AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Sambargi: ಪ್ರಶಾಂತ್​ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್​ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ

ಪ್ರಶಾಂತ್​ ಅವರನ್ನು ಈ ಜೈಲಿಗೆ ಹಾಕಿ ಎನ್ನುವ ಬೇಡಿಕೆ ನಿಧಿ ಅವರದ್ದು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

Prashanth Sambargi: ಪ್ರಶಾಂತ್​ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್​ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on: Mar 04, 2021 | 12:45 PM

Share

ಬಿಹ್​ ಬಾಸ್​ ಮನೆ ಒಳಗೆ ತೆರಳಿರುವ 17 ಸ್ಪರ್ಧಿಗಳ ಅಸಲಿ ಮುಖ ಈಗ ಬಯಲಾಗುತ್ತಿದೆ. ಕೆಲವರು ತುಂಬಾನೇ ಸಾಫ್ಟ್​ ತರ ಕಂಡರೂ ಮನೆ ಒಳಗೆ ಸಖತ್​ ರಫ್​-ಆ್ಯಂಡ್​ ಟಫ್​. ಮನೆ ಹೊರಗೆ ತುಂಬಾನೇ ಅಬ್ಬರ ಮಾಡಿದವರು ಮನೆ ಒಳಗೆ ತುಂಬಾನೇ ಸೈಲೆಂಟ್​. ಆದರೆ, ಮನೆ ಒಳಗೂ ಹೊರಗೂ ಒಂದೇ ತರ ಇದ್ದವರು ಪ್ರಶಾಂತ್​ ಸಂಬರಗಿ. ಸಾಕಷ್ಟು ವಿವಾದಗಳಿಂದಲೇ ಸುದ್ದಿಯಾಗಿದ್ದ ಅವರು, ಈಗ ಮನೆ ಒಳಗೂ ಜಗಳಕ್ಕೆ ಕಾರಣರಾಗುತ್ತಿದ್ದಾರೆ. ಅವರನ್ನು ಮನೆ ಒಳಗೆ ಇರುವ ಜೈಲಿಗೆ ಕಳುಹಿಸುವಂತೆ ನಿಧಿ ಸುಬ್ಬಯ್ಯ ಆಗ್ರಹಿಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಜೈಲು ಇರುವ ವಿಚಾರ ಗೊತ್ತೇ ಇದೆ. ಏನಾದರೂ ತಪ್ಪು ಮಾಡಿದರೆ ಅಥವಾ ಬಿಗ್​ ಬಾಸ್​ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ ಈ ಜೈಲಿನೊಳಗೆ ಹಾಕಲಾಗುತ್ತದೆ. ಬಿಗ್​ ಬಾಸ್​ ಮನೆಯೇ ಒಂದು ಜೈಲಿನ ರೀತಿ ಇದ್ದರೆ, ಅದಕ್ಕೂ ಒಂದು ಹೆಜ್ಜೆ ಮುಂದೆ ಎಂಬಂತಿದೆ ಈ ಜೈಲು. ಪ್ರಶಾಂತ್​ ಅವರನ್ನು ಈ ಜೈಲಿಗೆ ಹಾಕಿ ಎನ್ನುವ ಬೇಡಿಕೆ ನಿಧಿ ಅವರದ್ದು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ನಿಧಿ ಹಾಗೂ ಅರವಿಂದ್​ ನಿನ್ನೆ ಕ್ಯಾಮೆರಾ ಎದುರು ಬಂದಿದ್ದರು. ಈ ವೇಳೆ, ನನಗೆ ಸ್ವಿಮ್ಮಿಂಗ್​ ಫೂಲ್​ನ ಟಾಸ್ಕ್​ ಮಾಡಿ ನೆಗಡಿ ಆಗಿದೆ. ಕಾಫಿ ಕುಡಿಯೋಣ ಎಂದರೆ ಕಾಫಿ ಪೌಡರ್​ ಇಲ್ಲ. ಪ್ರಶಾಂತ್​ ಅವರು ಕಾಫಿ ಪೌಡರ್​ ಖಾಲಿ ಮಾಡಿದ್ದಾರೆ. ಅಗತ್ಯ ಬಿದ್ದರೆ ಅವರನ್ನು ಜೈಲಿಗೆ ಹಾಕಿ. ನಮಗೆ ಕಾಫಿ ಪೌಡರ್​ ಕಳುಹಿಸಿ ಎಂದಿದ್ದಾರೆ.

ಒಂದೊಮ್ಮೆ ನಿಧಿ ಇಟ್ಟ ಬೇಡಿಕೆ ಪ್ರಶಾಂತ್​ ಅವರಿಗೆ ಗೊತ್ತಾದರೆ ಬಿಗ್ ಬಾಸ್​ ಮನೆಯಲ್ಲಿ ದೊಡ್ಡ ಜಗಳ ನಡೆಯೋದು ಗ್ಯಾರಂಟಿ. ನಿನ್ನೆ ನಡೆದ ಸಣ್ಣ ವಿಚಾರಕ್ಕೆ ಬ್ರೋ ಗೌಡ ಜತೆ ಪ್ರಶಾಂತ್​ ಕಾಲ್ಕೆರುದುಕೊಂಡು ಜಗಳಕ್ಕೆ ಹೋಗಿದ್ದರು. ಹೀಗಿರುವಾಗ ನಿಧಿ ತಮ್ಮನ್ನು ಜೈಲಿಗೆ ಕಳುಹಿಸುವಂತೆ ಕೋರಿದ್ದು ಗೊತ್ತಾದರೆ ಪ್ರಶಾಂತ್​ ಮತ್ತೆ ಕೂಗಾಡುವುದರಲ್ಲಿ  ಅನುಮಾನವಿಲ್ಲ.

ಇದನ್ನೂ ಓದಿ: BBK8: ಬಿಗ್​ ಬಾಸ್​ ಮೊದಲ ವಾರದಲ್ಲಿ ಹೊರ ಹೋಗೋದು ಶುಭಾ ಪೂಂಜಾ? ಮೂರನೇ ದಿನ ಹೊಸ ಟ್ವಿಸ್ಟ್​

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ