AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Sambargi: ಪ್ರಶಾಂತ್​ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್​ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ

ಪ್ರಶಾಂತ್​ ಅವರನ್ನು ಈ ಜೈಲಿಗೆ ಹಾಕಿ ಎನ್ನುವ ಬೇಡಿಕೆ ನಿಧಿ ಅವರದ್ದು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

Prashanth Sambargi: ಪ್ರಶಾಂತ್​ ಸಂಬರಗಿಯನ್ನು ಜೈಲಿಗೆ ಕಳುಹಿಸಿ: ಬಿಗ್ ಬಾಸ್​ ಎದುರು ಹೊಸ ಬೇಡಿಕೆ ಇಟ್ಟ ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on: Mar 04, 2021 | 12:45 PM

Share

ಬಿಹ್​ ಬಾಸ್​ ಮನೆ ಒಳಗೆ ತೆರಳಿರುವ 17 ಸ್ಪರ್ಧಿಗಳ ಅಸಲಿ ಮುಖ ಈಗ ಬಯಲಾಗುತ್ತಿದೆ. ಕೆಲವರು ತುಂಬಾನೇ ಸಾಫ್ಟ್​ ತರ ಕಂಡರೂ ಮನೆ ಒಳಗೆ ಸಖತ್​ ರಫ್​-ಆ್ಯಂಡ್​ ಟಫ್​. ಮನೆ ಹೊರಗೆ ತುಂಬಾನೇ ಅಬ್ಬರ ಮಾಡಿದವರು ಮನೆ ಒಳಗೆ ತುಂಬಾನೇ ಸೈಲೆಂಟ್​. ಆದರೆ, ಮನೆ ಒಳಗೂ ಹೊರಗೂ ಒಂದೇ ತರ ಇದ್ದವರು ಪ್ರಶಾಂತ್​ ಸಂಬರಗಿ. ಸಾಕಷ್ಟು ವಿವಾದಗಳಿಂದಲೇ ಸುದ್ದಿಯಾಗಿದ್ದ ಅವರು, ಈಗ ಮನೆ ಒಳಗೂ ಜಗಳಕ್ಕೆ ಕಾರಣರಾಗುತ್ತಿದ್ದಾರೆ. ಅವರನ್ನು ಮನೆ ಒಳಗೆ ಇರುವ ಜೈಲಿಗೆ ಕಳುಹಿಸುವಂತೆ ನಿಧಿ ಸುಬ್ಬಯ್ಯ ಆಗ್ರಹಿಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಜೈಲು ಇರುವ ವಿಚಾರ ಗೊತ್ತೇ ಇದೆ. ಏನಾದರೂ ತಪ್ಪು ಮಾಡಿದರೆ ಅಥವಾ ಬಿಗ್​ ಬಾಸ್​ ನಿಯಮಗಳನ್ನು ಪಾಲನೆ ಮಾಡದೆ ಇದ್ದರೆ ಈ ಜೈಲಿನೊಳಗೆ ಹಾಕಲಾಗುತ್ತದೆ. ಬಿಗ್​ ಬಾಸ್​ ಮನೆಯೇ ಒಂದು ಜೈಲಿನ ರೀತಿ ಇದ್ದರೆ, ಅದಕ್ಕೂ ಒಂದು ಹೆಜ್ಜೆ ಮುಂದೆ ಎಂಬಂತಿದೆ ಈ ಜೈಲು. ಪ್ರಶಾಂತ್​ ಅವರನ್ನು ಈ ಜೈಲಿಗೆ ಹಾಕಿ ಎನ್ನುವ ಬೇಡಿಕೆ ನಿಧಿ ಅವರದ್ದು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ನಿಧಿ ಹಾಗೂ ಅರವಿಂದ್​ ನಿನ್ನೆ ಕ್ಯಾಮೆರಾ ಎದುರು ಬಂದಿದ್ದರು. ಈ ವೇಳೆ, ನನಗೆ ಸ್ವಿಮ್ಮಿಂಗ್​ ಫೂಲ್​ನ ಟಾಸ್ಕ್​ ಮಾಡಿ ನೆಗಡಿ ಆಗಿದೆ. ಕಾಫಿ ಕುಡಿಯೋಣ ಎಂದರೆ ಕಾಫಿ ಪೌಡರ್​ ಇಲ್ಲ. ಪ್ರಶಾಂತ್​ ಅವರು ಕಾಫಿ ಪೌಡರ್​ ಖಾಲಿ ಮಾಡಿದ್ದಾರೆ. ಅಗತ್ಯ ಬಿದ್ದರೆ ಅವರನ್ನು ಜೈಲಿಗೆ ಹಾಕಿ. ನಮಗೆ ಕಾಫಿ ಪೌಡರ್​ ಕಳುಹಿಸಿ ಎಂದಿದ್ದಾರೆ.

ಒಂದೊಮ್ಮೆ ನಿಧಿ ಇಟ್ಟ ಬೇಡಿಕೆ ಪ್ರಶಾಂತ್​ ಅವರಿಗೆ ಗೊತ್ತಾದರೆ ಬಿಗ್ ಬಾಸ್​ ಮನೆಯಲ್ಲಿ ದೊಡ್ಡ ಜಗಳ ನಡೆಯೋದು ಗ್ಯಾರಂಟಿ. ನಿನ್ನೆ ನಡೆದ ಸಣ್ಣ ವಿಚಾರಕ್ಕೆ ಬ್ರೋ ಗೌಡ ಜತೆ ಪ್ರಶಾಂತ್​ ಕಾಲ್ಕೆರುದುಕೊಂಡು ಜಗಳಕ್ಕೆ ಹೋಗಿದ್ದರು. ಹೀಗಿರುವಾಗ ನಿಧಿ ತಮ್ಮನ್ನು ಜೈಲಿಗೆ ಕಳುಹಿಸುವಂತೆ ಕೋರಿದ್ದು ಗೊತ್ತಾದರೆ ಪ್ರಶಾಂತ್​ ಮತ್ತೆ ಕೂಗಾಡುವುದರಲ್ಲಿ  ಅನುಮಾನವಿಲ್ಲ.

ಇದನ್ನೂ ಓದಿ: BBK8: ಬಿಗ್​ ಬಾಸ್​ ಮೊದಲ ವಾರದಲ್ಲಿ ಹೊರ ಹೋಗೋದು ಶುಭಾ ಪೂಂಜಾ? ಮೂರನೇ ದಿನ ಹೊಸ ಟ್ವಿಸ್ಟ್​

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ