ತಿದೆ. ಕೆಲವರು ತುಂಬಾನೇ ಸಾಫ್ಟ್​ ತರ ಕಂಡರೂ ಮನೆ ಒಳಗೆ ಸಖತ್​ ರಫ್​-ಆ್ಯಂಡ್​ ಟಫ್​. ಮನೆ ಹೊರಗೆ ತುಂಬಾನೇ ಅಬ್ಬರ ಮಾಡಿದವರು ಮನೆ ಒಳಗೆ ತುಂಬಾನೇ ಸೈಲೆಂಟ್​. ಆದರೆ, ಮನೆ ಒಳಗೂ ಹೊರಗೂ ಒಂದೇ ತರ ಇದ್ದವರು ಪ್ರಶಾಂತ್​ ಸಂಬರಗಿ. ಸಾಕಷ್ಟು ವಿವಾದಗಳಿಂದಲೇ ಸುದ್ದಿಯಾಗಿದ್ದ ಅವರು, ಈಗ ಮನೆ ಒಳಗೂ ಜಗಳಕ್ಕೆ ಕಾರಣರಾಗುತ್ತಿದ್ದಾರೆ. ಅವರನ್ನು ಮನೆ ಒಳಗೆ ಇರುವ ಜೈಲಿಗೆ ಕಳುಹಿಸುವಂತೆ ನಿಧಿ ಸುಬ್ಬಯ್ಯ ಆಗ್ರಹಿಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಜೈಲು ಇರುವ ವಿಚಾರ ಗೊತ್ತೇ ಇದೆ. ಏನಾದರೂ ತಪ್ಪು ಮಾಡಿದರೆ ಅಥವಾ ಬಿಗ್​ ಬಾಸ್​ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ ಈ ಜೈಲಿನೊಳಗೆ ಹಾಕಲಾಗುತ್ತದೆ. ಬಿಗ್​ ಬಾಸ್​ ಮನೆಯೇ ಒಂದು ಜೈಲಿನ ರೀತಿ ಇದ್ದರೆ, ಅದಕ್ಕೂ ಒಂದು ಹೆಜ್ಜೆ ಮುಂದೆ ಎಂಬಂತಿದೆ ಈ ಜೈಲು. ಪ್ರಶಾಂತ್​ ಅವರನ್ನು ಈ ಜೈಲಿಗೆ ಹಾಕಿ ಎನ್ನುವ ಬೇಡಿಕೆ ನಿಧಿ ಅವರದ್ದು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ನಿಧಿ ಹಾಗೂ ಅರವಿಂದ್​ ನಿನ್ನೆ ಕ್ಯಾಮೆರಾ ಎದುರು ಬಂದಿದ್ದರು. ಈ ವೇಳೆ, ನನಗೆ ಸ್ವಿಮ್ಮಿಂಗ್​ ಫೂಲ್​ನ ಟಾಸ್ಕ್​ ಮಾಡಿ ನೆಗಡಿ ಆಗಿದೆ. ಕಾಫಿ ಕುಡಿಯೋಣ ಎಂದರೆ ಕಾಫಿ ಪೌಡರ್​ ಇಲ್ಲ. ಪ್ರಶಾಂತ್​ ಅವರು ಕಾಫಿ ಪೌಡರ್​ ಖಾಲಿ ಮಾಡಿದ್ದಾರೆ. ಅಗತ್ಯ ಬಿದ್ದರೆ ಅವರನ್ನು ಜೈಲಿಗೆ ಹಾಕಿ. ನಮಗೆ ಕಾಫಿ ಪೌಡರ್​ ಕಳುಹಿಸಿ ಎಂದಿದ್ದಾರೆ.

ಒಂದೊಮ್ಮೆ ನಿಧಿ ಇಟ್ಟ ಬೇಡಿಕೆ ಪ್ರಶಾಂತ್​ ಅವರಿಗೆ ಗೊತ್ತಾದರೆ ಬಿಗ್ ಬಾಸ್​ ಮನೆಯಲ್ಲಿ ದೊಡ್ಡ ಜಗಳ ನಡೆಯೋದು ಗ್ಯಾರಂಟಿ. ನಿನ್ನೆ ನಡೆದ ಸಣ್ಣ ವಿಚಾರಕ್ಕೆ ಬ್ರೋ ಗೌಡ ಜತೆ ಪ್ರಶಾಂತ್​ ಕಾಲ್ಕೆರುದುಕೊಂಡು ಜಗಳಕ್ಕೆ ಹೋಗಿದ್ದರು. ಹೀಗಿರುವಾಗ ನಿಧಿ ತಮ್ಮನ್ನು ಜೈಲಿಗೆ ಕಳುಹಿಸುವಂತೆ ಕೋರಿದ್ದು ಗೊತ್ತಾದರೆ ಪ್ರಶಾಂತ್​ ಮತ್ತೆ ಕೂಗಾಡುವುದರಲ್ಲಿ  ಅನುಮಾನವಿಲ್ಲ.

ಇದನ್ನೂ ಓದಿ: BBK8: ಬಿಗ್​ ಬಾಸ್​ ಮೊದಲ ವಾರದಲ್ಲಿ ಹೊರ ಹೋಗೋದು ಶುಭಾ ಪೂಂಜಾ? ಮೂರನೇ ದಿನ ಹೊಸ ಟ್ವಿಸ್ಟ್​

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು