ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ವಿಚಾರಣೆಗೆ CCB ಬುಲಾವ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಯುವತಿಯ ಹೆಸರು ಕೇಳಿಬಂದಿದೆ. ಈ ನಿಟ್ಟಿನಲ್ಲಿ ಯುವತಿಗೆ CCB ಅಧಿಕಾರಿಗಳು ವಿಚಾರಣೆ ನಡೆಸಿದರು. ನಟಿ ರಾಗಿಣಿ ಪ್ರಕರಣಕ್ಕೆ ಲಿಂಕ್ ಇರುವ ಕಾರಣದಿಂದಾಗಿ ಪೃಥ್ವಿ ಶೆಟ್ಟಿ ಎಂಬ ಯುವತಿಗೆ CCB ಅಧಿಕಾರಿಗಳು WhatsApp ಮೂಲಕ ನೋಟಿಸ್ ರವಾನಿಸಿದ್ದರು. ಹೀಗಾಗಿ, ಇಂದು ಪೃಥ್ವಿ ಶೆಟ್ಟಿ ವಿಚಾರಣೆಗೆ ಹಾಜರಾಗಿದ್ದರು. ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಸೇರಿ ಇಬ್ಬರು ಯುವತಿಯರನ್ನ ವಿಚಾರಣೆ ಮಾಡಲಾಗುತ್ತಿದೆ. ಸದ್ಯ HSR ಲೇಔಟ್‌ನಲ್ಲಿ ನೆಲೆಸಿರುವ ಪೃಥ್ವಿ […]

ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ವಿಚಾರಣೆಗೆ CCB ಬುಲಾವ್
ಸಾಧು ಶ್ರೀನಾಥ್​

Updated on: Sep 06, 2020 | 4:15 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಯುವತಿಯ ಹೆಸರು ಕೇಳಿಬಂದಿದೆ. ಈ ನಿಟ್ಟಿನಲ್ಲಿ ಯುವತಿಗೆ CCB ಅಧಿಕಾರಿಗಳು ವಿಚಾರಣೆ ನಡೆಸಿದರು. ನಟಿ ರಾಗಿಣಿ ಪ್ರಕರಣಕ್ಕೆ ಲಿಂಕ್ ಇರುವ ಕಾರಣದಿಂದಾಗಿ ಪೃಥ್ವಿ ಶೆಟ್ಟಿ ಎಂಬ ಯುವತಿಗೆ CCB ಅಧಿಕಾರಿಗಳು WhatsApp ಮೂಲಕ ನೋಟಿಸ್ ರವಾನಿಸಿದ್ದರು. ಹೀಗಾಗಿ, ಇಂದು ಪೃಥ್ವಿ ಶೆಟ್ಟಿ ವಿಚಾರಣೆಗೆ ಹಾಜರಾಗಿದ್ದರು.

ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಸೇರಿ ಇಬ್ಬರು ಯುವತಿಯರನ್ನ ವಿಚಾರಣೆ ಮಾಡಲಾಗುತ್ತಿದೆ. ಸದ್ಯ HSR ಲೇಔಟ್‌ನಲ್ಲಿ ನೆಲೆಸಿರುವ ಪೃಥ್ವಿ ಶೆಟ್ಟಿ ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಐಷಾರಾಮಿ ಪಾರ್ಟಿಗಳು ಹಾಗೂ ಮಂಗಳೂರಿನಲ್ಲಿ ನಡೆಯುತ್ತಿದ್ದ ಪಾರ್ಟಿಗಳಿಗೂ ಡ್ರಗ್ಸ್ ಸಪ್ಲೈ ಮಾಡುತ್ತಿದ್ದಳಂತೆ.

Published On - 3:29 pm, Sun, 6 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us