ನಿಗಮ, ಮಂಡಳಿಗಳ ಅಧ್ಯಕ್ಷರು ಈಗ ಸಂಪುಟ ದರ್ಜೆ ಸಚಿವರಿಗೆ ಸಮಾನರು!

ಪ್ರಾಯಶಃ ಇಂಥದೊಂದು ನಿರ್ಧಾರ ಕರ್ನಾಟಕ ಸರ್ಕಾರ ತೆಗೆದುಕೊಳ್ಳಬಹುದೆಂಬ ನಿರೀಕ್ಷೆ ಜನರಲ್ಲಿ ಅದರಲ್ಲೂ ವಿಶೇಷವಾಗಿ ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕರಿಗಿತ್ತು. ಅವರನ್ನು ಸಂತೋಷವಾಗಿರಿಸುವುದು ಸರ್ಕಾರದ ಆದ್ಯತೆಗಳಲ್ಲೊಂದಾಗಿದೆ.

ನಿಗಮ, ಮಂಡಳಿಗಳ ಅಧ್ಯಕ್ಷರು ಈಗ ಸಂಪುಟ ದರ್ಜೆ ಸಚಿವರಿಗೆ ಸಮಾನರು!
ವಿಧಾನಸೌಧ
ಅರುಣ್​ ಕುಮಾರ್​ ಬೆಳ್ಳಿ

Updated on: Dec 16, 2020 | 9:11 PM

ಬೆಂಗಳೂರು: ರಾಜ್ಯದ ಹಲವು ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊಸ ವರ್ಷದ ಉಡುಗೊರೆ ನೀಡಿದ್ದಾರೆ. 2020 ಮುಗಿಯಲು ಇನ್ನೂ 15 ದಿನ ಬಾಕಿಯಿರುವಾಗಲೇ ಈ ಘೋಷಣೆ ಹೊರಬಿದ್ದಿದೆ.

ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕರೆಲ್ಲ ಇನ್ನು ಮುಂದೆ ಸಂಪುಟ ದರ್ಜೆಯ ಸ್ಥಾನಮಾನವನ್ನು ಹೊಂದಲಿದ್ದಾರೆ. ಈ ಕುರಿತು ಸರ್ಕಾರ ಈಗಾಗಲೇ ಆದೇಶವನ್ನು ಹೊರಡಿಸಿದೆ. ಸದರಿ ಆದೇಶದ ಮತ್ತೊಂದು ಗಮನಾರ್ಹ ಅಂಶವೆಂದರೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಿಗೂ ಈ ಸೌಲಭ್ಯವನ್ನು ವಿಸ್ತರಿಸಲಾಗಿದೆ.

ಪ್ರಾಯಶಃ ಇಂಥದೊಂದು ನಿರ್ಧಾರ ಕರ್ನಾಟಕ ಸರ್ಕಾರ ತೆಗೆದುಕೊಳ್ಳಬಹುದೆಂಬ ನಿರೀಕ್ಷೆ ಜನರಲ್ಲಿ ಅದರಲ್ಲೂ ವಿಶೇಷವಾಗಿ ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕರಿಗಿತ್ತು. ಅವರನ್ನು ಸಂತೋಷವಾಗಿರಿಸುವುದು ಸರ್ಕಾರದ ಆದ್ಯತೆಗಳಲ್ಲೊಂದಾಗಿದೆ.

Published On - 9:09 pm, Wed, 16 December 20

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us