ಲಾಕ್‌ಡೌನ್ ಉಲ್ಲಂಘಿಸಿ ಮದುವೆಗೆ ಸಿದ್ಧತೆ, ಮಧ್ಯರಾತ್ರಿ ರೆಸಾರ್ಟ್​ಗೆ ಸ್ಥಳೀಯರ ಮುತ್ತಿಗೆ

ದೇವನಹಳ್ಳಿ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಮದುವೆಗೆ ಸಿದ್ಧತೆ ನಡೆಸಿದ್ದಾರೆಂದು ಆರೋಪಿಸಿ ಯಲಹಂಕ ಬಳಿಯ ರಮಡಾ ರೆಸಾರ್ಟ್‌ಗೆ ಮಧ್ಯರಾತ್ರಿ ಸ್ಥಳೀಯರು ಮತ್ತಿಗೆ ಹಾಕಿರುವ ಘಟನೆ ನಡೆದಿದೆ. ಮದುವೆಗಾಗಿ ರೆಸಾರ್ಟ್​ಗೆ ಕಾರುಗಳಲ್ಲಿ ಜನರು ಆಗಮಿಸಿದ್ದರು. ವಿಚಾರ ತಿಳಿದ ತಕ್ಷಣ ಸ್ಥಳೀಯರು ಮತ್ತಿಗೆ ಹಾಕಿ ಮದುವೆ ನಿಲ್ಲಿಸಿದ್ದಾರೆ. ಈ ವೇಳೆ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರು ಗ್ರಾಮಸ್ಥರ ಮೇಲೆ ಕಾರು ಹತ್ತಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ. ಆಗ ಕಾರಿನ ಗ್ಲಾಸ್​ ಅನ್ನು ಗ್ರಾಮಸ್ಥರು ಪುಡಿ ಪುಡಿ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣಾ […]

ಲಾಕ್‌ಡೌನ್ ಉಲ್ಲಂಘಿಸಿ ಮದುವೆಗೆ ಸಿದ್ಧತೆ, ಮಧ್ಯರಾತ್ರಿ ರೆಸಾರ್ಟ್​ಗೆ ಸ್ಥಳೀಯರ ಮುತ್ತಿಗೆ
ಸಾಧು ಶ್ರೀನಾಥ್​

Updated on: Apr 22, 2020 | 12:09 PM

ದೇವನಹಳ್ಳಿ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಮದುವೆಗೆ ಸಿದ್ಧತೆ ನಡೆಸಿದ್ದಾರೆಂದು ಆರೋಪಿಸಿ ಯಲಹಂಕ ಬಳಿಯ ರಮಡಾ ರೆಸಾರ್ಟ್‌ಗೆ ಮಧ್ಯರಾತ್ರಿ ಸ್ಥಳೀಯರು ಮತ್ತಿಗೆ ಹಾಕಿರುವ ಘಟನೆ ನಡೆದಿದೆ. ಮದುವೆಗಾಗಿ ರೆಸಾರ್ಟ್​ಗೆ ಕಾರುಗಳಲ್ಲಿ ಜನರು ಆಗಮಿಸಿದ್ದರು. ವಿಚಾರ ತಿಳಿದ ತಕ್ಷಣ ಸ್ಥಳೀಯರು ಮತ್ತಿಗೆ ಹಾಕಿ ಮದುವೆ ನಿಲ್ಲಿಸಿದ್ದಾರೆ.

ಈ ವೇಳೆ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರು ಗ್ರಾಮಸ್ಥರ ಮೇಲೆ ಕಾರು ಹತ್ತಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ. ಆಗ ಕಾರಿನ ಗ್ಲಾಸ್​ ಅನ್ನು ಗ್ರಾಮಸ್ಥರು ಪುಡಿ ಪುಡಿ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.


Published On - 12:04 pm, Wed, 22 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us