AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ರಾಜಕೀಯ ನಿವೃತ್ತಿ ಸುದ್ದಿ ಹುಟ್ಟಿದ್ದು ಹೇಗೆ?

ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರು ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬ ಸುದ್ದಿ ಮಾರ್ಚ್ 6ನೇ ತಾರೀಕಿನಿಂದ ಹರಿದಾಡುವುದಕ್ಕೆ ಆರಂಭವಾದದ್ದು ಏಕೆ ಎಂಬುದಕ್ಕೆ ಈ ವರದಿಯಲ್ಲಿ ಉತ್ತರ ಇದೆ.

ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ರಾಜಕೀಯ ನಿವೃತ್ತಿ ಸುದ್ದಿ ಹುಟ್ಟಿದ್ದು ಹೇಗೆ?
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ
Srinivas Mata
|

Updated on:Mar 07, 2021 | 12:38 PM

Share

ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರು ಅನಾರೋಗ್ಯದ ಕಾರಣಕ್ಕಾಗಿ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಿವೃತ್ತಿಗೆ ಆಲೋಚನೆ ಮಾಡಿದ್ದರು ಎಂಬ ಪ್ರಕಟಣೆಯೊಂದು ಇದೀಗ ಸಂಸದರು ರಾಜಕೀಯ ನಿವೃತ್ತಿ ಪಡೆದೇ ಬಿಡುತ್ತಾರೆ ಎಂಬ ಸುದ್ದಿ ಆಗುವಂತೆ ಮಾಡಿದೆ. ಆದರೆ ಆ ಪ್ರಕಟಣೆಯಲ್ಲಿ, ಕಾಲು- ಬೆನ್ನು ನೋವು ತೀವ್ರವಾಗಿರುವುದರಿಂದ ಸಾರ್ವಜನಿಕ ಕಾರ್ಯಕ್ರಮಗಳಿಂದ ಸಂಸದರು ದೂರವಿದ್ದಾರೆ ಎಂದು ಅನಂತಕುಮಾರ್ ಹೆಗಡೆ ಅವರ ಆಪ್ತಸಹಾಯಕ ಸ್ಪಷ್ಟನೆ ನೀಡಿದ್ದಾರೆ, ಅಷ್ಟೇ.

ಮಾಧ್ಯಮಗಳಿಗೆ ಆಪ್ತ ಸಹಾಯಕ ಸುರೇಶ್ ಶೆಟ್ಟಿ ಅವರು ಬಿಡುಗಡೆ ಮಾಡಿದ ಯಥಾವತ್ ಒಕ್ಕಣೆ ಹೀಗಿದೆ:

ಮಾನ್ಯರೇ, ಮಾನ್ಯ ಸಂಸದರಾದ ಶ್ರೀ ಅನಂತಕುಮಾರ ಹೆಗಡೆಯವರು ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಇದೇ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು. ಅದಾಗ್ಯೂ ಕಳೆದ ಲೋಕಸಭಾ ಚುನಾವಣೆಯ ನಂತರದಿಂದ ಹೆಚ್ಚಿನ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರವಿರುತ್ತಿದ್ದರು. ಇತ್ತೀಚೆಗೆ ಕೆಲವು ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ತಜ್ಙರು ತಕ್ಷಣವೇ ಸೂಕ್ತ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದರು. ಇದೀಗ ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರ ಚಿಕಿತ್ಸೆಯ ನಂತರ ಮಾನ್ಯ ಸಂಸದರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಹಾಗೂ ವೈದ್ಯರು ದೀರ್ಘಾವಧಿಯ ವಿಶ್ರಾಂತಿಯನ್ನು ಪಡೆಯುಲು ಸೂಚಿಸಿರುವ ಹಿನ್ನೆಲೆಯಲ್ಲಿ ಪೂರ್ಣವಾಗಿ ಗುಣಮುಖರಾಗುವವರೆಗೆ ಕೆಲ ಕಾಲ ಮಾನ್ಯ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಧನ್ಯವಾದಗಳೊಂದಿಗೆ, ಸುರೇಶ ಶೆಟ್ಟಿ

ಈ ವಿಚಾರ ಮಾಧ್ಯಮಗಳ ಕೈ ತಲುಪುತ್ತಿದ್ದಂತೆ ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ ಪಡೆಯುತ್ತಾರಂತೆ ಎಂಬ ಸುದ್ದಿಯಾಗಿದೆ. ಇಲ್ಲಿರುವ ಒಕ್ಕಣೆಯ ಪ್ರಕಾರ, ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿಲ್ಲ ಎಂದು ಇದೆಯೇ ವಿನಾ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂದೇನೂ ಇಲ್ಲ. ರಾಜಕೀಯ ನಿವೃತ್ತಿ ಪಡೆಯುವುದಕ್ಕೆ ಈ ಹಿಂದೆ ಆಲೋಚನೆ ಮಾಡಿದ್ದರು ಎಂದಷ್ಟೇ ಇದೆ.

ಅನಂತಕುಮಾರ್ ಹೆಗಡೆ ಪರಿಚಯ: ಅನಂತಕುಮಾರ್ ಹೆಗಡೆ ಜನಿಸಿದ್ದು ಉತ್ತರ ಕನ್ನಡದ ಶಿರಸಿಯಲ್ಲಿ, ಮೇ 20, 1968ರಲ್ಲಿ. ಅವರಿಗೆ ಈಗ 52 ವರ್ಷ ವಯಸ್ಸು. 1996ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಉತ್ತರಕನ್ನಡ ಕ್ಷೇತ್ರದಿಂದ ಆಯ್ಕೆಯಾದರು. ಆನಂತರ 1998ರಲ್ಲಿ ಪುನರಾಯ್ಕೆಯಾದರು. 1999ರ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್​ನ ಮಾರ್ಗರೇಟ್ ಆಳ್ವಾ ಅವರಿಂದ ಸೋಲನುಭವಿಸಿದರು. ಇದಾದ ಮೇಲೆ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಆಯ್ಕೆ ಆಗಿದ್ದಾರೆ. 2017ರ ಸೆಪ್ಟೆಂಬರ್​​ನಿಂದ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಖಾತೆ ಸಚಿವರಾಗಿದ್ದರು. ಅಂದ ಹಾಗೆ ಹೆಗಡೆ ಅವರು ಕದಂಬ ಎಂಬ ಸಂಘಟನೆ ಆರಂಭಿಸಿದ್ದು, ಹಲವು ಸಾಮಾಜಿಕ ಆರ್ಥಿಕ ಚಟುವಟಿಕೆಗಳಲ್ಲಿ ಆ ಸಂಘಟನೆಯು ತೊಡಗಿಕೊಂಡಿದೆ.

ಸಾಲು ಸಾಲು ವಿವಾದ: ಅನಂತಕುಮಾರ ಹೆಗಡೆ ವಿರುದ್ಧ ಆರೋಪಗಳು ಹಾಗೂ ವಿವಾದಗಳು ಸಾಕಷ್ಟಿವೆ. 2017ರ ಜನವರಿಯಲ್ಲಿ ತಮ್ಮ ತಾಯಿ ಸರಿಯಾದ ಚಿಕಿತ್ಸೆ ದೊರೆಯಲಿಲ್ಲ ಎಂದು ಆರೋಪಿಸಿ, ವೈದ್ಯರ ಮೇಲೆ ಹಲ್ಲೆ ಮಾಡಿದ್ದು ಸಿ.ಸಿ. ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇನ್ನು 2018ರಲ್ಲಿ, ಸಂವಿಧಾನದಲ್ಲಿ ಇರುವ ಜಾತ್ಯತೀತ ಎಂಬ ಪದವನ್ನು ಬಿಜೆಪಿಯಿಂದ ಬದಲಾಯಿಸಲಾಗುವುದು. ನಾವು ಅಧಿಕಾರಕ್ಕೆ ಬಂದಿರುವುದು ಅದಕ್ಕೇ ಎಂಬ ಹೇಳಿಕೆ ನೀಡಿದ್ದು ವಿವಾದವಾಗಿತ್ತು. 2019ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್​ನಲ್ಲಿ ಮಾತ್ರ ಕಾಣಸಿಗುವಂಥ ಹೈಬ್ರಿಡ್ ಪ್ರಾಡಕ್ಟ್ ಎಂದು ಹೀಗಳೆದಿದ್ದರು. 2020ರ ಫೆಬ್ರವರಿಯಲ್ಲಿ, ಮಹಾತ್ಮ ಗಾಂಧಿ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ನಾಟಕ ಹಾಗೂ ಗಾಂಧಿಯಂಥ ವ್ಯಕ್ತಿಯನ್ನು ಮಹಾತ್ಮ ಎಂದು ಕರೆಯಲು ಹೇಗೆ ಸಾಧ್ಯ? ಭಾರತದಲ್ಲಿನ ಸ್ವಾತಂತ್ರ್ಯ ಚಳವಳಿ ನಡೆದಿದ್ದು ಬ್ರಿಟಿಷರ ಸಹಮತಿ ಹಾಗೂ ಬೆಂಬಲದೊಂದಿಗೆ ಎನ್ನುವ ಮೂಲಕ ಕಿಡಿ ಹೊತ್ತಿಸಿದ್ದರು.

ಇಷ್ಟೇ ಅಲ್ಲ, ಇನ್ನೂ ಸಾಕಷ್ಟು ವಿವಾದಗಳು ಅವರ ಮೇಲೆ ಇದೆ. ಆದರೆ ಬಿಜೆಪಿ ವಲಯದೊಳಗೆ “ಹಿಂದೂ ಫೈರ್ ಬ್ರ್ಯಾಂಡ್” ಎಂಬ ಹಣೆಪಟ್ಟಿ ಅವರ ಪಾಲಿಗಿದೆ. ವೈಯಕ್ತಿಕ ಬದುಕಿನ ಬಗ್ಗೆ ಹೇಳುವುದಾದರೆ ಅನಂತಕುಮಾರ್ ಹೆಗಡೆ ತಂದೆ ಹೆಸರು ದತ್ತಾತ್ರೇಯ ಹೆಗಡೆ, ತಾಯಿ ಶ್ರೀರೂಪಾ ಹೆಗಡೆ. ಹನ್ನೆರಡನೇ ತರಗತಿ (ಸೆಕೆಂಡ್ ಪಿಯುಸಿ) ತನಕ ವ್ಯಾಸಂಗ ಮಾಡಿರುವ ಅನಂತಕುಮಾರ್ ಹೆಗಡೆಗೆ ಪತ್ನಿ, ಒಬ್ಬ ಮಗ ಹಾಗೂ ಮಗಳು ಇದ್ದಾರೆ.

ಇದನ್ನೂ ಓದಿ: ಗಾಂಧಿ ವಿರೋಧಿ ಹೇಳಿಕೆ: ಸ್ಪಷ್ಟನೆ ನೀಡುವಂತೆ ಸ್ವಪಕ್ಷದಿಂದಲೇ ಹೆಗಡೆಗೆ ನೋಟಿಸ್

Published On - 12:27 pm, Sun, 7 March 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ